ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ 2024ರ ಜಂಬೂ ಸವಾರಿ ಮೆರವಣಿಗೆಯಲ್ಲಿ ಭಾಗವಹಿಸುವ ಗಜಪಡೆಯ ಮೊದಲ 9 ಆನೆಗಳಿಗೆ ನಾಳೆ (ಆಗಸ್ಟ್ 21) ವೀರನಹೊಸಳ್ಳಿಯಲ್ಲಿ ಪೂಜೆ ಸಲ್ಲಿಸುವ ಮೂಲಕ ಗಜಪಯಣಕ್ಕೆ ಚಾಲನೆ ನೀಡಲಾಗುತ್ತದೆ.
ನಂತರ ಮೈಸೂರಿಗೆ ಆಗಮಿಸಲಿದ್ದು, ಗಜ ಪಯಣದ ಕುರಿತು ಮೈಸೂರು ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ. ಪ್ರಭುಗೌಡ ಐ. ಬಿ. ಅವರು ಮಾಧ್ಯಮಗೋಷ್ಟಿಯಲ್ಲಿ ಹೇಳಿದರು.
ಅಭಿಮನ್ಯು ನೇತೃತ್ವದ 9 ಗಜಗಳ ಪಡೆಯನ್ನು ಬೆಳಗ್ಗೆ 10.20 ರಿಂದ 10.45 ವರಗಿನ ತುಲಾ ಲಗ್ನದಲ್ಲಿ ಪೂಜೆ ಸಲ್ಲಿಸುವ ಮೂಲಕ ಗಜಪಡೆಗೆ ಸಾಂಪ್ರದಾಯಿಕ ಪೂಜೆ ಸಲ್ಲಿಸಲಾಗುವುದು. ಗಜ ಪಡೆಯನ್ನು ದಸರಾಗೆ ಸ್ವಾಗತ ಮಾಡುವ ಮೂಲಕ ದಸರಾ 2024 ರ ಕಾರ್ಯಕ್ರಮಗಳಿಗೆ ಅಧಿಕೃತ ಚಾಲನೆ ಸಿಗಲಿದೆ.
ಇದಾದ ಬಳಿಕ ವೀರನಹೊಸಳ್ಳಿಯಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್.ಸಿ. ಮಹದೇವಪ್ಪ, ಅರಣ್ಯ ಸಚಿವ ಈಶ್ವರ್ ಖಂಡ್ರೆ ಸೇರಿದಂತೆ ಹಲವು ಗಣ್ಯರು ಬಾಗಿಯಾಗಲಿದ್ದಾರೆ. ವೇದಿಕೆ ಕಾರ್ಯಕ್ರಮದಲ್ಲಿ ಆನೆ ಮಾವುತರಿಗೆ, ಕಾವಾಡಿಗಳಿಗೆ ಸನ್ಮಾನ ಮಾಡಲಾಗುತ್ತದೆ.
ಈ ಬಾರಿ ದಸರಾದಲ್ಲಿ 14 ಆನೆಗಳು ಭಾಗಿ: ಈ ಬಾರಿ ನಾಡ ಹಬ್ಬ ದಸರಾದಲ್ಲಿ ಒಟ್ಟು 14 ಆನೆಗಳು ಭಾಗವಹಿಸಲಿವೆ. ಮೊದಲ ಹಂತದಲ್ಲಿ ಅಭಿಮನ್ಯು ನೇತೃತ್ವದ 9 ಆನೆಗಳು ಹಾಗೂ 2ನೇ ಹಂತದಲ್ಲಿ 5 ಆನೆಗಳು ಆಗಮಿಸಲಿವೆ. ಹೆಚ್ಚುವರಿಯಾಗಿ 4 ಮೀಸಲು ಆನೆಗಳನ್ನು ಆಯ್ಕೆ ಮಾಡಲಾಗಿದ್ದು , ಅಗತ್ಯವಿದ್ದರೆ ಮೀಸಲು ಆನೆಗಳನ್ನ ಕರೆದುಕೊಂಡು ಬರಲು ತೀರ್ಮಾನಿಸಲಾಗಿದೆ. ಗಜ ಪಯಾಣದ ಮೂಲಕ 9 ಆನೆಗಳು ಮೈಸೂರಿಗೆ ಬರಲಿವೆ. ಆಗಸ್ಟ್ 23 ರಂದು ಈ 9 ಆನೆಗಳನ್ನು ಅರಮನೆಗೆ ಬರಮಾಡಿಕೊಳ್ಳಲಾಗುವುದು. ಆಗಸ್ಟ್ 21 ರಿಂದ 23ರ ವರೆಗೆ ಅಂದ್ರೆ 2 ದಿನಗಳ ಕಾಲ 9 ಆನೆಗಳು ಅರಣ್ಯ ಭವನದಲ್ಲಿ ವಾಸ್ತವ್ಯ ಹೊಡಲಿವೆ.
ನಾಡಹಬ್ಬಕ್ಕೆ ಆಗಮಿಸುವ ಆನೆಗಳ ವಿವರ: ಅಭಿಮನ್ಯು (58), ಭೀಮ (24), ಗೋಪಿ (41), ಧನಂಜಯ (43), ಕಂಜನ್ (25), ರೋಹಿಣಿ (22), ಲಕ್ಷ್ಮೀ (53), ವರಲಕ್ಷ್ಮಿ (67), ಏಕಲವ್ಯ (38) ಆನೆಗಳು ಮೊದಲ ಗಜಪಯಾಣದಲ್ಲಿ ಮೈಸೂರಿಗೆ ಬರಲಿವೆ.
ಅರ್ಜುನನ ಬದಲು ಏಕಲವ್ಯ: ಈ ಕುರಿತು ಮಾಹಿತಿ ನೀಡಿದ ಡಿಸಿಎಫ್ ಪ್ರಭುಗೌಡ, ದಸರಾದ ಪ್ರಮುಖ ಆಕರ್ಷಣೆಯಾಗಿದ್ದ ಅರ್ಜುನ ಆನೆ ಅಕಾಲಿಕ ಮರಣದ ಹಿನ್ನೆಲೆಯಲ್ಲಿ ಅರ್ಜುನನ ಬದಲಾಗಿ ಏಕಲವ್ಯ ಹೆಸರಿನ ಆನೆ ಮೊದಲ ಬಾರಿಗೆ ದಸರಾದಲ್ಲಿ ಭಾಗವಹಿಸಲಿದೆ. ಈ ಏಕಲವ್ಯ ಆನೆಯನ್ನು 2018 ರಲ್ಲಿ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಬಳಿ ಸೆರೆ ಹಿಡಿಯಲಾಗಿತ್ತು. ಈ ಆನೆಯನ್ನು ಮತ್ತಿಗೋಡು ಆನೆ ಶಿಬಿರದಲ್ಲಿ ಪಳಗಿಸಲಾಗಿದೆ ಎಂದರು.
2 ನೇ ಹಂತದ 5 ಆನೆಗಳು 10 ದಿನಗಳ ನಂತರ ಅರಮನೆಗೆ ಆಗಮಿಸಲಿದೆ. 2ನೇ ಹಂತದಲ್ಲಿ ಪ್ರಶಾಂತ್, ಮಹೇಂದ್ರ, ಸುಗ್ರೀವಾ, ಲಕ್ಷ್ಮೀ ಹಾಗೂ ಹಿರಣ್ಯ ಆನೆಗಳು ಆಗಮಿಸಲಿವೆ. ಎಲ್ಲಾ ಆನೆಗಳನ್ನು ತೂಕ ಮಾಡಿ, ಬಳಿಕ ಪ್ರತಿನಿತ್ಯ ಅರಮನೆಯಿಂದ ಬನ್ನಿಮಂಟಪದವರೆಗೆ ದಸರಾ ತಾಲೀಮು ನಡೆಸಲಾಗುವುದು ಎಂದು ವಿವರಿಸಿದರು.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.