ಬೆಂಗಳೂರು: ರಾಜ್ಯದ ಕಾರಾಗೃಹಗಳಲ್ಲಿ ಗನ್, ಗಾಂಜಾ ಮತ್ತು ಬುಲೆಟ್ ಪೂರೈಕೆಯಾಗುತ್ತಿದೆ ಮತ್ತು ಹಣ ವಸೂಲಾತಿಗೆ ಜೈಲು ಅಧಿಕಾರಿಗಳೇ ಕೈದಿಗಳಿಗೆ ಸುಪಾರಿ ನೀಡುತ್ತಿದ್ದಾರೆ ಎಂಬುದಾಗಿ ವಕೀಲರೊಬ್ಬರು ಹೈಕೋರ್ಟ್ ಪೀಠದ ಮುಂದೆ ಗಂಭೀರವಾದ ಆರೋಪ ಮಾಡಿದ್ದಾರೆ. ಇದನ್ನು ಕೇಳಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಅಚ್ಚರಿ ವ್ಯಕ್ತಪಡಿಸಿ, ಜೈಲಿನಲ್ಲಿ ಗನ್, ಗಾಂಜಾ ಮತ್ತು ಬುಲೆಟ್ ಪೂರೈಕೆ ಯಾಗುತ್ತಿರುವ ಬಗ್ಗೆ ಪರಿಶೀಲನೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಮೌಖಿಕ ಸೂಚನೆ ನೀಡಿದ್ದಾರೆ.
ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಚಾರಣಾಧೀನ ಕೈದಿಯೊಬ್ಬರಿಗೆ ಮನೆ ಊಟ ಪೂರೈಸಲು ಅನುಮತಿ ನೀಡುವಂತೆ ಜೈಲು ಅಧೀಕ್ಷಕರಿಗೆ ನಿರ್ದೇಶನ ನೀಡಬೇಕು ಎಂದು ಕೈದಿಯ ಸಂಬಂಧಿಕರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಗೆ ಪರ ವಕೀಲ ಸಿರಾಜುದ್ದೀನ್ ಅಹ್ಮದ್ ಹಾಜರಾಗಿ, ತಮ್ಮ ಕಕ್ಷಿದಾರನ ಅಳಿಯ ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಚಾರಣಾಧೀನ ಕೈದಿಯಾಗಿದ್ದಾರೆ. ಅವರಿಗೆ ಮನೆ ಊಟ ಪೂರೈಸಲು ಅನುಮತಿ ನೀಡಲು ಕೋರಿ ಜೈಲು ಅಧೀಕ್ಷಕರು, ಕಾರಾಗೃಹ ಇಲಾಖೆಯ ಡಿಜಿಪಿಗೆ ಮನವಿ ಮಾಡಲಾಗಿದೆ. ಆದರೆ, ಮನೆ ಊಟ ಸರಬರಾಜು ಮಾಡಲು ಅನುಮತಿ ನೀಡಿದರೆ, ಜೈಲಿನ ಭದ್ರತೆಗೆ ತೊಂದರೆಯಾಗುತ್ತದೆ ಎಂಬ ಕಾರಣ ನೀಡಲಾಗುತ್ತಿದೆ. ಬಳ್ಳಾರಿ, ಬೆಳಗಾವಿ, ಚಿತ್ರದುರ್ಗದ ಜೈಲಿನಲ್ಲಿ ಕೈದಿಗಳಿಗೆ ಮನೆ ಊಟ ಸರಬರಾಜು ಮಾಡಲು ಅನುಮತಿ ನೀಡಲಾಗುತ್ತಿದೆ. ಆದರೆ, ಬೆಂಗಳೂರು ಜೈಲಿನಲ್ಲಿ ಬಿಡುತ್ತಿಲ್ಲ. ಅಲ್ಲದೆ, ರಾಜ್ಯದ ಜೈಲುವೊಂದರ ಒಳಗಡೆಗೆ ನಿಷೇಧಿತ ವಸ್ತುಗಳನ್ನು ಪೂರೈಕೆ ಮಾಡಲಾಗುತ್ತಿದೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು.
ಅದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿಗಳು ನಿಷೇಧಿತ ವಸ್ತುಗಳು ಅಂದರೆ ಯಾವುವು? ಎಂದು ಕೇಳಿದರು. ಸಿರಾಜುದ್ದೀನ್ ಅಹ್ಮದ್ ಉತ್ತರಿಸಿ, ಮೊಬೈಲ್, ಗಾಂಜಾ, ಗನ್ ಮತ್ತು ಬುಲೆಟ್ ಅನ್ನು ಜೈಲಿನ ಒಳಗಡೆಗೆ ಜೈಲು ಅಧಿಕಾರಿಗಳೇ ಪೂರೈಸುತ್ತಿದ್ದಾರೆ. ಆ ಕುರಿತು ಕೈದಿಯೊಬ್ಬರು ತನ್ನ ಪತ್ನಿಗೆ ಮಾಹಿತಿ ನೀಡಿದ್ದಾರೆ. ಕೈದಿಯ ಪತ್ನಿಯು ಕಾರಾಗೃಹ ಡಿಜಿಪಿಗೆ ಇ-ಮೇಲ್ ಮೂಲಕ ದೂರು ನೀಡಿದ್ದಾರೆ. ಇದರಿಂದ ಕೈದಿಯನ್ನು ಏಕಾಂತ ಸೆರೆಮನೆ ವಾಸಕ್ಕೆ ದೂಡಲಾಗಿದೆ. ಇನ್ನು ಕಾರಾಗೃಹದ ಜೈಲರ್ ಒಬ್ಬರು ಕೈದಿಗಳಿಗೆ ಸುಪಾರಿ ನೀಡುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.
ಈ ಆರೋಪ ಕೇಳಿದ ನ್ಯಾಯಮೂರ್ತಿಗಳು, ಸುಪಾರಿಯೇ? ಎಂದು ಅಚ್ಚರಿ ವ್ಯಕ್ತಪಡಿಸಿದರು. ಅಲ್ಲದೆ, ಊಟದ ವ್ಯಾಪ್ತಿಯನ್ನು ನೀವು ವಿಸ್ತರಣೆ ಮಾಡುತ್ತಿದ್ದೀರಿ ಎಂದು ಹಾಸ್ಯದ ಧಾಟಿಯಲ್ಲಿ ಹೇಳಿದರು. ನಂತರ ರಾಜ್ಯ ಸರ್ಕಾರಿ ಅಭಿಯೋಜಕರನ್ನು ಉದ್ದೇಶಿಸಿ ಮಾತನಾಡಿದ ನ್ಯಾಯಮೂರ್ತಿಗಳು, ಎಸ್ಪಿಪಿ ಅವರೇ ಏನಿದು ಕಾರಾಗೃಹದಲ್ಲಿ ಹಳೆಯಕಾಲದ ಸಮಸ್ಯೆಗಳು? ಎಂದು ಪ್ರಶ್ನಿಸಿದರು. ಅದಕ್ಕೆ ಅರ್ಜಿದಾರರ ಪರ ವಕೀಲರು, ಇದು ಸಾಂಪ್ರದಾಯಿಕ ಸಮಸ್ಯೆಗಳು ಎಂದರಲ್ಲದೆ, ಪ್ರಕರಣದ ಕುರಿತು ಹೆಚ್ಚಿನ ವಿವರ ನ್ಯಾಯಪೀಠಕ್ಕೆ ನೀಡಲು ಮುಂದಾದರು.
ಸಾಂಪ್ರದಾಯಿಕ ಪದ ಕೇಳಿ ನಗಾಡಿದ ನ್ಯಾಯಮೂರ್ತಿಗಳು, ಸದ್ಯ ನಿಮ್ಮ ಅರ್ಜಿ ವಿಚಾರಣೆಗೆ ಬಂದಿಲ್ಲವಲ್ಲವೇ. ನಿಮ್ಮ ಅರ್ಜಿ ವಿಚಾರಣೆಗೆ ಬಂದ ದಿನದಂದು ವಾದ ಮಂಡಿಸಿ. ಈಗ ಬೇಡ ಎಂದು ಅರ್ಜಿದಾರರ ಪರ ವಕೀಲರಿಗೆ ಮೌಖಿಕವಾಗಿ ಸೂಚಿಸಿದರು. ನಂತರ ವಕೀಲ ಸಿರಾಜುದ್ದಿನ್ ಅಹ್ಮದ್ ಆರೋಪಿಸಿರುವಂತೆ ಕಾರಾಗೃಹದಲ್ಲಿ ಗನ್, ಗಾಂಜಾ ಮತ್ತು ಬುಲೆಟ್ ಪೂರೈಕೆಯಾಗುತ್ತಿದೆಯೇ ಎಂಬ ಬಗ್ಗೆ ಪರಿಶೀಲನೆ ನಡೆಸುವಂತೆ ವಿಚಾರಣೆಗೆ ಹಾಜರಿದ್ದ ರಾಜ್ಯ ಸರ್ಕಾರಿ ಅಭಿಯೋಜಕರಿಗೆ ನ್ಯಾಯಮೂರ್ತಿಗಳು ಸೂಚಿಸಿದರು. ಜೊತೆಗೆ, ಸಿರಾಜುದ್ದಿನ್ ಅಹ್ಮದ್ ವಕಾಲತ್ತು ವಹಿಸಿರುವ ಅರ್ಜಿಯ ವಿಚಾರಣೆಯನ್ನು ಸೆ.5ಕ್ಕೆ ನಿಗದಿಪಡಿಸಿ ಆದೇಶಿಸಿದರು.
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅರೆಕಾಲಿಕ ಅತಿಥಿ ಉಪನ್ಯಾಸಕರ ಭರ್ತಿ
ಈರುಳ್ಳಿ ಮೇಲಿರುವ ಕಪ್ಪು ಚುಕ್ಕೆ ತರುತ್ತೆ ಆಪತ್ತು ಆರೋಗ್ಯಕ್ಕೆ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.