ಮನೆ ರಾಜ್ಯ 7 ದಿನಗಳ ಒಳಗೆ ಕ್ಷಮೆಯಾಚಿಸುವಂತೆ ಎಂ ಲಕ್ಷ್ಮಣ್‌ಗೆ ಶಾಸಕ ಟಿ.ಎಸ್. ಶ್ರೀವತ್ಸ ವಕೀಲರಿಂದ ನೋಟಿಸ್‌

7 ದಿನಗಳ ಒಳಗೆ ಕ್ಷಮೆಯಾಚಿಸುವಂತೆ ಎಂ ಲಕ್ಷ್ಮಣ್‌ಗೆ ಶಾಸಕ ಟಿ.ಎಸ್. ಶ್ರೀವತ್ಸ ವಕೀಲರಿಂದ ನೋಟಿಸ್‌

0

ಮೈಸೂರು: ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್​ ಅವರಿಗೆ ಬಿಜೆಪಿ ಶಾಸಕ ಟಿ.ಎಸ್. ಶ್ರೀವತ್ಸ ಅವರು ತಮ್ಮ ವಕೀಲರ ಮೂಲಕ ನೋಟಿಸ್ ಕಳುಹಿಸಿ ಎಚ್ಚರಿಕೆ ನೀಡಿದ್ದಾರೆ.

Join Our Whatsapp Group

ಕಾಂಗ್ರೆಸ್​​ ಹಾಗೂ ಬಿಜೆಪಿ ನಾಯಕರು ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಸುತ್ತಿರುವ ವಾಕ್ಸಮರ ಮತ್ತೊಂದು ಹಂತಕ್ಕೆ ತಲುಪಿದೆ. ಶಾಸಕ ಟಿ. ಎಸ್​. ಶ್ರೀವತ್ಸ ಪರ ವಕೀಲರು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್​ ಅವರಿಗೆ ಕಾನೂನು ಕ್ರಮದ ನೋಟಿಸ್​ ಜಾರಿ ಮಾಡಿದ್ದಾರೆ.

ಇತ್ತೀಚಿಗೆ ಎಂ.‌ ಲಕ್ಷ್ಮಣ್​ ಅವರು ಮಾಧ್ಯಮಗೋಷ್ಟಿ ನಡೆಸಿ ಶಾಸಕ ಟಿ. ಎಸ್. ಶ್ರೀವತ್ಸ ವಿರುದ್ಧ ವೈಯಕ್ತಿಕವಾಗಿ ವಾಗ್ದಾಳಿ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಶಾಸಕರ ಪರ ವಕೀಲ ವಿ. ರವಿಕುಮಾರ್​ ಎಂ. ಲಕ್ಷ್ಮಣ್​ ಅವರಿಗೆ ನೋಟಿಸ್ ನೀಡಿದ್ದಾರೆ.

“7 ದಿನಗಳ ಒಳಗೆ ಈ ಬಗ್ಗೆ ಸಾರ್ವಜನಿಕವಾಗಿ ಕ್ಷಮೆ ಯಾಚಿಸಬೇಕು. ಇಲ್ಲವಾದಲ್ಲಿ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಲಾಗುವುದು” ಎಂದು ನೋಟಿಸ್‌ನಲ್ಲಿ ಎಚ್ಚರಿಕೆ ನೀಡಿದ್ದಾರೆ.