ಬೆಂಗಳೂರು: ಸೆಪ್ಟೆಂಬರ್ 1ಕ್ಕೆ ಸಿಇಟಿ/ನೀಟ್ ಸೀಟು ಹಂಚಿಕೆ ಫಲಿತಾಂಶ ಪ್ರಕಟಿಸಲಿದ್ದು, ಅದಕ್ಕೂ ಮುನ್ನ ಆಗಸ್ಟ್ 25ರ ರಾತ್ರಿ 8ಕ್ಕೆ ಎರಡನೇ ಅಣಕು ಸೀಟು ಹಂಚಿಕೆಯ ಫಲಿತಾಂಶ (ಯುಜಿ ಸಿಇಟಿ/ನೀಟ್) ಪ್ರಕಟಿಸಲಾಗುತ್ತದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.
ಮೊದಲ ಸುತ್ತಿನ ವೈದ್ಯಕೀಯ, ದಂತ ವೈದ್ಯಕೀಯ, ಆಯುಷ್ ಕೋರ್ಸುಗಳ ಪ್ರವೇಶಕ್ಕೆ ಆಪ್ಷನ್ (ಆಯ್ಕೆ/ಇಚ್ಛೆ) ಗಳನ್ನು ದಾಖಲಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಂಗಳವಾರ ರಾತ್ರಿ ತನ್ನ ವೆಬ್ ಸೈಟ್ ನಲ್ಲಿ ಪೋರ್ಟಲ್ ತೆರೆದಿದೆ. ನಾಳೆ (ಆ. 22ರ) ಬೆಳಗ್ಗೆ 10ರ ವರೆಗೆ ಅಭ್ಯರ್ಥಿಗಳು ತಮಗೆ ಇಚ್ಛೆಗೆ ಅನುಸಾರ ಇರುವ ಕಾಲೇಜು ಮತ್ತು ಕೋರ್ಸ್ ಗಳನ್ನು ಆಯ್ಕೆ ಮಾಡಿಕೊಳ್ಳಬಹುದು. ಈ ಸಂಬಂಧ ಇದೇ ಮೊದಲ ಬಾರಿಗೆ ಅಭ್ಯರ್ಥಿಗಳ ನೋಂದಾಯಿತ ಮೊಬೈಲ್ ಗೆ ವಾಟ್ಸ್ಅಪ್ ಸಂದೇಶ ಕೂಡ ರವಾನಿಸುವ ವ್ಯವಸ್ಥೆ ಆರಂಭಿಸಲಾಗಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್ ಪ್ರಸನ್ನ ಅವರು ಪತ್ರಿಕಾ ಪ್ರಕಟಣೆಯಲ್ಲಿ ಹೇಳಿದ್ದಾರೆ.
ಇದೇ ಸಂದರ್ಭದಲ್ಲಿ ಎಂಜಿನಿಯರಿಂಗ್ ಹಾಗೂ ಇತರೆ ಕೋರ್ಸುಗಳಿಗೂ ಆಪ್ಷನ್ (ಆಯ್ಕೆ) ಗಳನ್ನು ದಾಖಲಿಸಲು ಅವಕಾಶ ಇರುತ್ತದೆ ಎಂದು ಅವರು ವಿವರಿಸಿದ್ದಾರೆ.
ಆ. 25 ರಂದು ಅಣಕು ಸೀಟು ಹಂಚಿಕೆ; ಆಗಸ್ಟ್ 25ರ ರಾತ್ರಿ 8ಕ್ಕೆ ಎರಡನೇ ಅಣಕು ಸೀಟು ಹಂಚಿಕೆಯ ಫಲಿತಾಂಶ (ಯುಜಿ ಸಿಇಟಿ/ನೀಟ್) ಪ್ರಕಟಿಸಲಾಗುತ್ತದೆ. ನಂತರ ಆಗಸ್ಟ್ 27ರ ಬೆಳಗ್ಗೆ 11ರ ವರೆಗೆ ಇಚ್ಛೆಗಳನ್ನು ಬದಲಿಸಿಕೊಳ್ಳಬಹುದು. ಸೆಪ್ಟೆಂಬರ್ 1ರಂದು ಸಂಜೆ 6ಕ್ಕೆ ನೈಜ ಸೀಟು ಹಂಚಿಕೆಯ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ಅವರು ವಿವರಿಸಿದ್ದಾರೆ.
ವೆಬ್ ಸೈಟ್ನಲ್ಲಿ ಪ್ರಕಟಿಸಲಾದ ಸೀಟ್ ಮ್ಯಾಟ್ರಿಕ್ಸ್ ಅನ್ನು ಪರಿಶೀಲಿಸಿ ಇಚ್ಛೆ / ಆಯ್ಕೆಗಳನ್ನು ದಾಖಲಿಸುವ ಸಮಯದಲ್ಲಿ ಆದ್ಯತಾ ಕ್ರಮಗಳನ್ನು ಅನುಸರಿಸಲು ಸೂಚಿಸಲಾಗಿದೆ. ಹಾಗೆಯೇ ಕಾಲೇಜು ಶುಲ್ಕದ ಮಾಹಿತಿ ಕೂಡ ಇದ್ದು, ಅದನ್ನೂ ಗಮನಿಸಿಯೇ ಕಾಲೇಜುಗಳನ್ನು ಆಯ್ಕೆ ಮಾಡಿಕೊಳ್ಳಿ ಎಂದೂ ಹೆಚ್ ಪ್ರಸನ್ನ ಅವರು ಸಲಹೆ ನೀಡಿದ್ದಾರೆ.
ಆಪ್ಷನ್ ಗಳನ್ನು ದಾಖಲಿಸುವ ಬಗ್ಗೆ, ಸೀಟು ಹಂಚಿಕೆಯ ವಿವಿಧ ಹಂತಗಳ ಕುರಿತು ವಿವರವಾದ ಮಾಹಿತಿಗಾಗಿ ಅಭ್ಯರ್ಥಿಗಳು ಯುಜಿಸಿಇಟಿ-24ರ ಸೀಟು ಹಂಚಿಕೆಯ ಮಾಹಿತಿ ಪುಸ್ತಕದಲ್ಲಿ ನೀಡಿರುವ ಸೂಚನೆಗಳನ್ನು ಓದಿಕೊಂಡೇ ಮುಂದಡಿ ಇಡಬೇಕು ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ವಿವರಿಸಿದ್ದಾರೆ.
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅರೆಕಾಲಿಕ ಅತಿಥಿ ಉಪನ್ಯಾಸಕರ ಭರ್ತಿ
ಈರುಳ್ಳಿ ಮೇಲಿರುವ ಕಪ್ಪು ಚುಕ್ಕೆ ತರುತ್ತೆ ಆಪತ್ತು ಆರೋಗ್ಯಕ್ಕೆ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.