ಮೈಸೂರು : ನಾಗರಹೊಳೆಯ ವೀರನಹೊಸಹಳ್ಳಿ ಗೆಟ್ ಬಳಿ ನಾಡಹಬ್ಬ ದಸರಾ ಮಹೋತ್ಸವದ ಆಕರ್ಷಣೆಯಾದ ಜಂಬೂಸವಾರಿ ಇಂದು ಅಭಿಮನ್ಯು ನೇತೃತ್ವದ 9 ಗಜಗಳ ಪಡೆಗೆ ಮೈಸೂರು ಅರಮನೆ ಪುರೋಹಿತರು ತುಲಾ ಲಗ್ನದಲ್ಲಿ ಪೂಜೆ ಸಲ್ಲಿಸುವ ಮೂಲಕ ಅರಣ್ಯ ಇಲಾಖೆ ಸಚಿವರಾದ ಈಶ್ವರ ಖಂಡ್ರೆ ಹಾಗೂ ಉಸ್ತುವಾರಿ ಸಚಿವ ಎಚ್ ಸಿ ಮಹದೇವಪ್ಪ ಸಾಂಪ್ರದಾಯಿಕವಾಗಿ ಚಾಲನೆ ನೀಡಿದರು.
ಮೊದಲ ಹಂತದಲ್ಲಿ ಒಟ್ಟು ಒಂಭತ್ತು ಆನೆಗಳು ಗಜಪಯಣದ ಮೂಲಕ ಮೈಸೂರಿಗೆ ತೆರಳುತ್ತಿದ್ದು, ವಿಶ್ವ ವಿಖ್ಯಾತ 414 ನೇ ಮೈಸೂರು ದಸರಾ ಜಂಬೂ ಸವಾರಿ ಮೆರವಣಿಗೆಯಲ್ಲಿ ಭಾಗವಹಿಸಲಿವೆ.
ದಸರಾದಲ್ಲಿ ಒಟ್ಟು 14 ಆನೆಗಳು ಭಾಗಿ:ಈ ಬಾರಿ ನಾಡ ಹಬ್ಬ ದಸರಾದಲ್ಲಿ ಒಟ್ಟು 14 ಆನೆಗಳು ಭಾಗವಹಿಸಲಿವೆ. ಮೊದಲ ಹಂತದಲ್ಲಿ ಅಭಿಮನ್ಯು ನೇತೃತ್ವದ 9 ಆನೆಗಳು ಹಾಗೂ 2ನೇ ಹಂತದಲ್ಲಿ 5 ಆನೆಗಳು ಮೈಸೂರಿಗೆ ಆಗಮಿಸಲಿವೆ. ಅಲ್ಲದೆ ಹೆಚ್ಚುವರಿಯಾಗಿ 4 ಮೀಸಲು ಆನೆಗಳನ್ನು ಆಯ್ಕೆ ಮಾಡಲಾಗಿದ್ದು, ಅಗತ್ಯವಿದ್ದರೆ ಮೀಸಲು ಆನೆಗಳನ್ನ ಬಳಸಿಕೊಳ್ಳಲು ಇಲಾಖೆ ತೀರ್ಮಾನಿಸಿದೆ.ಆಗಸ್ಟ್ 23 ರಂದು ಈ 9 ಆನೆಗಳನ್ನು ಅರಮನೆಗೆ ಬರಮಾಡಿಕೊಳ್ಳಲಾಗುವುದು. ಆಗಸ್ಟ್ 21 ರಿಂದ 23ರ ವರೆಗೆ ಅಂದ್ರೆ 2 ದಿನಗಳ ಕಾಲ 9 ಆನೆಗಳು ಮೈಸೂರಿನ ಅರಣ್ಯ ಭವನದಲ್ಲಿ ವಾಸ್ತವ್ಯ ಹೊಡಲಿವೆ.
ನಾಡಹಬ್ಬಕ್ಕೆ ಆಗಮಿಸುವ ಆನೆಗಳ ವಿವರ
ಅಭಿಮನ್ಯು (58), ಭೀಮ (24), ಗೋಪಿ (41), ಧನಂಜಯ (43), ಕಂಜನ್ (25), ರೋಹಿಣಿ (22), ಲಕ್ಷ್ಮೀ (53), ವರಲಕ್ಷ್ಮಿ (67), ಏಕಲವ್ಯ (38) ಆನೆಗಳು ಮೊದಲ ಗಜಪಯಣದಲ್ಲಿ ಮೈಸೂರಿಗೆ ಬರಲಿವೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.