ಕವೀಶ್ ಶೆಟ್ಟಿ ಮತ್ತು ಮೇಘಾ ಶೆಟ್ಟಿ ಕಾಂಬಿನೇಷನ್ನಿನ ಕನ್ನಡ, ಮರಾಠಿ, ಹಿಂದಿ, ತೆಲುಗು, ತಮಿಳು ಹಾಗೂ ಮಲಯಾಳಂ ಭಾಷೆಗಳಲ್ಲಿ ನಿರ್ಮಾಣವಾಗುತ್ತಿರುವ ‘ಆಪರೇಷನ್ ಲಂಡನ್ ಕೆಫೆ’ ಚಿತ್ರದ ಚಿತ್ರೀಕರಣ ಈಗಾಗಲೇ ಮುಕ್ತಾಯಗೊಂಡು ಪೋಸ್ಟ್ ಪ್ರೊಡಕ್ಷನ್ ಕೆಲಸ ಬಿರುಸಿನಿಂದ ಸಾಗಿದೆ. ಆರಂಭದಿಂದಲೂ ಸಾಕಷ್ಟು ಕುತೂಹಲ ಮೂಡಿಸಿರುವ ಈ ಚಿತ್ರದ ಟೀಸರ್ ಬಿಡುಗಡೆಯಾಗಿ ಸೋಷಿಯಲ್ ಮೀಡಿಯಾದಲ್ಲಿ ಪ್ರೇಕ್ಷಕರಿಂದ ಭರ್ಜರಿ ಫಲಿತಾಂಶವನ್ನು ಕಾಣುತ್ತಿದೆ. ಟೀಸರ್ ಬಿಡುಗಡೆ ಮಾಡಿದ ಚಿತ್ರತಂಡ ಇದೆ ಮೊದಲ ಬಾರಿ ಪತ್ರಿಕಾಗೋಷ್ಠಿಯಲ್ಲಿ ಚಿತ್ರದ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿ ಹಂಚಿಕೊಂಡಿದೆ.
ಮೊದಲು ಮಾತನಾಡಿದ ನಿರ್ದೇಶಕ ಸಡಗರ ರಾಘವೇಂದ್ರ, ನಾನು ಕನ್ನಡದ ಹೆಸರಾಂತ ನಿರ್ದೇಶಕರ ಜೊತೆ ಹಲವಾರು ವರ್ಷಗಳಿಂದ ಕೆಲಸ ಮಾಡಿದ ನಂತರ ಇದೇ ಮೊದಲ ಬಾರಿಗೆ ತನ್ನ ಚೊಚ್ಚಲ ಚಿತ್ರದ ನಿರ್ದೇಶನ ಮಾಡಿದ್ದೇನೆ. ಈ ಚಿತ್ರದ ನಾಯಕನಾಗಿ ನಟಿಸಿರುವ ಕವೀಶ್ ಶೆಟ್ಟಿ ಈ ಅವಕಾಶವನ್ನು ಕಲ್ಪಿಸಿಕೊಟ್ಟಿದ್ದಾರೆ. ಇದೊಂದು ನಕ್ಸಲಿಸಂ ಬೇಸಾಗಿಟ್ಟಿಕೊಂಡು ಹೆಣೆದಿರುವ ಕಥೆ. ಹಾಗಂತ ನಕ್ಸಲಿಸಂನ ವೈಭವಿಕರಿಸಿಲ್ಲ. ಯಾವುದೇ ಒಬ್ಬ ವ್ಯಕ್ತಿಯ ಕುರಿತಾದ ಚಿತ್ರವೂ ಇದಲ್ಲ. ಇದು ಆಫ್ಟರ್ “ಆಪರೇಷನ್ ಲಂಡನ್ ಕೆಫೆ”.
“ಮುಂಗಾರು ಮಳೆ 2” ಚಿತ್ರದಿಂದ ನನ್ನ ಸಿನಿ ಜರ್ನಿ ಆರಂಭವಾಯಿತು. ನಂತರ 2020 ರಲ್ಲಿ “ಜಿಲ್ಕಾ” ಚಿತ್ರದಲ್ಲಿ ನಟಿಸಿದ್ದೆ. ಸಡಗರ ರಾಘವೇಂದ್ರ ಅವರ ಕಾರ್ಯವೈಖರಿಯನ್ನು ಹತ್ತಿರದಿಂದ ಕಂಡಿದ್ದ ನನಗೆ ಅವರ ಮೊದಲ ನಿರ್ದೇಶನದಲ್ಲಿ ನನ್ನದೊಂದು ಚಿತ್ರ ಮಾಡುವ ಆಸೆಯಿತ್ತು. ಈ ಚಿತ್ರದ ಮೂಲಕ ಅದು ಈಡೇರಿದೆ. ವಿಜಯ ಕುಮಾರ್ ಶೆಟ್ಟಿ, ರಮೇಶ್ ಕೊಠಾರಿ, ಹವರಾಲ್ ಹಾಗೂ ದೀಪಕ್ ರಾಣೆ ಈ ಚಿತ್ರ ನಿರ್ಮಾಣ ಮಾಡಿದ್ದಾರೆ. ಮೇಘಾ ಶೆಟ್ಟಿ ನಾಯಕಿಯಾಗಿ ಅಭಿನಯಿಸಿದ್ದಾರೆ ಎಂದು ನಾಯಕ ಕವೀಶ್ ಶೆಟ್ಟಿ ತಿಳಿಸಿದರು
ನಾನು ಮರಾಠಿ ಕಲಿತು ಈ ಚಿತ್ರದಲ್ಲಿ ಅಭಿನಯಿಸಿದ್ದೇನೆ. ನಿರ್ದೇಶಕರಾಗಿ ಸಡಗರ ರಾಘವೇಂದ್ರ ಅವರು ತಮ್ಮ ಮೊದಲ ನಿರ್ದೇಶನದಲ್ಲೇ ಉತ್ತಮವಾಗಿ ಕೆಲಸ ಮಾಡಿದ್ದಾರೆ. ಒಳ್ಳೆಯ ತಂಡದ ಜೊತೆಗೆ ಕೆಲಸ ಮಾಡಿರುವ ಖುಷಿಯಿದೆ ಎಂದರು ಮೇಘಾ ಶೆಟ್ಟಿ.
ಛಾಯಾಗ್ರಾಹಕ ಎನ್ ಡಿ ನಾಗಾರ್ಜುನ್, ಸಾಹಸ ನಿರ್ದೇಶಕ ಮಾಸ್ ಮಾದ ಹಾಗೂ ಚಿತ್ರದಲ್ಲಿ ನಟಿಸಿರುವ ಅರ್ಜುನ್ ಕಾಪಿಕ್ಕಾಡ್, ವಿರಾಟ್ ಮಡಕೆ ಮುಂತಾದವರು “ಆಪರೇಷನ್ ಲಂಡನ್ ಕೆಫೆ” ಹಾಗೂ ತಮ್ಮ ಪಾತ್ರದ ಬಗ್ಗೆ ಮಾತನಾಡಿ, ಚಿತ್ರದ ಮೇಕಿಂಗ್ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅರೆಕಾಲಿಕ ಅತಿಥಿ ಉಪನ್ಯಾಸಕರ ಭರ್ತಿ
ಈರುಳ್ಳಿ ಮೇಲಿರುವ ಕಪ್ಪು ಚುಕ್ಕೆ ತರುತ್ತೆ ಆಪತ್ತು ಆರೋಗ್ಯಕ್ಕೆ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.