ಮನೆ ಅಪರಾಧ ದೇವಸ್ಥಾನದ ವಿಚಾರವಾಗಿ ದಾಯಾದಿಗಳ ನಡುವೆ ಕಲಹ: ವ್ಯಕ್ತಿ ಮೇಲೆ ಮಾರಾಕಾಸ್ತ್ರಗಳಿಂದ ಹಲ್ಲೆ

ದೇವಸ್ಥಾನದ ವಿಚಾರವಾಗಿ ದಾಯಾದಿಗಳ ನಡುವೆ ಕಲಹ: ವ್ಯಕ್ತಿ ಮೇಲೆ ಮಾರಾಕಾಸ್ತ್ರಗಳಿಂದ ಹಲ್ಲೆ

0

ಪಾಂಡವಪುರ: ದೇವಸ್ಥಾನದ ವಿಚಾರವಾಗಿ ದಾಯಾದಿಗಳ ನಡುವೆ ಕಲಹ ಏರ್ಪಟ್ಟಿದ್ದು, ಬುಕ್ ಸ್ಟೋರ್ ಗೆ ನುಗ್ಗಿ ದೊಡ್ಡಪ್ಪನ ಮೇಲೆ ಮಾರಾಕಸ್ತ್ರಗಳಿಂದ ಹಲ್ಲೆ ನಡೆಸಿರುವ ಘಟನೆ ಪಾಂಡವಪುರ ಪಟ್ಟಣದಲ್ಲಿ ನಡೆದಿದೆ.

Join Our Whatsapp Group

ಪರಶಿವಮೂರ್ತಿ  ಎಂಬುವವರು ಹಲ್ಲೆಗೊಳಗಾದ ವ್ಯಕ್ತಿ.

ಪರಶಿವಮೂರ್ತಿ ಸೋದರನ ಮಗ ಲಿಖಿತ್ ಕುಮಾರ್ ಎಂಬಾತ ಸ್ನೇಹಿತರೊಂದಿಗೆ ಬಂದು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾನೆ.

ಗಾಯಾಳುವನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪಾಂಡವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.