ಮನೆ ಅಪರಾಧ ನವವಿವಾಹಿತೆಯ ದಾರುಣ ಹತ್ಯೆ: ಪತಿ ಪೊಲೀಸ್ ವಶಕ್ಕೆ

ನವವಿವಾಹಿತೆಯ ದಾರುಣ ಹತ್ಯೆ: ಪತಿ ಪೊಲೀಸ್ ವಶಕ್ಕೆ

0

ಕೋಟ: ಕೇವಲ 8 ತಿಂಗಳ ಹಿಂದೆ ವಿವಾಹವಾಗಿದ್ದ ಮಹಿಳೆಯೋರ್ವರು ದಾರುಣವಾಗಿ ಹತ್ಯೆಗೀಡಾದ ಘಟನೆ ಸಾಲಿಗ್ರಾಮದ ಕಾರ್ಕಡ ಕಡಿದ್ ಹೆದ್ದಾರಿಯಲ್ಲಿ ಆ.23ರ ಶುಕ್ರವಾರ ಬೆಳಗಿನ ಜಾವ ಸಂಭವಿಸಿದೆ.

Join Our Whatsapp Group

ಮೂಲತಃ ಕೊಪ್ಪಳದ ನಿವಾಸಿ ಜಯಶ್ರೀ ಹತ್ಯೆಗೀಡಾದವರು.

ಜಯಶ್ರೀಗೆ ಗುಂಡ್ಮಿ ಗ್ರಾಮದ ಕಿರಣ್ ಉಪಾಧ್ಯ ಅವರೊಂದಿಗೆ 8 ತಿಂಗಳ ಹಿಂದೆ ವಿವಾಹವಾಗಿತ್ತು. ವಿವಾಹದ ನಂತರ ಇವರಿಬ್ಬರು ಕಾರ್ಕಡದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.

ಕೌಟುಂಬಿಕ ಕಲಹದಿಂದ ಪತಿ ಕಿರಣ್ ಈ ಹತ್ಯೆ ನಡೆಸಿದ್ದಾನೆ ಎನ್ನಲಾಗಿದ್ದು, ಕೋಟ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.