ಮೈಸೂರು:- ಶಾಲಾ- ಕಾಲೇಜಿನ ಸುತ್ತ-ಮುತ್ತ 100 ಮೀಟರ್ ವ್ಯಾಪ್ತಿಯಲ್ಲಿ ತಂಬಾಕು ಹಾಗೂ ಇನ್ನಿತರ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿರುವುದು ಕಂಡುಬಂದರೆ ಅಂತಹ ವ್ಯಕ್ತಿ ಅಥವಾ ಅಂಗಡಿಯ ಮಾಲೀಕರ ವಿರುದ್ಧ ಕಠಿಣ ಕ್ರಮ ಕೈಗೊಳಲಾಗುವುದು ಎಂದು ಅಪರ ಜಿಲ್ಲಾಧಿಕಾರಿಗಳಾದ ಡಾ. ಪಿ ಶಿವರಾಜು ಅವರು ಎಚ್ಚರಿಕೆ ನೀಡಿದರು.
ಇಂದು ಜಿಲ್ಲಾಧಿಕಾರಿಗಳ ಕಛೇರಿಯ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ “ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನ ಸಭೆ”ಯಲ್ಲಿ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಶಾಲಾ-ಕಾಲೇಜಿನ ಮಕ್ಕಳು ತಂಬಾಕು ಸೇವನೆಗೆ ಒಳಗಾಗುತ್ತಿದ್ದಾರೆ. ಕಾರಣ ಸುತ್ತ – ಮುತ್ತ ಇರುವ ಪೆಟ್ಟಿ ಅಂಗಡಿಗಳು ಹಾಗೂ ವ್ಯಕ್ತಿಗಳು ಯಾರಿಗೂ ತಿಳಿಯದಂತೆ ಅವುಗಳನ್ನು ಮಕ್ಕಳಿಗೆ ಮಾರಾಟ ಮಾಡಿ. ಮಕ್ಕಳನ್ನು ವ್ಯಸನಿಗಳನ್ನಾಗಿ ಮಾಡುತ್ತಿದ್ದಾರೆ. ಅಂತಹವರನ್ನು ಗುರುತಿಸಿ ಕಠಿಣ ಶಿಕ್ಷೆ ಹಾಗೂ ದಂಡವನ್ನು ವಿಧಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಅಲ್ಲದೆ ಅಧಿಕಾರಿಗಳು ಶಾಲಾ ಕಾಲೇಜುಗಳಿಗೆ ಭೇಟಿ ನೀಡಿ ತಂಬಾಕು ಸೇವನೆಯ ಸಂಬಂಧ ಕಾರ್ಯಕ್ರಮಗಳನ್ನು ರೂಪಿಸಿ ಮಕ್ಕಳಿಗೆ ಅವುಗಳ ಮೂಲಕ ಜಾಗೃತಿ ಮೂಡಿಸಬೇಕು. ಇದನ್ನು ಅಧಿಕಾರಿಗಳು ನಿರ್ಲಕ್ಷಿಸದರೆ ಮುಂದೆ ನಮ್ಮ ಮಕ್ಕಳೇ ಚಟಕ್ಕೆ ಬಲಿಯಾಗುವ ಸಾಧ್ಯತೆಗಳಿರುತ್ತವೆ. ಹಾಗಾಗಿ ಇಂದಿನಿಂದಲೇ ನಿಯಮ ಬಾಹಿರ ತಂಬಾಕು ಮಾರಾಟ ಹಾಗೂ ಸೇವನೆಯನ್ನು ತಡೆಗಟ್ಟಲು ಮುಂದಾಗಬೇಕು ಎಂದು ಹೇಳಿದರು.
ಕಾನೂನು ಬಾಹಿರವಾಗಿ ತಂಬಾಕು ಮಾರಾಟ ಮಾಡುತ್ತಿರುವಂತಹ ಅಂಗಡಿಯ ಪರವಾನಗಿಯನ್ನು ರದ್ದು ಮಾಡಿ, ಅಂಗಡಿ ಮಾಲೀಕನಿಗೆ ದಂಡವನ್ನು ವಿಧಿಸಬೇಕು. ಸಾರ್ವಜನಿಕವಾಗಿ ತಂಬಾಕು ಸೇವನೆ ಮಾಡುವವರಿಗೆ ದಂಡ ಹಾಕಬೇಕು ಇದರ ಬಗ್ಗೆ ಅರಿವು ಮೂಡಿಸಬೇಕು ಎಂದು ತಿಳಿಸಿದರು.
ಪ್ರಸ್ತುತ ಜಿಲ್ಲೆಯ ತಂಬಾಕು ಸೇವನೆಯ ಪ್ರಮಾಣದಲ್ಲಿ ನಾವು ನಿಯಂತ್ರಣದ ಹಂತದಲ್ಲಿದ್ದು, ಮುಂದೆ ನಿರ್ಮೂಲನೆಯ ಹಂತವನ್ನು ತಲುಪಿ ಯುವ ಪೀಳಿಗೆ ಹಾಗೂ ಮಕ್ಕಳನ್ನು ತಂಬಾಕು ಸೇವನೆಯ ಚಟದಿಂದ ಬಿಡಿಸಬೇಕು ಎಂದರು.
ಯಾವುದೇ ತಂಬಾಕು ಸಂಸ್ಥೆಗಳು ತಮ್ಮ ಬ್ರಾಂಡ್ ಹಾಗೂ ಥೀಮ್ ಗಳನ್ನು ಪ್ರಚಾರ ಮಾಡುವಂತಿಲ್ಲ. ಈಗಾಗಲೇ ಕೆಲವು ಶಾಪ್ ಗಳಲ್ಲಿ ತಂಬಾಕು ಸಂಬಂಧಿಸಿದ ಜಾಹೀರಾತುಗಳ ಏನಾದರೂ ಇದ್ದರೆ ಅವುಗಳನ್ನು ತಕ್ಷಣವೇ ತೆರವುಗೊಸುವಂತೆ ಅಂಗಡಿ ಅಥವಾ ಶಾಪ್ ಮಾಲೀಕನಿಗೆ ತಿಳಿಸಬೇಕು ಎಂದು ಹೇಳಿದರು.
ತಂಬಾಕು ಹಾಗೂ ಇತರೆ ಚಟಗಳಿಗೆ ಹೆಚ್ಚಾಗಿ ವ್ಯಸನಿಗಳಾಗುವವರು ಅನಕ್ಷರಸ್ಥರು ಹಾಗೂ ತಂಬಾಕಿನ ಪರಿಣಾಮದ ಬಗ್ಗೆ ಕಡಿಮೆ ಶಿಕ್ಷಣ ಹೊಂದಿರುವವರು. ಹಾಗಾಗಿ ಅಂತವರಿಗೆ ತಂಬಾಕಿನಿಂದ ಆಗುವ ದುಷ್ಪರಿಣಾಮದ ಬಗ್ಗೆ ಜಾಗೃತಿ ಮೂಡಿಸಿ ತಂಬಾಕು ಸೇವನೆ ಮುಕ್ತರನ್ನಾಗಿ ಮಾಡಬೇಕು ಎಂದರು.
ತಂಬಾಕು ಎನ್ ಪೊರ್ಸ್ ಮೆಂಟ್ ತಂಡದವರು ಜಿಲ್ಲೆಯಾದ್ಯಂತ ಡ್ರೈವ್ ಮಾಡುವ ಮೂಲಕ ನಿಯಮಬಾಹಿರವಾಗಿ ಸಾರ್ವಜನಿಕವಾಗಿ ಅಥವಾ ಯಾವುದೇ ಅಂಗಡಿಗಳಲ್ಲಿ ನೀಡಿರುವ ಜಾಹೀರಾತುಗಳನ್ನು ತೆರವುಗೊಳಿಸಬೇಕು. ತಂಬಾಕು ಮಾರಾಟ ಮಾಡುವ ಅಂಗಡಿಗಳನ್ನು ಗುರುತಿಸಿ ಅಂಗಡಿಗೆ ಸರಬರಾಜು ಮಾಡುತ್ತಿರುವ ತಂಬಾಕಿನ ಮೂಲ ಕಂಪನಿ ಅಥವಾ ಮಾಲೀಕನ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ಸಭೆಯಲ್ಲಿ ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ. ಪಿ ಸಿ ಕುಮಾರಸ್ವಾಮಿ, ಜಿಲ್ಲಾ ಪಂಚಾಯಿತಿಯ ಉಪ ಕಾರ್ಯದರ್ಶಿಗಳಾದ ಸವಿತಾ ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.