ಮನೆ ರಾಜ್ಯ ಲವ್ ಜಿಹಾದ್, ಡ್ರಗ್ಸ್ ಜಾಲದ ಬಗ್ಗೆ ಸಮಗ್ರ ತನಿಖೆ ನಡೆಯಲಿ: ಬಿಜೆಪಿ ಯುವಮೋರ್ಚಾ

ಲವ್ ಜಿಹಾದ್, ಡ್ರಗ್ಸ್ ಜಾಲದ ಬಗ್ಗೆ ಸಮಗ್ರ ತನಿಖೆ ನಡೆಯಲಿ: ಬಿಜೆಪಿ ಯುವಮೋರ್ಚಾ

0

ಕೋಟ: ಕಾರ್ಕಳ ನಗರ ಠಾಣಾ ವ್ಯಾಪ್ತಿಯ ನಿವಾಸಿ ಹಿಂದೂ ಯುವತಿಯ ಮೇಲೆ 4 ಮಂದಿ ಅನ್ಯಕೋಮಿನ ಯುವಕರು ಅಮಲು ಪದಾರ್ಥ ನೀಡಿ ಅತ್ಯಾಚಾರ ನಡೆಸಿದ ಪ್ರಕರಣ ಅತ್ಯಂತ ಹೀನ ಕೃತ್ಯವಾಗಿದ್ದು, ಈ ದುಷ್ಕೃತ್ಯದ ಹಿಂದೆ ಲವ್ ಜಿಹಾದ್ ಸಂಚು ಕೂಡ ಅಡಗಿರುವ ಅನುಮಾನವಿದೆ ಎಂದು ಉಡುಪಿ ಜಿಲ್ಲಾ ಬಿಜೆಪಿ ಯುವಮೋರ್ಚಾ ಖಂಡನೆ ವ್ಯಕ್ತಪಡಿಸಿದೆ.

Join Our Whatsapp Group

ಇಂತಹ ಘಟನೆ ಜಿಲ್ಲೆಯ ಕಾನೂನು ಸುವ್ಯವಸ್ಥೆಯನ್ನೇ ಪ್ರಶ್ನಿಸುವ ರೀತಿಯಲ್ಲಿದ್ದು, ಆರೋಪಿಗಳಿಗೆ ಸೂಕ್ತ ಕಠಿಣ ಶಿಕ್ಷೆ ನೀಡುವುದರೊಂದಿಗೆ 4 ಮಂದಿ ಆರೋಪಿಗಳಿಗೆ ಬೆಂಬಲವಾಗಿ‌ ನಿಂತ ಮತೀಯ ಶಕ್ತಿಗಳಾವು, ವ್ಯವಸ್ಥಿತವಾದ ಲವ್ ಜಿಹಾದ್ ಸಂಚಿಗೆ ಸಹಕರಿಸುತ್ತಿರುವ ವ್ಯವಸ್ಥೆಗಳು ಯಾರು ಎನ್ನುವ ಬಗ್ಗೆ ಸಮಗ್ರ ತನಿಖೆ ಪೊಲೀಸ್ ಇಲಾಖೆಯಿಂದ‌ ನಡೆಯಬೇಕು ಹಾಗೂ ಕಾಂಗ್ರೆಸ್ ಆಡಳಿತದಲ್ಲಿರುವ ಸಂದರ್ಭದಲ್ಲೇ ಇಂತಹ ಘಟನೆಗಳು ಮತ್ತೆ – ಮತ್ತೆ ನಡೆಯುತ್ತಿರುವುದಕ್ಕೆ ಆಡಳಿತ ವ್ಯವಸ್ಥೆಯ ಕೋಮು ಓಲೈಕೆ ಕಾರಣವಾಗಿದೆ ಎಂದು ಉಡುಪಿ ಜಿಲ್ಲಾ ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಪ್ರಥ್ವಿರಾಜ್ ಶೆಟ್ಟಿ ಬಿಲ್ಲಾಡಿ ತಿಳಿಸಿದ್ದಾರೆ.

ಒಟ್ಟಾರೆ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಲವ್ ಜಿಹಾದ್ ಹಾಗೂ ಡ್ರಾಗ್ಸ್ ಜಾಲವನ್ನು ಮಟ್ಟ ಹಾಕದಿದ್ದರೆ ಯುವಮೋರ್ಚಾ ಜಿಲ್ಲೆಯಾದ್ಯಂತ ಪ್ರತಿಭಟನೆ ನಡೆಸಲಿದೆ ಎಂದು ಯುವಮೋರ್ಚಾ ಅಧ್ಯಕ್ಷ ಪ್ರಥ್ವಿರಾಜ್ ಶೆಟ್ಟಿ ಬಿಲ್ಲಾಡಿ ಹೇಳಿದ್ದಾರೆ.