ರಿಷಿ ನಾಯಕರಾಗಿರುವ “ರುದ್ರ ಗರುಡ ಪುರಾಣ’ ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಗಿದೆ. ಶಿವರಾಜ್ಕುಮಾರ್ ಅವರು ಟೀಸರ್ ಬಿಡುಗಡೆ ಮಾಡಿ ಶುಭಕೋರಿದ್ದಾರೆ. ಅಶ್ವಿನಿ ಆರ್ಟ್ಸ್ ಲಾಂಛನದಲ್ಲಿ ಅಶ್ವಿನಿ ಲೋಹಿತ್ ಅವರು ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಚಂಬಲ್, ಡಿಯರ್ ವಿಕ್ರಮ್ ಸೇರಿದಂತೆ ಕೆಲವು ಚಿತ್ರಗಳನ್ನು ನಿರ್ದೇಶಿಸಿರುವ ಕೆ.ಎಸ್ ನಂದೀಶ್ ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ.
ಚಿತ್ರದ ಕಥೆಯ ಬಗ್ಗೆ ಮಾತನಾಡುವ ನಿರ್ದೇಶಕ ನಂದೀಶ್, “ಗರುಡ ಪುರಾಣ ಅನ್ನೋದು ಕರ್ಮ ಸಿದ್ದಾಂತಕ್ಕೆ ಸಂಬಂಧಪಟ್ಟ ಹಿಂದೂ ಧರ್ಮದ ಒಂದು ಪುರಾಣ ಆಗಿದೆ. ಸಾವಿನ ನಂತರ ಮನುಷ್ಯನಿಗೆ ಅವನು ಮಾಡಿರುವ ಕರ್ಮಗಳ ಅನುಸಾರ ಸ್ವರ್ಗ ಅಥವಾ ನರಕ. ಮತ್ತು ಮಾಡಿದ ತಪ್ಪಿಗೆ ಎಂತಹ ಶಿಕ್ಷೆಗಳು ಕೊಡಲಾಗುತ್ತದೆ ಎಂದು ಹೇಳಿದೆ. ಆಧುನಿಕ ಜಗತ್ತಿನಲ್ಲಿ ನರಕಕ್ಕೆ ಹೋದ ಮೇಲೆ ಶಿಕ್ಷೆ ಇಲ್ಲ. ಮಾಡಿದ ಕರ್ಮಕ್ಕೆ ಇಲ್ಲೇ ಎಲ್ಲವೂ ಎಂದು ಹೇಳುತ್ತಾರೆ. ಇಂತಹ ವಿಚಾರಗಳನ್ನು ಇಟ್ಟು ಕೊಂಡು ಮಾಡಿರುವ ಇನ್ವೆಸ್ಟಿಗೇಷನ್. ಡ್ರಾಮ ಮತ್ತು ಥ್ರಿಲ್ಲರ್ ಒಳಗೊಂಡ ಸಿನಿಮಾ ರುದ್ರ ಗರುಡ ಪುರಾಣ’ ಎನ್ನುತ್ತಾರೆ.
ನಿರ್ದೇಶಕ ರಿಷಿ ಮಾತನಾಡಿ, ನಮ್ಮ ಸುತ್ತಮುತ್ತ ನಡೆಯುವ ಅನೇಕ ಸಮಸ್ಯೆಗಳನ್ನಿಟ್ಟುಕೊಂಡು ನಂದೀಶ್ ಈ ಚಿತ್ರದ ಕಥೆ ಮಾಡಿದ್ದಾರೆ. ಪುನೀತ್ ಅವರ ನಿರ್ಮಾಣದ ಕವಲುದಾರಿ ಚಿತ್ರದ ನಂತರ ನಾನು ಈ ಚಿತ್ರದಲ್ಲಿ ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ರುದ್ರ ನನ್ನ ಪಾತ್ರದ ಹೆಸರು’ ಎಂದರು.
ನಾಯಕಿ ಪ್ರಿಯಾಂಕಾ ಕುಮಾರ್ ತಮ್ಮ ಪಾತ್ರದ ಬಗ್ಗೆ ಮಾತನಾಡಿದರು. ಚಿತ್ರದಲ್ಲಿ ನಟಿಸಿದ ವಿನೋದ್ ಆಳ್ವಾ, ಕೆ.ಎಸ್ ಶ್ರೀಧರ್, ಗಿರೀಶ್ ಶಿವಣ್ಣ, ಶಿವರಾಜ ಕೆ.ಆರ್ ಪೇಟೆ ತಮ್ಮ ಅನುಭವ ಹಂಚಿಕೊಂಡರು.
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅರೆಕಾಲಿಕ ಅತಿಥಿ ಉಪನ್ಯಾಸಕರ ಭರ್ತಿ
ಈರುಳ್ಳಿ ಮೇಲಿರುವ ಕಪ್ಪು ಚುಕ್ಕೆ ತರುತ್ತೆ ಆಪತ್ತು ಆರೋಗ್ಯಕ್ಕೆ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.