ಬೆಂಗಳೂರು: ಬೆಂಗಳೂರಿನಲ್ಲಿ ಇಬ್ಬರು ಬಾಲಕಿಯರ ಕೊಲೆ ನಡೆದಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಮಲತಂದೆ ಸುಮಿತ್ನನ್ನು ಯಶವಂತಪುರ ರೈಲ್ವೆ ನಿಲ್ದಾಣದಲ್ಲಿ ಅಮೃತಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರಿನಿಂದ ಎಸ್ಕೇಪ್ ಆಗಲು ಆರೋಪಿ ಸುಮಿತ್ ರಾತ್ರಿ ಯಶವಂತಪುರ ರೈಲ್ವೆ ನಿಲ್ದಾಣಕ್ಕೆ ಬಂದಿದ್ದ. ಈ ವೇಳೆ ಟಿಕೆಟ್ ಖರೀದಿಸಲು ಮೊಬೈಲ್ ಆನ್ ಮಾಡಿದ್ದ. ಕೆಲವೇ ಸೆಕೆಂಡ್ ಆನ್ ಮಾಡಿ ಮೊಬೈಲ್ ಆಫ್ ಮಾಡಿದ್ದ. ಅಷ್ಟೊತ್ತಿಗಾಗಲೇ ಪೊಲೀಸರು ಆರೋಪಿಯನ್ನು ಸುತ್ತುವರಿದು ಬಂಧಿಸಿದ್ದಾರೆ.
ಅಮೃತಹಳ್ಳಿ ಠಾಣೆ ಪೊಲೀಸರು ಆರೋಪಿ ಸುಮಿತ್ ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
ಘಟನೆ ಹಿನ್ನೆಲೆ
ಆ.24ರಂದು ಅಮೃತಹಳ್ಳಿಯ ಕಾವೇರಿ ಬಡಾವಣೆಯಲ್ಲಿ ಇಬ್ಬರು ಬಾಲಕಿಯರನ್ನು ಕತ್ತುಸೀಳಿ ಮಲತಂದೆ ಕೊಲೆ ಮಾಡಿದ ಘಟನೆ ನಡೆದಿತ್ತು. ಶಾಲೆಗೆ ಹೋಗುತಿದ್ದ ಮಕ್ಕಳ ಅತಿಯಾಗಿ ಕೇರ್ ಮಾಡುತಿದ್ದ ಮಲತಂದೆಗೆ ಅವರ ಪ್ರತಿ ಹೆಜ್ಜೆಯೂ ಅನುಮಾನವಾಗಿದ್ದು, ಇತ್ತೀಚೆಗೆ ಇಬ್ಬರು ಹೆಣ್ಣು ಮಕ್ಕಳು ಇದೇ ವಿಚಾರವಾಗಿ ಬೇಸರಗೊಂಡಿದ್ದರಂತೆ.. ಅಲ್ಲದೇ ಮಲತಂದೆ ಜೊತೆ ಸರಿಯಾಗಿ ಮಾತನಾಡುವುದು ಬಿಟ್ಟಿದ್ದರಂತೆ. ಇದೇ ಕೋಪಕ್ಕೆ ಮೊನ್ನೆ ಇಬ್ಬರು ಹೆಣ್ಣು ಮಕ್ಕಳನ್ನು ಮಲತಂದೆ ಸುಮಿತ್ ಹತ್ಯೆ ಮಾಡಿರೋ ಅನುಮಾನ ವ್ಯಕ್ತವಾಗಿದೆ.
ಕಳೆದ ಒಂದು ವರ್ಷದ ಹಿಂದೆ ಕಾವೇರಿ ಬಡವಾಣೆಗೆ ಶಿಫ್ಟ್ ಆಗಿದ್ದ ಕುಟುಂಬ ಆರಂಭದಲ್ಲಿ ಚೆನ್ನಾಗಿದ್ದರು. ಆದರೇ ಕಳೆದ ಎರಡು ತಿಂಗಳಿಂದ ಮನೆಯಲ್ಲಿ ಗಲಾಟೆ ಶುರುವಾಗಿದೆ. ಇದು ಮನೆ ಮಾಲೀಕನಿಗೆ ಸರಿ ಎಂದೆನಿಸಿರಲಿಲ್ಲ. ಜೊತೆಗೆ ಎರಡು ತಿಂಗಳಿಂದ ಬಾಕಿ ಇಟ್ಟುಕೊಂಡ ಬಾಡಿಗೆ ಹಣ ತಲೆ ಬಿಸಿ ತಂದಿತ್ತು. ಇದೇ ಕಾರಣಕ್ಕೆ ಮನೆ ಖಾಲಿ ಮಾಡುವಂತೆ ಮಾಲೀಕ ಸುಮಿತ್ ಗೆ ಸೂಚಿಸಿದ್ದ. ಅದರಂತೆ ಈ ಬರುವ 1ನೇ ತಾರೀಖು ಮನೆ ಖಾಲಿ ಮಾಡೊದಾಗಿ ಹೇಳಿದ್ದ. ಮನೆ ಜಗಳದಲ್ಲಿ ಮಕ್ಕಳ ಕೊಲೆ ಮಾಡಿದ್ದಾನೆಂದು ಮನೆ ಮಾಲೀಕರು ಹೇಳುತ್ತಿದ್ದಾರೆ.
ಇನ್ನು ಸುಮಿತ್ ಜೊತೆ ಅನಿತಾಳಿಗೆ ಕಳೆದ ೪ ವರ್ಷಗಳ ಹಿಂದೆ ಮದುವೆಯಾಗಿತ್ತು. ಇಬ್ಬರು ಚೆನ್ನಾಗಿಯೇ ಇದ್ದರು. ಅಲ್ಲದೇ ಅನಿತಾಳ ಇಬ್ಬರು ಹೆಣ್ಣು ಮಕ್ಕಳನ್ನು ಸುಮಿತ್ ಸಹ ನೋಡಿಕೊಳ್ಳುತಿದ್ದ. ಆದರೇ ಕಳೆದ ಎರಡು ತಿಂಗಳಿಂದ ಅದ್ಯಾಕೋ ಮಕ್ಕಳ ಮೇಲೆ ಹೆಚ್ಚು ಒತ್ತಡ ಹಾಕುತಿದ್ದನಂತೆ. ಗೆಳೆಯರು, ಸಂಬಂಧಿಕರ ಜೊತೆ ಮಾತನಾಡದಂತೆ ರೂಲ್ಸ್ ಮಾಡಿದ್ದನಂತೆ. ಈ ವಿಚಾರ ತಿಳಿದ ತಾಯಿ ಇಬ್ಬರು ಹೆಣ್ಣು ಮಕ್ಕಳನ್ನು ಹೆಬ್ಬಾಳದ ತನ್ನ ಸಹೋದರನ ಮನೆಗೆ ಕಳುಹಿಸಿದ್ದರು. ಆ ಬಳಿಕ ಈತನೇ ಕರೆ ಮಾಡಿ ತಾನು ಮಾಡಿದ್ದು, ತಪ್ಪಾಯ್ತು ಎಂದು ಕ್ಷಮೆ ಕೇಳಿ ಇಬ್ಬರನ್ನು ಮನೆಗೆ ವಾಪಾಸ್ ಕರೆಸಿದ್ದ. ಆದರೇ ಹೀಗೆ ಕರೆಸಿದ 20 ದಿನದಲ್ಲೇ ಆ ಇಬ್ಬರು ಮಕ್ಕಳ ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದ. ಸದ್ಯ ಈಗ ಆರೋಪಿಯನ್ನು ಬಂಧಿಸಲಾಗಿದ್ದು ಆರೋಪಿ ಸತ್ಯ ಬಾಯಿಬಿಡಬೇಕಾಗಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.