ಮನೆ ಕಾನೂನು ಜೈಲಿನಲ್ಲಿ ಇರುವಾಗಲೇ ನಟ ದರ್ಶನ್​ ಮೇಲೆ ಮೂರು ಹೊಸ ಎಫ್​ಐಆರ್​

ಜೈಲಿನಲ್ಲಿ ಇರುವಾಗಲೇ ನಟ ದರ್ಶನ್​ ಮೇಲೆ ಮೂರು ಹೊಸ ಎಫ್​ಐಆರ್​

0

ಸ್ಯಾಂಡಲ್​ವುಡ್​ ನಟ ದರ್ಶನ್​ ವಿಚಾರದಲ್ಲಿ ಪರಪ್ಪನ ಅಗ್ರಹಾರ ಜೈಲಿನ ನಿಯಮಗಳನ್ನು ಗಾಳಿಗೆ ತೂರಲಾಗಿದೆ. ಕೊಲೆ ಪ್ರಕರಣದಂತಹ ಗಂಭೀರ ಆರೋಪ ಹೊತ್ತು ಜೈಲು ಸೇರಿರುವ ನಟನಿಗೆ ಬಗೆಬಗೆಯ ಸೌಲಭ್ಯಗಳನ್ನು ನೀಡಲಾಗಿದೆ. ಆ ಮೂಲಕ ಕಾನೂನಿನ ಉಲ್ಲಂಘನೆ ಮಾಡಲಾಗಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ 3 ಪ್ರತ್ಯೇಕ ಎಫ್​​ಐಆರ್ ದಾಖಲಾಗಿದೆ.  

Join Our Whatsapp Group

ಜೈಲಿನಲ್ಲಿ ದುಡ್ಡು ಇರುವ ವ್ಯಕ್ತಿಗಳಿಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬುದನ್ನು ಸಾಕ್ಷಿ ಎಂಬಂತೆ ದರ್ಶನ್​ ಅವರ ಫೋಟೋ ಮತ್ತು ವಿಡಿಯೋಗಳು ವೈರಲ್​ ಆಗಿವೆ. ಇದಕ್ಕೆ ಸಂಬಂಧಿಸಿದಂತೆ ಜೈಲು ಅಧೀಕ್ಷಕರ ದೂರು ಆಧರಿಸಿ ಮೂರು ಎಫ್​ಐಆರ್ ದಾಖಲು ಮಾಡಲಾಗಿದೆ. ಕೊಲೆ ಆರೋಪಿಗಳಾದ ದರ್ಶನ್, ವಿಲ್ಸನ್ ಗಾರ್ಡನ್ ನಾಗ, ಕುಳ್ಳ ಸೀನ ದರ್ಶನ್ ಆಪ್ತ ನಾಗರಾಜ್ ವಿರುದ್ಧ ಒಂದು ಎಫ್​​ಐಆರ್​ ಆಗಿದೆ.

ಆರೋಪಿ ದರ್ಶನ್​ಗೆ ಸಿಗರೇಟ್ ಕೊಟ್ಟಿದ್ದಕ್ಕೆ ಮತ್ತೊಂದು ಎಫ್​​ಐಆರ್ ದಾಖಲಾಗಿದೆ. ವಿಡಿಯೋ ಮಾಡಿ ವೈರಲ್ ಮಾಡಿದ್ದಕ್ಕೆ 3ನೇ ಎಫ್​​ಐಆರ್ ದಾಖಲಾಗಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ಒಟ್ಟು 3 ಪ್ರತ್ಯೇಕ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ನಡೆಸಲಾಗುತ್ತಿದೆ. ಮೂರು ಎಫ್​​ಐಆರ್​ಗಳಲ್ಲೂ ಕೂಡ ದರ್ಶನ್ ಆರೋಪಿ ಆಗಿದ್ದಾರೆ. ಇದರಿಂದ ಅವರಿಗೆ ಜಾಮೀನು ಪಡೆಯುವಲ್ಲಿ ಸಂಕಷ್ಟ ಎದುರಾಗಲಿದೆ.

ದರ್ಶನ್​ ಸ್ನೇಹಿತೆ ಪವಿತ್ರಾ ಗೌಡಗೆ ರೇಣುಕಾಸ್ವಾಮಿ ಎಂಬಾತನಿಂದ ಅಶ್ಲೀಲ ಸಂದೇಶ ಬಂದಿತ್ತು. ಆ ಕಾರಣಕ್ಕಾಗಿ ಆತನಿಗೆ ಬೆಂಗಳೂರಿನಲ್ಲಿ ಚಿತ್ರಹಿಂಸೆ ನೀಡಿ ಕೊಲೆ ಮಾಡಿಸಿದ ಆರೋಪ ದರ್ಶನ್​ ಹಾಗೂ ಸಹಚರರ ಮೇಲಿದೆ. ಇದೇ ಕೇಸ್​ನಲ್ಲಿ ದರ್ಶನ್​ ಜೈಲು ಸೇರಿದ್ದಾರೆ. ಈಗ ಜೈಲಿನಲ್ಲಿ ಅವರು ಪ್ರಭಾವ ಬಳಸಿ ನಿಯಮಗಳನ್ನು ಮುರಿದಿದ್ದಾರೆ. ಇದು ದೊಡ್ಡ ಮಟ್ಟದಲ್ಲಿ ಸುದ್ದಿ ಆಗಿದೆ. ಜೈಲಿನ ವ್ಯವಸ್ಥೆ ಬಗ್ಗೆ ಎಲ್ಲರಿಗೂ ಅನುಮಾನ ಮೂಡುವ ರೀತಿಯಲ್ಲಿ ನಟನ ಫೋಟೋ ಮತ್ತು ವಿಡಿಯೋ ವೈರಲ್​ ಆಗಿದೆ.