ಬೆಂಗಳೂರು: ಕನ್ನಡದ ಹಿರಿಯ ನಟಿ ಪದ್ಮಜಾ ರಾವ್ಗೆ ಸಂಕಷ್ಟ ಎದುರಾಗಿದೆ. ಚೆಕ್ ಬೌನ್ಸ್ ಕೇಸ್ ಪ್ರಕರಣಕ್ಕೆ ಸಂಬಂಧಿಸಿ ಅವರಿಗೆ ಮಗಳೂರಿನ ಜೆಎಂಎಫ್ಸಿ ನ್ಯಾಯಾಲಯವು ಮೂರು ತಿಂಗಳು ಕಾರಾಗೃಹ ಶಿಕ್ಷೆ ವಿಧಿಸಿದೆ.
ಇದರ ಜೊತೆಗೆ 40.20 ಲಕ್ಷ ರೂಪಾಯಿ ದಂಡ ಕೂಡ ವಿಧಿಸಿದೆ. ಇದರಿಂದ ಅವರು ಜೈಲಿಗೆ ಹೋಗುವ ಪರಿಸ್ಥಿತಿ ಎದುರಾಗಿದೆ.
‘ವೀರೂ ಟಾಕೀಸ್’ ಸಂಸ್ಥೆಯ ಮಾಲೀಕ ವೀರೇಂದ್ರ ಶೆಟ್ಟಿ ಅವರ ಬಳಿ ಪದ್ಮಜಾ ರಾವ್ ಅವರು 40 ಲಕ್ಷ ರೂಪಾಯಿ ಸಾಲ ಪಡೆದಿದ್ದರು. ಭದ್ರತೆ ದೃಷ್ಟಿಯಿಂದ ಪದ್ಮಜಾ ರಾವ್ ಚೆಕ್ ನೀಡಿದ್ದರು. ಇದು ನಡೆದಿದ್ದು 2020ರ ಜೂನ್ 17ರಂದು. ಆದರೆ, ಪದ್ಮಜಾ ಅವರು ಹಣ ಪಾವತಿ ಮಾಡಿಲ್ಲ. ಹೀಗಾಗಿ, ವಿರೇಂದ್ರ ಶೆಟ್ಟಿ ಅವರು ನ್ಯಾಯಾಲಯದ ಮೊರೆ ಹೊಗಿದ್ದರು.
ಈ ಮೊದಲು ವಿಚಾರಣೆಗೆ ಹಾಜರಾದ ಪದ್ಮಜಾ ರಾವ್ ಅವರು ಬೇರೆಯದೇ ರೀತಿಯ ಹೇಳಿಕೆ ನೀಡಿದ್ದರು. ನಾನು ಸಾಲವನ್ನೇ ಪಡೆದಿಲ್ಲ ಎಂದಿದ್ದ ಅವರು, ಚೆಕ್ ನೀಡಿದ ವಿಚಾರವನ್ನೂ ಅಲ್ಲಗಳೆದಿದ್ದರು. ಜೊತೆಗೆ ಪದ್ಮಜಾ ರಾವ್ ಅವರ ಚೆಕ್ ಕದ್ದು ಸಹಿ ನಕಲು ಮಾಡಿದ ಆರೋಪವನ್ನು ಪದ್ಮಜಾ ರಾವ್ ಮಾಡಿದ್ದರು. ಆದರೆ, ಇದಕ್ಕೆ ಸಂಬಂಧಿಸಿ ಅವರು ಕೊರ್ಟ್ನಲ್ಲಿ ಸಾಕ್ಷಿಗಳನ್ನು ಒದಗಿಸಲು ವಿಫಲರಾಗಿದ್ದಾರೆ.
ತೀರ್ಪಲ್ಲಿ ಏನಿದೆ?
ಈ ತೀರ್ಪಿನ ಪ್ರಕಾರ ಪದ್ಮಜಾ ರಾವ್ ಅವರು 40.20ಲಕ್ಷ ರೂಪಾಯಿ ದಂಡವನ್ನು ಪಾವತಿಸಬೇಕಿದೆ. ಇದರಲ್ಲಿ 40.17 ಲಕ್ಷ ರೂಪಾಯಿ ಹಣವನ್ನು ದೂರುದಾರನಿಗೆ ಕೊಡಬೇಕಿದೆ. ಉಳಿದ 3 ಸಾವಿರ ರೂಪಾಯಿ ಹಣವನ್ನು ಅವರು ಸರ್ಕಾರಕ್ಕೆ ತುಂಬಬೇಕು. ಉಳಿದಂತೆ ಸಾದಾ ಕಾರಗೃಹ ಶಿಕ್ಷೆ ಅನುಭವಿಸಬೇಕಿದೆ.
ಪದ್ಮಜಾ ರಾವ್ ಅವರು ಕನ್ನಡದ ಅನೇಕ ಸೂಪರ್ ಹಿಟ್ ಚಿತ್ರಗಳಲ್ಲಿ ಪೋಷಕ ಪಾತ್ರ ಮಾಡಿದ್ದಾರೆ. ಸದ್ಯ ಅವರು ಕಲರ್ಸ್ ಕನ್ನಡದಲ್ಲಿ ಪ್ರಸಾರ ಕಾಣುತ್ತಿರುವ ‘ಭಾಗ್ಯಲಕ್ಷ್ಮೀ’ ಧಾರಾವಾಹಿಯಲ್ಲಿ ಭಾಗ್ಯನ ಅತ್ತೆ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.