ಪಣಜಿ: ರಾಜ್ಯದಲ್ಲಿ ಕಳೆದ ಆರು ತಿಂಗಳಲ್ಲಿ ಬೆಟ್ಟ ಕಡಿಯಲು ಯಾರಿಗೂ ಅನುಮತಿ ನೀಡಿಲ್ಲ. ಆದರೆ ಅಂತಹ ಅಕ್ರಮ ಚಟುವಟಿಕೆಗಳನ್ನು ತಡೆಯಲು ನಿಯಮದಲ್ಲಿ ತಿದ್ದುಪಡಿ ತರಲು ಉದ್ದೇಶಿಸಲಾಗಿದ್ದು, ₹1 ಕೋಟಿ ವರೆಗೂ ದಂಡ ವಿಧಿಸಲು ಯೋಜಿಸಲಾಗಿದೆ ಎಂದು ಗೋವಾದ ಸಚಿವ ವಿಶ್ವಜಿತ್ ರಾಣೆ ತಿಳಿಸಿದ್ದಾರೆ.
ವಯನಾಡ್ ಭೂಕುಸಿತ ದುರಂತದ ಬೆನ್ನಲ್ಲೇ ಪರಿಸರ ಸೂಕ್ಷ್ಮ ಪ್ರದೇಶಗಳಲ್ಲಿ ಬೆಟ್ಟ, ಗುಡ್ಡಗಳನ್ನು ಕಡಿಯುವುದನ್ನು ತಡೆಗಟ್ಟಲು ಗೋವಾ ಸರ್ಕಾರ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ.
ಕಡಿಯುವುದು ಅಥವಾ ಅಂತಹ ಅಕ್ರಮ ಚಟುವಟಿಕೆಗಳ ಮೂಲಕ ನಿಯಮ ಉಲ್ಲಂಘಿಸಿದರೆ ₹1 ಲಕ್ಷದಿಂದ ₹1 ಕೋಟಿ ವರೆಗೂ ದಂಡ ವಿಧಿಸಲು ನಿಯಮದಲ್ಲಿ ತಿದ್ದುಪಡಿ ತರಲಾಗುವುದು ಎಂದು ಅವರು ತಿಳಿಸಿದ್ದಾರೆ.
ಬೆಟ್ಟ ಕಡಿಯಲು ಟಿಸಿಪಿ ಇಲಾಖೆ ಅನುಮತಿ ನೀಡಿಲ್ಲ. ಈ ಜವಾಬ್ದಾರಿ ಎಲ್ಲ ಇಲಾಖೆಗಳ ಮೇಲೂ ಇದೆ ಎಂದು ಅವರು ತಿಳಿಸಿದ್ದಾರೆ.
ರಿಯಲ್ ಎಸ್ಟೇಟ್ ದೈತ್ಯ ರೀಸ್ ಮಾಗೋಸ್, ಪಣಜಿ ಬಳಿಯ ಗ್ರಾಮದ ಇಳಿಜಾರು ಬೆಟ್ಟದಲ್ಲಿ ಕಟ್ಟಡ ನಿರ್ಮಿಸಿದ ಘಟನೆ ವಿವಾದಕ್ಕೆ ಕಾರಣವಾಗಿತ್ತು. ಆದರೆ ತಾವು ಅನುಮತಿ ನೀಡಿಲ್ಲ ಎಂದು ಸಚಿವರು ಸ್ಪಷ್ಟನೆ ನೀಡಿದ್ದಾರೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.