ಬೆಳಗಾವಿ: ರಥೋತ್ಸವದ ವೇಳೆ ರಥದ ಮೇಲಿನ ಬೆಳ್ಳಿಯ ನವಿಲು ಆಕಾರದ ಮೂರ್ತಿ ಬಿದ್ದು 13 ವರ್ಷದ ಬಾಲಕನೊಬ್ಬ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಸವದತ್ತಿ ತಾಲೂಕಿನ ಚಚಡಿ ಗ್ರಾಮದಲ್ಲಿ ನಡೆದಿದೆ.
ಶಿವಾನಂದ ರಾಜಕುಮಾರ ಸಾವಳಗಿ(13) ಮೃತ ದುರ್ದೈವಿ ಬಾಲಕ.
ಪ್ರತಿವರ್ಷದಂತೆ ಶ್ರಾವಣ ಕೊನೆಯ ಸೋಮವಾರ ಚಚಡಿ ಗ್ರಾಮದ ಸಂಗಮೇಶ್ವರ ರಥೋತ್ಸವ ಆಯೋಜಿಸಲಾಗಿತ್ತು. 30 ಅಡಿ ಎತ್ತರದ ರಥದ ಮೇಲೆ 5 ಕೆಜಿ ತೂಕದ ಬೆಳ್ಳಿಯ ನವಿಲು ಅಳವಡಿಸಲಾಗಿತ್ತು. ಪ್ರತಿ ವರ್ಷ ಎಳೆದುಕೊಂಡು ಹೋಗುತ್ತಿದ್ದ ರಸ್ತೆಯಲ್ಲೇ ಈ ಬಾರಿಯೂ ರಥವನ್ನು ಗ್ರಾಮಸ್ಥರು ಎಳೆಯುತ್ತಿದ್ದರು. ದೇವಸ್ಥಾನದಿಂದ ತುಸು ದೂರ ರಥವನ್ನು ಎಳೆಯುತ್ತಿದ್ದರು. ಆದರೆ, ಸ್ವಲ್ಪ ಮುಂದಕ್ಕೆ ಹೋಗುತ್ತಿದ್ದಂತೆ ಹಾಳಾದ ರಸ್ತೆಯಿಂದ ರಥ ಅತ್ತಿತ್ತ ಹೊರಳಾಡಿ ಕಳಸದ ಮೇಲಿನ ಬೆಳ್ಳಿ ನವಿಲು ಕಿತ್ತು ಬಾಲಕನ ತಲೆಯ ಮೇಲೆ ಬಿದ್ದಿದೆ.
ತಲೆಗೆ ತೀವ್ರ ಪೆಟ್ಟಾದ ಪರಿಣಾಮ ಬಾಲಕ ಶಿವಾನಂದ ಸಾವಳಗಿ ಸ್ಥಳದಲ್ಲೇ ಉಸಿರು ಚೆಲ್ಲಿದ್ದಾನೆ. ಈ ಅವಘಡದಿಂದ ರಥೋತ್ಸವ ಅರ್ಧಕ್ಕೆ ನಿಂತಿದ್ದು, ಗ್ರಾಮದಲ್ಲಿ ಸೂತಕದ ವಾತಾವರಣ ನಿರ್ಮಾಣವಾಗಿದೆ. ಸವದತ್ತಿ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.