ಮನೆ ಅಪರಾಧ ಅಪರಿಚಿತ ಬೈಕ್ ಡಿಕ್ಕಿ: ಪಾದಚಾರಿ ಸಾವು

ಅಪರಿಚಿತ ಬೈಕ್ ಡಿಕ್ಕಿ: ಪಾದಚಾರಿ ಸಾವು

0

ಭಾರತೀನಗರ:ಪಾದಚಾರಿಗೆ ಅಪರಿಚಿತ ಬೈಕೊಂದು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಲ್ಲಿಗೆ ಸಮೀಪ ಮುಡೀನಹಳ್ಳಿ ಗೇಟ್ ಬಳಿ ಜರುಗಿದೆ.

Join Our Whatsapp Group


ತೊರೆಬೊಮ್ಮನಹಳ್ಳಿ ಗ್ರಾಮದ ಟಿ.ಸಿ.ಶ್ರೀನಿವಾಸ್ (೪೬) ಸ್ಥಳದಲ್ಲೇ ಸಾವನ್ನಪ್ಪಿದ ದುರ್ದೈವಿ ವ್ಯಕ್ತಿ. ಶ್ರೀನಿವಾಸ್ ಅವರು ಮುಡೀನಹಳ್ಳಿ ಗೇಟ್ ಬಳಿ ಇರುವ ಶನಿಮಹಾತ್ಮ ದೇವಾಲಯಕ್ಕೆ ಹೋಗಿ ತಮ್ಮ ಗ್ರಾಮವಾದ ತೊರೆ ಬೊಮ್ಮನಹಳ್ಳಿ ಗ್ರಾಮಕ್ಕೆ ಹಿಂತಿರುಗುತ್ತಿದ್ದಾಗ ಹಿಂಬದಿಯಿಂದ ಅಪರಿಚಿತ ಬೈಕ್ ಡಿಕ್ಕಿಹೊಡೆದಿದೆ.ಇದರಿಂದ ಸ್ಥಳದಲ್ಲೇ ಕುಸಿದು ಬಿದ್ದು ಪ್ರಾಣಬಿಟ್ಟಿದ್ದಾನೆ. ಬೈಕ್ ಸವಾರರು ಸಹ ಕೆಳಗೆ ಬಿದ್ದಿದ್ದಾರೆ.
ಆದರೆ ಪ್ರಾಣಾಪಾಯದಲ್ಲಿದ್ದ ಶ್ರೀನಿವಾಸ್ ಅವರನ್ನು ಆಸ್ಪತ್ರೆಗೆ ದಾಖಲಿಸಲು ಮಾನವೀಯತೆ ತೋರಿದೆ ಸ್ಥಳದಿಂದ ಪರಾರಿ ಯಾಗಿದ್ದಾರೆ.
ವಿಷಯ ತಿಳಿದ ಕೆ.ಎಂ.ದೊಡ್ಡಿ ಇನ್ಸ್ಪೆಕ್ಟರ್ ಆನಂದ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿ ಬೈಕ್ ಪತ್ತೆಗಾಗಿ ಬಲೆ ಬೀಸಿದ್ದಾರೆ.
ಈ ಸಂಬಂಧ ಕೆ.ಎಂ.ದೊಡ್ಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶ್ರೀನಿವಾಸ್ ಅವರ ಮೃತ ದೇಹವನ್ನು ಕೆ.ಎಂ.ದೊಡ್ಡಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪಂಚಾನಾಮೆ ನಡೆಸಿ ವಾರಸುದಾರರಿಗೆ ಒಪ್ಪಿಸಿದ್ದಾರೆ.