ಮೈಸೂರು: ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯಗೆ ಒಂದಲ್ಲ ಒಂದು ಕಂಟಕ ತಪ್ಪುತ್ತಲೇ ಇಲ್ಲ. ಒಂದೆಡೆ, ಅವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದಕ್ಕೆ ಸಂಬಂಧಿಸಿ ಕರ್ನಾಟಕ ಹೈಕೋರ್ಟ್ ನಲ್ಲಿ ಗುರುವಾರ ವಿಚಾರಣೆ ನಡೆಯಲಿದೆ.
ಈ ಸಂದರ್ಭದಲ್ಲೇ ಇದೀಗ ಮೈಸೂರಿನಲ್ಲಿ ಅವರ ಪತ್ನಿ ಪಾರ್ವತಿ ವಿರುದ್ಧ ದೂರು ದಾಖಲಾಗಿದೆ. ನಕಲಿ ಸಹಿ ವಿಚಾರವಾಗಿ ಪಾರ್ವತಿ ವಿರುದ್ಧ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮೈಸೂರಿನ ಲಕ್ಷ್ಮೀಪುರಂ ಪೊಲೀಸ್ ಠಾಣೆಗೆ ಬುಧವಾರ ದೂರು ನೀಡಿದ್ದಾರೆ.
ನಕಲಿ ದಾಖಲೆ ಸೃಷ್ಟಿ ಹಾಗೂ ಕಡತ ನಾಶದ ಬಗ್ಗೆ ಸ್ನೇಹಮಯಿ ಕೃಷ್ಣ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಪಾರ್ವತಿ ಬರೆದಿದ್ದ ಮೂಲ ಪತ್ರ ನಾಶ ಮಾಡಿ, ಇತ್ತೀಚಿಗೆ ಸೃಷ್ಟಿಸಿರುವ ಪತ್ರವನ್ನು ಕಡತಕ್ಕೆ ಸೇರಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಹಾಗೂ ಸಹಚರರ ವಿರುದ್ಧವೂ ಕ್ರಮ ವಹಿಸುವಂತೆ ದೂರಿನಲ್ಲಿ ಆಗ್ರಹಿಸಲಾಗಿದೆ.
ಸಿಎಂ ಬಿಡುಗಡೆ ಮಾಡಿದ್ದ ಪತ್ರದಲ್ಲಿ ವೈಟ್ನರ್ ಹಿಂದಿನ ಅಕ್ಷರ ತೋರಿಸಲಾಗಿತ್ತು. ದೇವನೂರು 3ನೇ ಹಂತದ ಬಡಾವಣೆಯಲ್ಲಿ ಅಥವಾ ನಂತರ ಎಂಬ ಅಕ್ಷರಗಳ ಮೇಲೆ ವೈಟ್ನರ್ ಹಾಕಲಾಗಿತ್ತು. ಈಗ ಆ ಮೂಲ ಪತ್ರ ತೋರಿಸಿರುವ ಬಗ್ಗೆಯೇ ದೂರು ದಾಖಲಾಗಿದೆ. ಪತ್ರದಲ್ಲಿರುವ ಪಾರ್ವತಿ ಅವರ ಸಹಿ ಹಾಗೂ ಮಾಹಿತಿ ಹಕ್ಕಿನಲ್ಲಿ ಪಡೆದ ಪತ್ರದಲ್ಲಿ ಇರುವ ಸಹಿ ಬದಲಾವಣೆ ಇದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ವೈಟ್ನರ್ ಹಿಂದಿನ ಪದಗಳನ್ನು ಸಮರ್ಥಿಸಿಕೊಳ್ಳುವ ಸಲುವಾಗಿ ಎಂ.ಲಕ್ಷ್ಮಣ್ ಹಾಗೂ ಪಾರ್ವತಿ ಸಂಚು ರೂಪಿಸಿ ಸುಳ್ಳು ಪತ್ರ ಸೃಷ್ಟಿಸಿದ್ದಾರೆ ಎಂದು ಗಂಭೀರ ಆರೋಪ ಮಾಡಲಾಗಿದೆ.
ಸ್ನೇಹಮಯಿ ಕೃಷ್ಣ ಹೇಳುವುದೇನು ?
ನನ್ನ ಬಳಿ ಇರುವ ದಾಖಲೆಯಲ್ಲಿನ ಮತ್ತು ಸಿದ್ದರಾಮಯ್ಯನವರು “ಎಕ್ಸ್” ನಲ್ಲಿ ಬಿಡುಗಡೆ ಮಾಡಿರುವ ವೀಡಿಯೋದಲ್ಲಿ ಕಂಡು ಬರುವ ದಾಖಲೆಯಲ್ಲಿನ ಪಾರ್ವತಿರವರ ಸಹಿಗಳನ್ನು ಸೂಕ್ಷ್ಮವಾಗಿ ಗಮಿನಿಸಿದಾಗ ಒಟ್ಟು ಎಂಟು ಪ್ರಮುಖ ವ್ಯತ್ಯಾಸಗಳು ಕಂಡು ಬರುತ್ತವೆ ಎಂದು ಅವರು ಪಟ್ಟಿ ಮಾಡಿದ್ದಾರೆ.
1) ಸಹಿಗಳ ಪಕ್ಕದಲ್ಲಿರುವ “ಎಕ್ಸ್” ಗುರುತುಗಳಲ್ಲಿ ವ್ಯತ್ಯಾಸ ಕಂಡು ಬರುತ್ತದೆ.
2) ನನ್ನ ಬಳಿ ಇರುವ ದಾಖಲೆಯಲ್ಲಿ ಇರುವ ಸಹಿಗೂ ಮತ್ತು ಪಕ್ಕದಲ್ಲಿರುವ “ಎಕ್ಸ್” ಗುರುತಿಗೂ ಅಂತರ ಕಡಿಮೆ ಇರುವುದು ಕಂಡು ಬಂದರೆ, ವೀಡಿಯೋದಲ್ಲಿ ಕಂಡು ಬರುವ ದಾಖಲೆಯ ಸಹಿಗೂ ಮತ್ತು ಪಕ್ಕದಲ್ಲಿರುವ “ಎಕ್ಸ್” ಗುರುತಿಗೂ ಅಂತರ ಹೆಚ್ಚು ಇರುವುದು ಕಂಡು ಬರುತ್ತದೆ.
3) ನನ್ನ ಬಳಿ ಇರುವ ದಾಖಲೆಯಲ್ಲಿ “ತ” ಅಕ್ಷರ ಪಕ್ಕದಲ್ಲೇ “ಪಿ” ಅಕ್ಷರದ ಕೆಳಭಾಗದ ಗೆರೆ ಬಂದಿರುವುದು ಕಂಡು ಬರುತ್ತದೆ. ವೀಡಿಯೋದಲ್ಲಿ ಕಂಡು ಬರುವ ದಾಖಲೆಯಲ್ಲಿ “ತ” ಅಕ್ಷರದ ಮೇಲೆ “ಪಿ” ಅಕ್ಷರದ ಗೆರೆ ಇರುವುದು ಕಂಡು ಬರುತ್ತದೆ.
4) ನನ್ನ ಬಳಿ ಇರುವ ದಾಖಲೆಯಲ್ಲಿ “ಪಿ” ಅಕ್ಷರದ ಉದ್ದಗೆರೆಯ ಮೇಲ್ಬಾಗದಲ್ಲಿ ಮುಂದೆ ಅಡ್ಡಗೆರೆ ಬಂದಿರುವುದಿಲ್ಲ. ವೀಡಿಯೋದಲ್ಲಿ ಕಂಡು ಬರುವ ದಾಖಲೆಯಲ್ಲಿ “ಪಿ” ಅಕ್ಷರದ ಉದ್ದಗೆರೆಯ ಮೇಲ್ಬಾಗದಲ್ಲಿ ಉದ್ದಗೆರೆಯ ಮುಂದೆ ಅಡ್ಡಗೆರೆ ಬಂದಿರುತ್ತದೆ.
5] ನನ್ನ ಬಳಿ ಇರುವ ದಾಖಲೆಯಲ್ಲಿರುವ “ಆರ್” ಅಕ್ಷರಕ್ಕೂ, ವೀಡಿಯೋದಲ್ಲಿ ಕಂಡು ಬರುವ ದಾಖಲೆ ಯಲ್ಲಿರುವ “ಆರ್” ಅಕ್ಷರಕ್ಕೂ ವ್ಯತ್ಯಾಸ ಕಂಡು ಬರುತ್ತದೆ.
6] ನನ್ನ ಬಳಿ ಇರುವ ದಾಖಲೆಯಲ್ಲಿರುವ “ಏ” ಆಕ್ಷರಕ್ಕೂ, ವೀಡಿಯೋದಲ್ಲಿ ಕಂಡು ಬರುವ ದಾಖಲೆ “ಯಲ್ಲಿರುವ “ಎ” ಅಕ್ಷರಕ್ಕೂ ವ್ಯತ್ಯಾಸ ಕಂಡು ಬರುತ್ತದೆ.
7) ನನ್ನ ಬಳಿ ಇರುವ ದಾಖಲೆಯಲ್ಲಿರುವ “ಟಿ” ಅಕ್ಷರದ ಮೇಲ್ಬಾಗದಲ್ಲಿ ಎರಡು ಗೆರೆಗಳ ಮಧ್ಯೆ ಅಂತರ ಕಂಡು ಬರುವುದಿಲ್ಲ. ವೀಡಿಯೋದಲ್ಲಿ ಕಂಡು ಬರುವ ದಾಖಲೆಯಲ್ಲಿರುವ “ಟ” ಅಕ್ಷರದ ಮೇಲ್ಬಾಗದಲ್ಲಿ ಎರಡು ಗೆರೆಗಳ ನಡುವೆ ಅಂತರ ಕಾಣಿಸುತ್ತದೆ.
8) ನನ್ನ ಬಳಿ ಇರುವ ದಾಖಲೆಯಲ್ಲಿರುವ “ಐ” ಅಕ್ಷರದ ಮೇಲ್ಬಾಗದಲ್ಲಿ ಚುಕ್ಕಿ ಇರುವುದು ಕಂಡು ಬರು ವುದಿಲ್ಲ. ವೀಡಿಯೋದಲ್ಲಿ ಕಂಡು ಬರುವ ದಾಖಲೆಯಲ್ಲಿರುವ “ಐ” ಅಕ್ಷರದ ಮೇಲ್ಬಾಗದಲ್ಲಿ ಚುಕ್ಕಿ ಇರುವುದು ಕಂಡು ಬರುತ್ತದೆ.
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅರೆಕಾಲಿಕ ಅತಿಥಿ ಉಪನ್ಯಾಸಕರ ಭರ್ತಿ
ಈರುಳ್ಳಿ ಮೇಲಿರುವ ಕಪ್ಪು ಚುಕ್ಕೆ ತರುತ್ತೆ ಆಪತ್ತು ಆರೋಗ್ಯಕ್ಕೆ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.