ಮೈಸೂರು: ಮುಡಾ ಸೈಟ್ ಹಂಚಿಕೆ ಕುರಿತು ರಾಜ್ಯಪಾಲರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ದೂರು ನೀಡಿದ ಆರ್ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅಧಿಕೃತ ರೌಡಿಶೀಟರ್ ಎಂದು ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ ಗಂಭೀರ ಆರೋಪ ಮಾಡಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2019ರಿಂದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ರೌಡಿಶೀಟರ್. ಅವರ ವಿರುದ್ಧ 44 ಕೇಸ್ ಗಳಿವೆ ಎಂದಿದ್ದಾರೆ.
ಬ್ಲ್ಯಾಕ್ಮೇಲ್, ಕೊಲೆ, ಭೂ ಅವ್ಯವಹಾರ ಕೇಸ್ ದಾಖಲಾಗಿವೆ. ಸ್ನೇಹಮಯಿ ಕೃಷ್ಣ ಮನೆಯ ಮೇಲೆ ಪೊಲೀಸರು ದಾಳಿ ಮಾಡಿದರೆ ಮುಡಾ ಸೀಲ್ಗಳು, ದಾಖಲೆಗಳು ಸಿಗುತ್ತವೆ. ಈ ವೇಳೆ ಲಕ್ಷ್ಮಣ ದಾಖಲೆಗಳನ್ನು ಬಿಡುಗಡೆ ಮಾಡಿದ್ದಾರೆ.
ಮುಖ್ಯಮಂತ್ರಿ ಸ್ಪಷ್ಟೀಕರಣ ಕೊಟ್ಟ ದಾಖಲೆಯಲ್ಲಿ ಸಿಎಂ ಪತ್ನಿ ಸಹಿ ನಕಲಿ ಅಂತಾ ಸ್ನೇಹಮಹಿ ಕೃಷ್ಣ ಆರೋಪಿಸುತ್ತಾರೆ. ಸ್ನೇಹಮಹಿ ಕೃಷ್ಣ ಏನೂ ಎಫ್ಎಸ್ಎಲ್ ಅಧಿಕಾರಿನಾ? ಅವರ ವೃತಿಪರ ಬ್ಲಾಕ್ ಮೇಲರ್ ಎಂದು ಕಿಡಿಕಾರಿದ್ದಾರೆ.
ಸ್ನೇಹಮಹಿ ಕೃಷ್ಣನ ಕಡೆಯವರು ನನ್ನ ಬಳಿ ಬಂದು 100 ಕೋಟಿ ರೂ ಕೊಟ್ಟರೆ ಅವರು ಸರಿ ಹೋಗಬಹುದು ಎಂದು ಕೇಳಿದ್ದಾರೆ. ನನ್ನ ಜೊತೆ ಆ ಡೀಲ್ಗೆ ಬಂದ ವ್ಯಕ್ತಿಯನ್ನು ಇಷ್ಟರಲ್ಲೇ ಸುದ್ದಿಗೋಷ್ಠಿಗೆ ಕರೆದು ಕೊಂಡು ಬರುತ್ತೇವೆ ಎಂದು ಹೇಳಿದ್ದಾರೆ.
ಸಿಎಂ ಪತ್ನಿ ವಿರುದ್ಧ ದೂರು ನೀಡಿದ ಸ್ನೇಹಮಹಿ ಕೃಷ್ಣ
ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಸಹಿ ನಕಲಿ ವಿಚಾರವಾಗಿ ಇದೀಗ ಸಿಎಂ ಪತ್ನಿ ವಿರುದ್ಧ ಮೈಸೂರಿನ ಲಕ್ಷ್ಮೀಪುರಂ ಪೊಲೀಸ್ ಠಾಣೆಗೆ ಸ್ನೇಹಮಹಿ ಕೃಷ್ಣ ದೂರು ನೀಡಿದ್ದಾರೆ. ನಕಲಿ ದಾಖಲೆ ಸೃಷ್ಟಿ ಹಾಗೂ ಕಡತ ನಾಶದ ಬಗ್ಗೆ ದೂರು ನೀಡಿದ್ದಾರೆ. ಪಾರ್ವತಿ ಅವರು ಬರೆದ ಮೂಲ ಪತ್ರ ನಾಶ ಮಾಡಿ, ಇತ್ತೀಚಿಗೆ ಸೃಷ್ಟಿಸಿರುವ ಪತ್ರ ಕಡತಕ್ಕೆ ಸೇರಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅರೆಕಾಲಿಕ ಅತಿಥಿ ಉಪನ್ಯಾಸಕರ ಭರ್ತಿ
ಈರುಳ್ಳಿ ಮೇಲಿರುವ ಕಪ್ಪು ಚುಕ್ಕೆ ತರುತ್ತೆ ಆಪತ್ತು ಆರೋಗ್ಯಕ್ಕೆ
ಬೀಜಗಳಿಂದ ತಯಾರಾದ ಪರಿಸರ ಸ್ನೇಹಿ ತ್ರಿವರ್ಣ ಧ್ವಜ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.