ಬೆಂಗಳೂರು: ನಾಳೆ 16ನೇ ಕೇಂದ್ರ ಹಣಕಾಸಿನ ಆಯೋಗದವರೊಂದಿಗೆ ಸಭೆ ನಡೆಯಲಿದ್ದು, 15 ನೇ ಹಣಕಾಸು ಆಯೋಗದಲ್ಲಿ ಕರ್ನಾಟಕಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸುವರೆಂಬ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
15ನೇ ಹಣಕಾಸು ಆಯೋಗದಲ್ಲಿ ಕರ್ನಾಟಕಕ್ಕೆ ಆಗಿರುವ ಅನ್ಯಾಯಗಳ ಬಗ್ಗೆ ವಿವರಿಸಲಾಗುವುದು. ಕರ್ನಾಟಕ, ಹೆಚ್ಚು ನಿರ್ಲಕ್ಷ್ಯಕ್ಕೆ ಒಳಗಾದ ರಾಜ್ಯ ಎಂದು ಮನದಟ್ಟು ಮಾಡಿ, ತೆರಿಗೆ ಹಂಚಿಕೆಯನ್ನು ಶೇ. 41 ರಿಂದ ಶೇ.50 ಕ್ಕೆ ಹೆಚ್ಚಿಸುವಂತೆ ಒತ್ತಾಯಿಸಲಾಗುವುದು. ಸೆಸ್ ಮತ್ತು ಸರ್ಚಾಜ್ ಗಳಲ್ಲಿ ರಾಜ್ಯಗಳಿಗೂ ಪಾಲು ನೀಡಬೇಕು. ಸೆಸ್ ಮತ್ತು ಸರ್ಚಾಜುಗಳು ಹೆಚ್ಚುತ್ತಿದ್ದು, ರಾಜ್ಯಕ್ಕೆ ತೆರಿಗೆ ಹಂಚಿಕೆ ಕಡಿಮೆಯಾಗುತ್ತಿರುವುದನ್ನು ಹಣಕಾಸು ಆಯೋಗದ ಅಧ್ಯಕ್ಷರಿಗೆ ಮನವರಿಕೆ ಮಾಡಿಕೊಡಲಾಗುವುದುಎಂದರು.
ನಿವೇಶನ ಹಂಚಿಕೆ ಕಾನೂನಾತ್ಮಕವಾಗಿದೆ
ರಾಹುಲ್ ಖರ್ಗೆಯವರ ಟ್ರಸ್ಟ್ ಗೆ ಸಿಎ ನಿವೇಶನ ಹಂಚಿಕೆ ವಿವಾದದ ಬಗ್ಗೆ ಪ್ರತಿಕ್ರಿಯೆ ನೀಡಿ, ಟ್ರಸ್ಟ್ ಗೆ ಕಾನೂನಾತ್ಮಕವಾಗಿ ನಿವೇಶನ ನೀಡಲಾಗಿದೆ. ಕಾನೂನು ಪ್ರಕಾರ ನಿವೇಶನ ನೀಡಿರುವುದರಿಂದ ವಿವಾದ ಸೃಷ್ಟಿಸುವ ಅಗತ್ಯವಿಲ್ಲ. ಬಿಜೆಪಿಯವರ ಕಾಲದಲ್ಲಿ ಚಾಣಕ್ಯ ವಿವಿಗೆ ಹಾಗೂ ಆರ್ ಎಸ್ ಎಸ್ ನ ವಿವಿಧ ಟ್ರಸ್ಟ್ಗಳಿಗೆ ಎಕರೆಗಟ್ಟಲೆ ಭೂಮಿಯನ್ನು ಮಂಜೂರು ಮಾಡಿದ್ದಾರೆ ಎಂದು ತಿಳಿಸಿದರು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.