ಮನೆ ಅಪರಾಧ ಬಳ್ಳಾರಿ ಜೈಲು ಸೇರಿದ ನಟ ದರ್ಶನ್

ಬಳ್ಳಾರಿ ಜೈಲು ಸೇರಿದ ನಟ ದರ್ಶನ್

0

ಬಳ್ಳಾರಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಅವರನ್ನು ಇಂದು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗಿದ್ದು, ಈ ವೇಳೆ ನೆಚ್ಚಿನ ನಟನನ್ನು ನೋಡಲು ಜಮಾಯಿಸಿದ್ದ ಅಭಿಮಾನಿಗಳ ಮೇಲೆ ಪೊಲೀಸರು ಲಾಠಿಚಾರ್ಜ್ ನಡೆಸಿದ್ದಾರೆ.

Join Our Whatsapp Group

ನಟ ದರ್ಶನ್ ಅವರನ್ನು ಬಳ್ಳಾರಿ ಕಾರಾಗೃಹಕ್ಕೆ ಬೆಂಗಳೂರು ಪರಪ್ಪ ಅಗ್ರಹಾರ ಜೈಲು ನಿಂದ ಇಂದು ಆಂದ್ರದ ಬಾಗೇಪಲ್ಲಿ, ಅನಂತಪುರ ರಸ್ತೆಯ ಮೂಲಕ ಪೊಲೀಸ್ ಬಿಗಿಭದ್ರತೆಯಲ್ಲಿ ಬಳ್ಳಾರಿ ಜೈಲಿಗೆ ಕರೆತರಲಾಯಿತು.

ಚಿತ್ರದುರ್ಗದ ರೇಣುಕಾಸ್ವಾಮಿ ಎಂಬುವರ ಹತ್ಯೆ ಕೇಸ್ ನಲ್ಲಿ ಜೂನ್ ತಿಂಗಳಲ್ಲಿ ಬಂಧನಕ್ಕೊಳಗಾಗಿದ್ದರು. ಅವರ ಜೊತೆಗೆ ಕೊಲೆಗೆ ಸಹಕರಿಸಿದ ಆರೋಪದಡಿ ದರ್ಶನ್ ಸೇರಿ ಒಟ್ಟು ೧೭ ಆರೋಪಿಗಳ ಬಂಧನವಾಗಿದೆ. ಸದ್ಯ ದರ್ಶನ್ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಯಾವುದೇ ಅಹಿತಕರ ಘಟನೆ ನಡೆಯದಂತೆ ಸಾಕಷ್ಟು ಪೊಲೀಸ್ ಭದ್ರತೆ ಮಾಡಲಾಗಿತ್ತು.