ಬೆಂಗಳೂರು: ಸಿಎಂ ಬದಲಾವಣೆ ವಿಚಾರ ಆಗಲಿ ಅಥವಾ ಬೇರೆಯವರನ್ನು ಸಿಎಂ ಮಾಡುವ ಪ್ರಶ್ನೆಯೇ ಈಗ ಬರಲ್ಲ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟಪಡಿಸಿದರು.
ಸದಾಶಿವನಗರ ನಿವಾಸದ ಬಳಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ರಾಜೀನಾಮೆ ಕೊಡುವುದಿಲ್ಲ ಅಂತ ನಾವೆಲ್ಲರೂ ಹೇಳುತ್ತಿದ್ದೇವಲ್ಲ. ಆ ಪ್ರಶ್ನೆ ಎಲ್ಲಿ ಬರುತ್ತೆ ಈಗ ಎಂದು ಕೇಳಿದರು.
ಕೋವಿಡ್ ಹಗರಣಗಳ ಸಂಬಂಧ ನ್ಯಾ. ಮೈಕೆಲ್ ಡಿ ಕುನ್ಹಾ ನೇತೃತ್ವದ ಆಯೋಗದಿಂದ ವರದಿ ವಿಚಾರವಾಗಿ ಮಾತನಾಡಿ, ನ್ಯಾ. ಮೈಕೆಲ್ ಕುನ್ಹಾ ಅವರು ವರದಿ ಕೊಡಲು ಇನ್ನೂ ಕಾಲಾವಕಾಶ ಬೇಕು ಅಂತ ಕೇಳಿದ್ರು. ನಾವು ಇನ್ನೂ ಆರು ತಿಂಗಳು ಕಾಲಾವಕಾಶ ಕೊಟ್ಟಿದ್ದೇವೆ. ಈಗ ಅವರು ಮಧ್ಯಂತರ ವರದಿ ಕೊಡುವ ಸಾಧ್ಯತೆ ಇರಬಹುದು ಎಂದು ತಿಳಿಸಿದರು.
ಜೈಲಿನಲ್ಲಿ ದರ್ಶನ್ ವಿಡಿಯೋ ಕಾಲ್ ಪ್ರಕರಣ ವಿಚಾರವಾಗಿ ಮಾತನಾಡಿ, ಇದರ ಬಗ್ಗೆ ನಮಗೆ ಯಾವುದೇ ರಿಪೋರ್ಟ್ ಇನ್ನೂ ಬಂದಿಲ್ಲ. ಇದರ ತನಿಖೆಯನ್ನು ಐಪಿಎಸ್ ಅಧಿಕಾರಿ ಚಂದ್ರಗುಪ್ತ ಮಾಡ್ತಿದ್ದಾರೆ. ತನಿಖೆ ನಂತರ ಏನು ವರದಿ ಬರುತ್ತೆ ಅಂತ ನೋಡೋಣ ಎಂದು ಹೇಳಿದರು.
ಸಿಎಂ ಆಪ್ತ, ಕಾಂಗ್ರೆಸ್ ಹಿರಿಯ ಮುಖಂಡ ಮರಿಗೌಡ ಅವರ ಪತ್ನಿ 6 ಕೋಟಿ ಮೌಲ್ಯದ ಬಂಗಲೆ ಖರೀದಿ ವಿಚಾರವಾಗಿ ಪ್ರತಿಕ್ರಿಯಿಸಿ, ಇದರ ಬಗ್ಗೆ ನನಗೆ ಗೊತ್ತಿಲ್ಲ. ಗೊತ್ತಿಲ್ಲದಿರೋ ವಿಷಯ ಹೇಗೆ ಹೇಳೋದು ಎಂದರು.
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅರೆಕಾಲಿಕ ಅತಿಥಿ ಉಪನ್ಯಾಸಕರ ಭರ್ತಿ
ಈರುಳ್ಳಿ ಮೇಲಿರುವ ಕಪ್ಪು ಚುಕ್ಕೆ ತರುತ್ತೆ ಆಪತ್ತು ಆರೋಗ್ಯಕ್ಕೆ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.