ಮನೆ ಅಪರಾಧ ಲಾರಿ–ಕಾರಿನ ನಡುವೆ ಅಪಘಾತ: ಸ್ಥಳದಲ್ಲೇ ನಾಲ್ವರು ಸಾವು

ಲಾರಿ–ಕಾರಿನ ನಡುವೆ ಅಪಘಾತ: ಸ್ಥಳದಲ್ಲೇ ನಾಲ್ವರು ಸಾವು

0

ಬೆಳಗಾವಿ(Belagavi): ಲಾರಿ ಮತ್ತು ಕಾರಿನ ನಡುವೆ ಶುಕ್ರವಾರ ಘಟಿಸಿದ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವಿಗೀಡಾಗಿರುವ ಘಟನೆ ಜಿಲ್ಲೆಯ ನಿಪ್ಪಾಣಿ ತಾಲ್ಲೂಕಿನ ಸ್ಥವನಿಧಿ ಸಮೀಪದ ಸರ್ವಿಸ್‌ ರಸ್ತೆಯ ಅಮರ್ ಹೋಟೆಲ್ ಎದುರು ನಡೆದಿದೆ.

ಮೃತರನ್ನು ನಿಪ್ಪಾಣಿಯ ಸಾಯಿಶಂಕರ ನಗರದ ಅದಗೊಂಡ ಬಾಬು ಪಾಟೀಲ (60), ಛಾಯಾ ಅದಗೊಂಡ ಪಾಟೀಲ (55), ಮಹಾರಾಷ್ಟ್ರದ ರಾಧಾ ನಗರದ ಚಂಪಾತಾಯಿ ಬಾಳೆಷಾ ಮಗದುಮ್ಮ (85) ಮತ್ತು ಸದಲಗಾದ ಮಹೇಶ ದೇವಗೊಂಡ ಪಾಟೀಲ (28) ಎಂದು ಗುರುತಿಸಲಾಗಿದೆ ಎಂದು ನಿಪ್ಪಾಣಿ ಠಾಣೆ ಪೊಲೀಸರು ಮಾಹಿತಿ ನೀಡಿದರು.

ಘಟನೆಯಲ್ಲಿ ಕಾರು ನುಜ್ಜುಗುಜ್ಜಾಗಿದೆ. ನಿಪ್ಪಾಣಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದರು. ಜೆಸಿಬಿಯಿಂದ ಕಾರನ್ನು ತೆರವುಗೊಳಿಸಲಾಗಿದೆ. ಘಟನೆ ಕುರಿತು ಪ್ರಕರಣ ದಾಖಲಾಗಿದೆ.