ವಿಜಯಪುರ: ಬಸವನಾಡಿನಲ್ಲಿ ಚಿರತೆ ಹಾವಳಿ ಹೆಚ್ಚಿದ್ದು, ಸಾಕು ಪ್ರಾಣಿಗಳ ಮೇಲೆ ದಾಳಿ ನಡೆಸುತ್ತಿರುವ ಪ್ರಾಣಿ ಹಂತಕ ಚಿರತೆಯಿಂದ ರೈತರು ಕಂಗಾಲಾಗಿದ್ದಾರೆ.
ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಆಸಂಗಿಹಾಳ, ದೇವರನಾವದಗಿ ಗ್ರಾಮಗಳಲ್ಲಿ ದಾಂಗುಡಿ ಇಟ್ಟಿರುವ ಚಿರತೆ, ರೈತರ ಸಾಕು ನಾಯಿ, ಎಮ್ಮೆ, ಆಕಳುಗಳ ಮೇಲೆ ದಾಳಿ ನಡೆಸಿ ಬಲಿ ಪಡೆಯುತ್ತಿದೆ.
ರೈತರ ಸಾಕು ಪ್ರಾಣಿಗಳ ಮೇಲೆ ಚಿರತೆ ದಾಳಿ ಮಾಡಿದ್ದು, ಜಮೀನಿನಲ್ಲಿ ಚಿರತೆಯ ಹೆಜ್ಜೆ ಗುರುತು ಸ್ಪಷ್ಟವಾಗಿ ಕಾಣಿಸಿಕೊಂಡಿವೆ.
ಆಸಂಗಿಹಾಳ ಗ್ರಾಮದಲ್ಲಿ ರೈತರೊಬ್ಬರ ಆಕಳನ್ನು ಹತ್ಯೆ ಮಾಡಿ ತಿಂದಿರುವ ಚಿರತೆ, ದೇವರನಾವದಗಿ ಗ್ರಾಮದಲ್ಲಿ ಭೀಮರಾಯ ಜನಿವಾರ ಎಂಬವರ ಜಮೀನಿನಲ್ಲಿ ಸಾಕು ನಾಯಿ ಹಾಗೂ ಎಮ್ಮೆಯ ಮೇಲೆ ದಾಳಿ ನಡೆಸಿ ಭಕ್ಷಿಸಿದೆ.
ಸಾರ್ವಜನಿಕ ದೂರಿನನ್ವಯ ಹೆಜ್ಜೆ ಗುರುತು ಆಧರಿಸಿ ಚಿರತೆ ಇರುವಿಕೆಯ ಸ್ಪಷ್ಟತೆ ಅರಿತ ಅರಣ್ಯ ಇಲಾಖೆ ಅಧಿಕಾರಿಗಳು ಆರ್.ಎಫ್.ಒ. ರಾಜೀವ ಬಿರಾದಾರ ನೇತೃತ್ವದಲ್ಲಿ ಚಿರತೆ ಸೆರೆಗೆ ಮುಂದಾಗಿದ್ದಾರೆ.
ಚಿರತೆ ಸೆರೆ ಹಿಡಿಯುವ ಭಾಗವಾಗಿ ಈಗಾಗಲೇ ಆಸಂಗಿಹಾಳ ಹಾಗೂ ದೇವರನಾವದಗಿ ಗ್ರಾಮಗಳ ರೈತರ ತೋಟಗಳಲ್ಲಿ ತಲಾ ಒಂದೊಂದು ಬೋನ್ ಇರಿಸಲಾಗಿದೆ. ಜೊತೆಗೆ ಚಿರತೆಯ ಚಲನವಲನದ ಮೇಲೆ ನಿಗಾ ಇರಿಸಲು ಸಿ.ಸಿ. ಕ್ಯಾಮೆರಾಗಳನ್ನು ಅಳವಡಿಸಲಾಗಿದೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.