ಬೆಂಗಳೂರು: ಶ್ರಮ ಮತ್ತು ಬೆವರಿನ ಸಂಸ್ಕೃತಿಯನ್ನು ಎತ್ತಿ ಹಿಡಿಯುವ ಗಣಪ ನಿಜವಾದ ಪರಿಸರ ಪ್ರೇಮಿ. ಆದ್ದರಿಂದ ಪ್ರತೀ ಮನೆಯಲ್ಲೂ ಮಕ್ಕಳು ಪರಿಸರ ಸ್ನೇಹಿ ಗಣೇಶನನ್ನೇ ಕೂರಿಸಿ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಮಕ್ಕಳಿಗೆ ಕರೆ ನೀಡಿದರು.
ಜವಾಹರ ಬಾಲ ಭವನ ಹಮ್ಮಿಕೊಂಡಿದ್ದ, “ಮಕ್ಕಳಿಗೆ ಜೇಡಿ ಮಣ್ಣಿನ ಗಣಪ ಮಾಡುವ ಕಾರ್ಯಾಗಾರ”ವನ್ನು ಉದ್ಘಾಟಿಸಿ ಮಾತನಾಡಿದರು.
ತನ್ನ ಹೊಟ್ಟೆಗೆ ಹಾವನ್ನು ಸುತ್ತಿಕೊಂಡು, ಇಲಿಯನ್ನು ವಾಹನ ಮಾಡಿಕೊಂಡಿರುವ ಗಣೇಶ ಪರಿಸರ ಪ್ರೇಮಿ. ಹೀಗಾಗಿ ಗಣೇಶ ಹಬ್ಬ ಪರಿಸರ ಸ್ನೇಹಿಯಾಗಿರಬೇಕು. ರಸಾಯನಿಕ ಬೆರೆಸಿದ ಗಣೇಶ ಮೂರ್ತಿಗಳನ್ನು ಕೆರೆಗೆ, ನದಿಗೆ, ಸಮುದ್ರಕ್ಕೆ ವಿಸರ್ಜಿಸಿ ಸಂಭ್ರಮಿಸುವುದು ಗಣೇಶನಿಗೆ ಇಷ್ಟ ಆಗುವುದಿಲ್ಲ. ಹೀಗಾಗಿ ಮಣ್ಣಿನ ಗಣಪನನ್ನು ಮನೆಯಲ್ಲಿ ಕೂರಿಸಿ ಆಗ ಗಣೇಶ ಖುಷಿಯಾಗುತ್ತಾನೆ ಎಂದು ಮಕ್ಕಳಿಗೆ ಪರಿಸರ ಪಾಠ ಮಾಡಿ ಸಲಹೆ ನೀಡಿದರು.
ಮಕ್ಕಳಿಗೆ ಗಣೇಶನ ಸೃಷ್ಟಿಯ ಕತೆ ಹೇಳಿದ ಕೆ.ವಿ.ಪ್ರಭಾಕರ್ ಅವರು ಗಣೇಶ ಆಗಿದ್ದೇ ಬೆವರಿನಿಂದ. ಶ್ರಮ ಮತ್ತು ಬೆವರಿನ ಸಂಸ್ಕೃತಿಯ ಪ್ರತೀಕ ಗಣಪ. ತಂದೆ ತಾಯಿಯರಿಗಿಂತ ದೊಡ್ಡ ದೇವರು ಯಾವುದೂ ಇಲ್ಲ ಎಂದು ಗಣೇಶ ನಂಬಿದ್ದ. ಆದ್ದರಿಂದ ತಂದೆ, ತಾಯಿಯರನ್ನು ಹೆಚ್ಚು ಗೌರವಿಸಿ, ಅವರ ಮಾತು ಕೇಳಿ ಎಂದರು.
ಮಣ್ಣಿನ ಗಣಪ ಮಾಡುವ ಕಾರ್ಯಾಗಾರ ಅತ್ಯಂತ ಸೃಜನಶೀಲವಾದದು. ಮಕ್ಕಳ ಸುಪ್ತ ಪ್ರತಿಭೆಗಳನ್ನು ವ್ಯಕ್ತಪಡಿಸಲು ಉಪಯುಕ್ತವಾದದು. ಇಂಥಾ ವೇದಿಕೆ ಕಲ್ಪಿಸಿಕೊಟ್ಟ ಬಾಲ ಭವನದ ಅಧ್ಯಕ್ಷ ಬಿ.ಆರ್.ನಾಯ್ಡು ಅವರ ಕಾಳಜಿ ಮತ್ತು ಶ್ರಮ ಅಭಿನಂದನೀಯ ಎಂದರು.
ಮಕ್ಕಳ ಬೆರಳುಗಳಲ್ಲಿ ಮೂಡಿಬಂದ ಮಣ್ಣಿನ ಗಣಪಗಳು ಅದ್ಭುತವಾಗಿದ್ದವು ಎಂದು ಶ್ಲಾಘಿಸಿದ ಪ್ರಭಾಕರ್ ಅವರು ಕಾರ್ಯಾಗಾರದಲ್ಲಿ ಭಾಗವಹಿಸಿದ್ದ ಪ್ರತೀ ಮಕ್ಕಳಿಗೂ ಪ್ರಶಸ್ತಿ ಪತ್ರ ನೀಡಿ ಗೌರವಿಸಿದರು. ಇದಕ್ಕೆ ಪ್ರತಿಯಾಗಿ ಮಕ್ಕಳು ತಾವು ಮಾಡಿದ್ದ ಗಣಪನನ್ನು ಪ್ರಭಾಕರ್ ಅವರಿಗೆ ಕಾಣಿಕೆಯಾಗಿ ನೀಡಿದರು.
ಚಲನಚಿತ್ರ ನಟಿ ಪ್ರೇಮಾ ಅವರು ಮಕ್ಕಳಿಗೆ ಸ್ಫೂರ್ತಿದಾಯಕ ಮಾತುಗಳನ್ನಾಡಿದರು.
ಬಾಲ ಭವನದ ಅಧ್ಯಕ್ಷರಾದ ಬಿ.ಆರ್.ನಾಯ್ಡು ಮತ್ತು ಅಧಿಕಾರಿಗಳು ವೇದಿಕೆಯಲ್ಲಿದ್ದರು.
ಸುಮಾರು 150 ಕ್ಕೂ ಹೆಚ್ಚು ಮಕ್ಕಳು ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.