ಮನೆ ಅಪರಾಧ ಆರೋಪಿ ದರ್ಶನ್ ​ಗೆ ಬಳ್ಳಾರಿ ಜೈಲಿನಲ್ಲಿ ಸರ್ಜಿಕಲ್​ ಚೇರ್​ ನೀಡಲು ಅನುಮತಿ

ಆರೋಪಿ ದರ್ಶನ್ ​ಗೆ ಬಳ್ಳಾರಿ ಜೈಲಿನಲ್ಲಿ ಸರ್ಜಿಕಲ್​ ಚೇರ್​ ನೀಡಲು ಅನುಮತಿ

0

ನಟ ದರ್ಶನ್​ ಬಳ್ಳಾರಿ ಜೈಲಿನಲ್ಲಿ ಸರ್ಜಿಕಲ್​ ಚೇರ್​ ಬೇಕು ಎಂದು ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ವೈದ್ಯರು ತಪಾಸಣೆ ನಡೆಸಿ ವರದಿ ನೀಡಿದ್ದರು. ವೈದ್ಯರ ವರದಿಗಳನ್ನು ಪರಿಶೀಲಿಸಿದ ಬಳಿಕ ಸರ್ಜಿಕಲ್ ಚೇರ್​ ನೀಡಲು ಅನುಮತಿ ಸಿಕ್ಕಿದೆ.

Join Our Whatsapp Group

ಇದಕ್ಕಾಗಿ  ದರ್ಶನ್​ ಕುಟುಂಬಸ್ಥರು ನೀಡಿದ ವರದಿ ಹಾಗೂ ಪರಪ್ಪನ ಅಗ್ರಹಾರ ಜೈಲಿನಿಂದ ಕೊಟ್ಟ ವರದಿಯನ್ನೂ ಪರಿಶೀಲಿಸಿದ ಬಳಿಕ ನಟನಿಗೆ ಸರ್ಜಿಕಲ್​ ನೀಡಲು ಅಪ್ರೂವಲ್​ ಸಿಕ್ಕಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ದರ್ಶನ್ ​ಗೆ ಸರ್ಜಿಕಲ್​ ಚೇರ್​ ನೀಡಲು ಸಿದ್ಧತೆ ನಡೆದಿದೆ. ಬಳ್ಳಾರಿ ಜೈಲಿನಲ್ಲಿ ವೈದ್ಯರು ದರ್ಶನ್​ಗೆ ಹೆಲ್ತ್ ಚೆಕಪ್ ಮಾಡಿದ್ದಾರೆ. ಚಿತ್ರದುರ್ಗದ ರೇಣುಕಾಸ್ವಾಮಿ ಎಂಬ ವ್ಯಕ್ತಿಯ ಕೊಲೆ ಪ್ರಕರಣದಲ್ಲಿ ದರ್ಶನ್​ ಎ2 ಆಗಿದ್ದು, ಪೊಲೀಸರು ಚಾರ್ಜ್​ಶೀಟ್​ ಸಲ್ಲಿಸುವ ತಯಾರಿಯಲ್ಲಿದ್ದಾರೆ. ತನಿಖೆ ಕೊನೇ ಹಂತದಲ್ಲಿದೆ.

ಪರಪ್ಪನ ಅಗ್ರಹಾರದಲ್ಲಿ ಇದ್ದಾಗ ದರ್ಶನ್​ ವಿವಿಧ ಸವಲತ್ತುಗಳನ್ನು ಪಡೆದುಕೊಂಡಿದ್ದರು. ತಮ್ಮ ಪ್ರಭಾವ ಬಳಸಿ ವಿಐಪಿ ಟ್ರೀಟ್​ಮೆಂಟ್​ ಪಡೆದುಕೊಂಡರು. ಅದಕ್ಕೆ ಸಾಕ್ಷಿ ಎಂಬಂತೆ ಫೋಟೋ ಮತ್ತು ವಿಡಿಯೋಗಳು ವೈರಲ್​ ಆದವು. ಆ ಬಳಿಕ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಎಲ್ಲ ಆರೋಪಿಗಳನ್ನು ರಾಜ್ಯದ ಬೇರೆ ಬೇರೆ ಜೈಲಿಗೆ ಶಿಫ್ಟ್​ ಮಾಡಲಾಯಿತು.

ದರ್ಶನ್​ಗೆ ಆರೋಗ್ಯ ಸಮಸ್ಯೆ ಇದೆ. ಜೈಲು ಸೇರುವುದಕ್ಕೂ ಮುನ್ನ ಅವರ ಕೈಗೆ ಸರ್ಜರಿ ಆಗಿತ್ತು. ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾಗ ತೂಕ ಕಳೆದುಕೊಳ್ಳುತ್ತಿದ್ದಾರೆ ಎನ್ನಲಾಗಿತ್ತು. ಹಾಗಾಗಿ ಮನೆ ಊಟಕ್ಕೆ ಮನವಿ ಮಾಡಿದ್ದರು. ಆದರೆ ಜೈಲಿನ ನಿಯಮ ಉಲ್ಲಂಘನೆ ಮಾಡಿದ ವಿಷಯ ಬಹಿರಂಗ ಆದಾಗ ಅನಾರೋಗ್ಯದ ಬಗ್ಗೆ ಅನುಮಾನ ಮೂಡಿವಂತಾಯಿತು.