ಮನೆ ಅಪರಾಧ ಬೆಂಗಳೂರು: ಡಿವೈಡರ್​ ಗೆ ಗುದ್ದಿ ಮೇಲ್ಸೇತುವೆಯಿಂದ ಕೆಳಗೆ ಬಿದ್ದ ಕಾರು

ಬೆಂಗಳೂರು: ಡಿವೈಡರ್​ ಗೆ ಗುದ್ದಿ ಮೇಲ್ಸೇತುವೆಯಿಂದ ಕೆಳಗೆ ಬಿದ್ದ ಕಾರು

0

ಬೆಂಗಳೂರು: ಕಾರು ಡಿವೈಡರ್​ಗೆ ಡಿಕ್ಕಿಯಾಗಿ ಮೇಲ್ಸೇತುವೆಯಿಂದ ಬಿದ್ದು, ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಯಶವಂತಪುರ ಸರ್ಕಲ್ ​ನಲ್ಲಿ ನಡೆದಿದೆ.

Join Our Whatsapp Group

ಬೆಳಗಿನ ಜಾವ 3.45ರ ಸುಮಾರಿಗೆ ಅಪಘಾತ ಸಂಭವಿಸಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಯಾಂಕಿ ರಸ್ತೆಯಿಂದ ತುಮಕೂರು ರಸ್ತೆ ಕಡೆ ಸಂಚರಿಸುವಾಗ ಯಶವಂತಪುರ ಸರ್ಕಲ್ ಬಳಿ ಮುಂದೆ ಹೋಗುತ್ತಿದ್ದ ಬೈಕ್​ ಗೆ ಕಾರು ಡಿಕ್ಕಿ ಹೊಡೆದಿದೆ. ಬಳಿಕ‌ ರಸ್ತೆ ವಿಭಜಕಕ್ಕೆ ಗುದ್ದಿ ಮೇಲ್ಸೇತುವೆಯಿಂದ ಕೆಳಗೆ ಅಪ್ಪಳಿಸಿದೆ. ಬಿದ್ದ ರಭಸಕ್ಕೆ ಕಾರಿನಲ್ಲಿದ್ದ ನಾಲ್ವರು ಗಂಭೀರವಾಗಿ ಗಾಯಗೊಂಡರು. ಬೈಕ್‌ ಸವಾರನಿಗೂ ಗಾಯವಾಗಿದೆ. ಕಾರು ನಜ್ಜುಗುಜ್ಜಾಗಿದೆ.‌ ಸ್ಥಳೀಯರ ನೆರವಿನಿಂದ ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮದ್ಯ ಸೇವಿಸಿ ವೇಗವಾಗಿ ವಾಹನ ಚಾಲನೆ ಮಾಡಿರುವುದು ಘಟನೆಗೆ ಕಾರಣವೆಂದು ಮೇಲ್ನೋಟಕ್ಕೆ ಕಂಡುಬಂದಿದೆ. ಕಾರಿನಲ್ಲಿ ಮದ್ಯದ ಬಾಟಲಿಗಳು ದೊರೆತಿವೆ.

ತಮಿಳುನಾಡು ನೋಂದಣಿ ಸಂಖ್ಯೆಯ ಕಾರು ಇದಾಗಿದೆ. ಗಾಯಾಳುಗಳ ಹೆಸರು, ವಿವರ ಇನ್ನಷ್ಟೇ ಲಭ್ಯವಾಗಬೇಕಿದೆ.‌ ಯಶವಂತಪುರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.