ಬೆಂಗಳೂರು : ಅರಣ್ಯ ಒತ್ತುವರಿಯನ್ನು ಕಟ್ಟು ನಿಟ್ಟಾಗಿ ತಡೆಯಬೇಕು ಎಂದು ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ ನೀಡಿದರು.
ಅರಣ್ಯ ಇಲಾಖೆ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ಮುಖ್ಯಮಂತ್ರಿಗಳ ಪದಕ ಪ್ರದಾನ ಸಮಾರಂಭದಲ್ಲಿ 2022, 2023 ನೇ ಸಾಲಿನ ಪದಕ ವಿತರಿಸಿ ಮಾತನಾಡಿದರು.
ಅರಣ್ಯ ಸಂಪತ್ತಿನ ಸಂರಕ್ಷಣೆಯ ಮಹತ್ವ ಅರಿತಿದ್ದ ಇಂಧಿರಾಗಾಂಧಿಯವರು ಅರಣ್ಯ ಸಂರಕ್ಷಣಾ ಕಾಯ್ದೆ ಜಾರಿಗೆ ತಂದಿದ್ದಾರೆ. ಇದು ಅತ್ಯಂತ ನಿಷ್ಠುರವಾಗಿದೆ. ಅರಣ್ಯಾಧಿಕಾರಿಗಳೂ ಅಷ್ಟೇ ನಿಷ್ಠುರವಾಗಿ ಅರಣ್ಯ ಒತ್ತುವರಿ ತಡೆಯಬೇಕು ಎಂದರು.
ಕಾಡು ಪ್ರಾಣಿಗಳಿಗೆ ಆಹಾರ, ಮೇವು ಮತ್ತು ನೀರು ಕಾಡಿನ ಒಳಗೇ ಅಗತ್ಯವಿದ್ದಷ್ಟು ದೊರೆತರೆ ಅವು ಕಾಡಿನಿಂದ ಹೊರಗೆ ಬರುವುದಿಲ್ಲ. ಆಗ ಮಾನವ-ಪ್ರಾಣಿ ಸಂಘರ್ಷಕ್ಕೆ ತಡೆ ಬೀಳುತ್ತದೆ ಎಂದರು.
ಮಹಾತ್ಮಗಾಂಧಿಯವರು ಪ್ರಕೃತಿ ಪ್ರಿಯರಾಗಿದ್ದರು. “ಪ್ರಕೃತಿ ಮನುಷ್ಯನ ಅಗತ್ಯಗಳನ್ನು ಪೂರೈಸುತ್ತದೆ. ಆದರೆ ಮನುಷ್ಯನ ದುರಾಸೆಗಳನ್ನು ಪೂರೈಸಲು ಆಗುವುದಿಲ್ಲ” ಎಂದು ಮಹಾತ್ಮಗಾಂಧಿ ಹೇಳಿದ್ದಾರೆ. ಇವತ್ತಿನ ಪರಿಸರದ ಅನಾಹುತಗಳಿಗೆ ಮನುಷ್ಯನ ದುರಾಸೆಯೇ ಕಾರಣ ಎಂದರು.
ಇಂದು ಪ್ರಶಸ್ತಿ ಸ್ವೀಕರಿಸಿದವರು ಉಳಿದವರಿಗೆ, ಸಮಾಜಕ್ಕೆ ಸ್ಪೂರ್ತಿಯಾಗಲಿ ಎಂದು ಹಾರೈಸಿ, ಆಯಾ ವರ್ಷದ ವರ್ಷದ ಪದಕಗಳನ್ನು ಆಯಾ ವರ್ಷವೇ ವಿತರಿಸಲು ಸಿಎಂ ಸೂಚನೆ ನೀಡಿದರು.
ಸಚಿವ ಈಶ್ವರ್ ಖಂಡ್ರೆಯವರು ಅತ್ಯುತ್ತಮ ಕೆಲಸ ಮಾಡುತ್ತಿದ್ದಾರೆ. ಇವರಿಗೆ ನಿಮ್ಮ ಸಂಪೂರ್ಣ ಸಹಕಾರ ಸಿಕ್ಕರೆ ಇನ್ನಷ್ಟು ಕ್ರಾಂತಿಕಾರಕ ಕೆಲಸ ಮಾಡುತ್ತಾರೆ ಎಂದು ಅರಣ್ಯ ಅಧಿಕಾರಿ ಮತ್ತು ಸಿಬ್ಬಂದಿಗೆ ಸಿಎಂ ಕರೆ ನೀಡಿದರು.
ವನ್ಯಜೀವಿ ಮತ್ತು ಅರಣ್ಯ ಸಂಪತ್ತು ಕಾಪಾಡುವ ಜವಾಬ್ದಾರಿ ಪ್ರತಿಯೊಬ್ಬರದ್ದು. ಆಫ್ರಿಕಾ ಬಿಟ್ಟರೆ ಅತಿ ಹೆಚ್ಚು ಅರಣ್ಯ ಪ್ರಾಣಿ ಸಂಪತ್ತು ಇರುವುದು ಭಾರತದಲ್ಲೇ. ಹಾಗೆಯೇ ಅರಣ್ಯದ ಪ್ರಮಾಣ ಇನ್ನೂ ಹೆಚ್ಚಾಗಬೇಕಿದೆ. ಅರಣ್ಯ ಸಂಪತ್ತು ಕಾಪಾಡುವ ವಿಚಾರದಲ್ಲಿ ಪದಕ ಪುರಸ್ಕತರ ಜವಾಬ್ದಾರಿ ಇನ್ನಷ್ಟು ಹೆಚ್ಚಾಗಿದೆ ಎಂದರು.
ಅರಣ್ಯ, ಜೀವ ಪರಿಸ್ಥಿತಿ ಮತ್ತು ಪರಿಸರ ಇಲಾಖೆ ಸಚಿವರಾದ ಈಶ್ವರ್ ಖಂಡ್ರೆ, ಅರಣ್ಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್, ಅರಣ್ಯಪಡೆ ಮುಖ್ಯಸ್ಥರಾದ ಬ್ರಿಜೇಶ್ ಕುಮಾರ್ ದೀಕ್ಷಿತ್ ಅವರು ಉಪಸ್ಥಿತರಿದ್ದರು.
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅರೆಕಾಲಿಕ ಅತಿಥಿ ಉಪನ್ಯಾಸಕರ ಭರ್ತಿ
ಈರುಳ್ಳಿ ಮೇಲಿರುವ ಕಪ್ಪು ಚುಕ್ಕೆ ತರುತ್ತೆ ಆಪತ್ತು ಆರೋಗ್ಯಕ್ಕೆ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.