ಪ್ರಯಾಗರಾಜ್ : ನಕಲಿ ನೋಟು ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿನ ಮದರಸಾವೊಂದರಲ್ಲಿ ಶೋಧದ ವೇಳೆ ಆರ್ಎಸ್ಎಸ್ ಅನ್ನು ಭಯೋತ್ಪಾದಕ ಸಂಘಟನೆಯೊಂದಿಗೆ ಹೋಲಿಸುವ ಪುಸ್ತಕವೊಂದನ್ನು ಮಂಗಳವಾರ(ಸೆ.3) ಪ್ರಯಾಗರಾಜ್ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ವಿದ್ಯಾರ್ಥಿಗಳಲ್ಲಿ “ಆರ್ಎಸ್ಎಸ್ ವಿರೋಧಿ ಭಾವನೆಗಳನ್ನು ಹುಟ್ಟುಹಾಕಲು” ಧರ್ಮಗುರು ಅದನ್ನು ಬಳಸುತ್ತಿದ್ದರು ಎಂದು ಶಂಕಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಆಗಸ್ಟ್ 28 ರಂದು ಅತರ್ಸುಯಿಯಾ ಪ್ರದೇಶದ ಜಾಮಿಯಾ ಹಬೀಬಿಯಾ ಮಸೀದಿ ಅಜಮ್ ಮದರಸಾದಲ್ಲಿ ನಡೆದ ದಾಳಿಯಲ್ಲಿ ನಕಲಿ ನೋಟುಗಳ ಜತೆಗೆ, ಪೊಲೀಸರು ಪುಸ್ತಕವನ್ನು ಪತ್ತೆ ಮಾಡಿದ್ದಾರೆ ಎಂದು ಪ್ರಯಾಗರಾಜ್ ನ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಉರ್ದುವಿನಿಂದ ಹಿಂದಿಗೆ ಭಾಷಾಂತರಿಸಿದ್ದು, ಎಸ್.ಎಂ.ಮುಷರಫ್ ಬರೆದಿರುವ ಪುಸ್ತಕ “ಆರ್ಎಸ್ಎಸ್: ದೇಶದ ಅತಿ ದೊಡ್ಡ ಉಗ್ರ ಸಂಘಟನೆ ” ಎಂದು ಗುರುತಿಸಲಾಗಿದೆ ಎಂದು ಅಧಿಕಾರಿ ಹೇಳಿದ್ದಾರೆ.
ಮದರಸಾದ ಧರ್ಮಗುರು ಮೊಹಮ್ಮದ್ ತಫ್ಸೀರುಲ್ ಆರಿಫೀನ್ ಪುಸ್ತಕವನ್ನು ಮಕ್ಕಳ ಮನಸ್ಸಿನಲ್ಲಿ ಆರ್ಎಸ್ಎಸ್ ವಿರೋಧಿ ಭಾವನೆಗಳನ್ನು ಬಿಟ್ಟಲು ಬಳಸುತ್ತಿದ್ದ ಎಂದು ಪೊಲೀಸರು ಶಂಕಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ, ಸ್ಥಳೀಯ ಗುಪ್ತಚರ ಘಟಕ (LIU) ಮತ್ತು ಭಯೋತ್ಪಾದನಾ ನಿಗ್ರಹ ದಳ (ATS) ತಂಡಗಳು ಮಂಗಳವಾರ ಮದ್ರಸಾ ಸಿಬಂದಿಗಳನ್ನು ವಿಚಾರಣೆ ನಡೆಸಿವೆ.
ಆಗಸ್ಟ್ 28 ರಂದು, ಪ್ರಯಾಗರಾಜ್ ಪೊಲೀಸರು ನಕಲಿ ಕರೆನ್ಸಿ ಗ್ಯಾಂಗ್ ಭೇದಿಸಿ ನಾಲ್ವರು ಶಂಕಿತರನ್ನು ಬಂಧಿಸಿ ಒಟ್ಟು 1,300 ನಕಲಿ 100 ರೂ. ನೋಟುಗಳು, 234 ಮುದ್ರಿತ ಪುಟಗಳು, ಒಂದು ಲ್ಯಾಪ್ಟಾಪ್, ಒಂದು ಕಲರ್ ಪ್ರಿಂಟರ್, ಎರಡು ಬಂಡಲ್ ಬೌಂಡ್ ಪೇಪರ್ ಮತ್ತು ಒಂದು ಬಂಡಲ್ ಅನ್ನು ವಶಪಡಿಸಿಕೊಂಡಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.