ಚನ್ನಗಿರಿ: ನ್ಯಾಮತಿ ಪಟ್ಟಣ ಸುರುವೂನ್ನೇ, ಗಂಜೀನಹಳ್ಳಿ, ಚಟ್ನಹಳ್ಳಿ, ಗ್ರಾಮಗಳಲ್ಲಿ ಕಳೆದ ಜುಲೈ, ಆಗಸ್ಟ್ ತಿಂಗಳಲ್ಲಿ ಸರಣಿ ಕಳ್ಳತನ ನಡೆದಿದ್ದವು.
ನ್ಯಾಮತಿ ಪೊಲೀಸ್ ಇಲಾಖೆ ಕಾರ್ಯಾಚರಣೆ ನಡೆಸಿ, ಕಳ್ಳತನ ಮಾಡಿದಾತರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಚನ್ನಗಿರಿ ಡಿ.ಓ.ಎಸ್.ಪಿ. ರುದ್ರಪ್ಪ ಎಸ್. ಉಜ್ಜನ ಕೊಪ್ಪ ತಿಳಿಸಿದರು.
ಸರಣಿ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು 2 ಆರೋಪಿಗಳನ್ನು ಬಂಧಿಸಿ, ಸ್ವತ್ತುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಚನ್ನಗಿರಿ ಡಿ.ಓ.ಎಸ್.ಪಿ. ರುದ್ರಪ್ಪ ಎಸ್. ಉಜ್ಜನಕೊಪ್ಪ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ನ್ಯಾಮತಿ ಪೊಲೀಸ್ ಠಾಣೆಯಲ್ಲಿ 8 ಮನೆಗಳ್ಳತನ ಪ್ರಕರಣಗಳು ವರದಿಯಾಗಿದ್ದು, ಇದನ್ನು ಮನಗೊಂಡು ಎಸ್.ಪಿ. ಉಮಾ ಪ್ರಶಾಂತ್ ದಾವಣಗೆರೆ ಹಾಗೂ ಹೆಚ್ಚುವರಿ ಪೊಲೀಸ್ ಅಧ್ಯಕ್ಷ ವಿಜಯಕು ಮಾರ್, ಎಂ.ಸಂತೋಷ್, ಮಂಜುನಾಥ್ ಕೆ.ಎಸ್.ಪಿ.ಎಸ್. ಅವರ ಮಾರ್ಗದರ್ಶನದಲ್ಲಿ ಈ ಪ್ರಕರಣಗಳ ಪತ್ತೆ ಕಾರ್ಯ ನಡೆದಿದೆ.
ನ್ಯಾಮತಿ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ರವಿ ಎನ್.ಎಸ್. ನೇತೃತ್ವದಲ್ಲಿ ಪಿಎಸ್ಐ ಜಯಪ್ಪನಾಯ್ಕ್ ಮತ್ತು ಸಿಬ್ಬಂದಿಗಳ ತಂಡ ರಚನೆ ಮಾಡಿ ತನಿಖೆ ಕೈಗೊಂಡು ಆರೋಪಿತರ ಪತ್ತೆಗೆ ಸತತ ಪ್ರಯತ್ನ ನಡೆದಿದೆ.
ಈ ಪರಿಣಾಮ ಸೆ.1ರ ಭಾನುವಾರ ಚಿಕ್ಕಬೆನ್ನೂರು ಗ್ರಾಮದ ಸಂತೆಬೆನ್ನೂರು ಹೋಬಳಿಯ ಚನ್ನಗಿರಿ ತಾಲೂಕಿನ ನಿವಾಸಿ, ಕೂಲಿ ಕೆಲಸ ಮಾಡಿಕೊಂಡಿದ್ದ ರಾಮಾ ಅಲಿಯಾಸ್ ಬುಡ್ಡ ರಾಮ (40ವ), ಚೆನ್ನಗಿರಿ ತಾಲೂಕಿನ ಮಾವಿನಕಟ್ಟೆ ನಿವಾಸಿ ಕೂಲಿ ಕೆಲಸ ಮಾಡಿಕೊಂಡಿದ್ದ ಸಂತೋಷ್ ಟಿ. (48 ವ) ಎಂಬವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ.
ಆರೋಪಿಗಳ ವಿಚಾರಣೆ ವೇಳೆ ಧನಂಜಯ ಹಾಗೂ ಮುಕೇಶ್ ಇವರಿಬ್ಬರ ಜೊತೆ ಸೇರಿಕೊಂಡು 4 ಜನ ತಂಡ ಮಾಡಿಕೊಂಡು ಜುಲೈ, ಆಗಸ್ಟ್ ತಿಂಗಳಲ್ಲಿ ನ್ಯಾಮತಿ ಪಟ್ಟಣ ಸುರುವನ್ನೇ, ಗಂಜೀನಹಳ್ಳಿ, ಚಟ್ನಳ್ಳಿ ಗ್ರಾಮಗಳಲ್ಲಿ ಮನೆಗಳ ಕಳ್ಳತನ ಮಾಡಿರುವ ಬಗ್ಗೆ ಒಪ್ಪಿಕೊಂಡಿದ್ದಾರೆ.
ಇವರಿಂದ 8 ಮನೆಗಳಲ್ಲಿ ಕಳ್ಳತನ ಪ್ರಕರಣಗಳನ್ನು ಪತ್ತೆ ಮಾಡಿ ಪ್ರಕರಣಗಳಿಗೆ ಸಂಬಂಧಿಸಿದ ಒಟ್ಟು 80 ಗ್ರಾಂ ಚಿನ್ನ ಹಾಗೂ 810 ಗ್ರಾಂ ಬೆಳ್ಳಿ ಸೇರಿದಂತೆ ಎಲ್ಲಾ ಆಭರಣಗಳನ್ನು ವಸಪಡಿಸಿಕೊಳ್ಳಲಾಗಿದೆ. ಅವುಗಳ ಒಟ್ಟು ಮೌಲ್ಯ ಸುಮಾರು 6,20,000 ಆಗಿರಬಹುದು ಎಂದು ಅಂದಾಜಿಸಲಾಗಿದೆ.
ಬಂಧಿತ ಆರೋಪಿಗಳಾದ ರಾಮ ಮತ್ತು ಸಂತೋಷ್ ಅವರನ್ನು ಹಾಲಿ ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದರು.
ಎಸ್.ಪಿ. ಉಮಾ ಪ್ರಶಾಂತ್, ಅಡಿಷನಲ್ ಎಸ್.ಪಿ. ವಿಜಯಕುಮಾರ್, ಎಂ. ಸಂತೋಷ್, ಮಂಜುನಾಥ್ ಕೆ.ಎಸ್.ಪಿ.ಎಸ್. ಮತ್ತು ರುದ್ರಪ್ಪ ಎಸ್. ಉಜ್ಜನ ಕೊಪ್ಪ ಚನ್ನಗಿರಿ ಉಪವಿಭಾಗ ಚನ್ನಗಿರಿರವರು ನ್ಯಾಮತಿ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಪತ್ತೆ ಕಾರ್ಯಕ್ಕೆ ಶ್ಲಾಘಿಸಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.