ಮನೆ ಸ್ಥಳೀಯ ಇಂದು ಗಜಪಡೆಯ ಎರಡನೇ ತಂಡ ಕಾಡಿನಿಂದ ನಾಡಿಗೆ ಆಗಮನ

ಇಂದು ಗಜಪಡೆಯ ಎರಡನೇ ತಂಡ ಕಾಡಿನಿಂದ ನಾಡಿಗೆ ಆಗಮನ

0

ಬೆಂಗಳೂರು: ವಿಶ್ವವಿಖ್ಯಾತ ಮೈಸೂರು ದಸರಾ ಪ್ರಧಾನ ಆಕರ್ಷಣೆಯಾದ ಜಂಬೂಸವಾರಿಯಲ್ಲಿ ಪಾಲ್ಗೊಳ್ಳಲು ಎರಡನೇ ತಂಡದಲ್ಲಿ 5 ಆನೆಗಳು ಇಂದು ಕಾಡಿನಿಂದ ನಾಡಿಗೆ ಹೊರಟಿವೆ.

Join Our Whatsapp Group


ಈ ಬಾರಿಯೂ ನಾಡದೇವಿ ಚಾಮುಂಡೇಶ್ವರಿ ವಿಗ್ರಹವುಳ್ಳ ಚಿನ್ನದ ಅಂಬಾರಿಯನ್ನು ಹೊರುವ ಅಭಿಮನ್ಯು ತಂಡಕ್ಕೆ ಇಂದು ಮಹೇಂದ್ರ, ಸುಗ್ರೀವ, ಹಿರಣ್ಯ, ಲಕ್ಷ್ಮೀ ಮತ್ತು ಪ್ರಶಾಂತ ಆನೆಗಳು ಸೇರ್ಪಡೆಯಾಗಲಿವೆ.
ವೀರನಹೊಸಹಳ್ಳಿಯಲ್ಲಿ ಆ.21ರಂದು ವಿಧ್ಯುಕ್ತವಾಗಿ ಆನೆಗಳಿಗೆ ಪೂಜೆ ಸಲ್ಲಿಸಿ ಗಜಪಯಣಕ್ಕೆ ಚಾಲನೆ ನೀಡಲಾಗಿತ್ತು. ಮೊದಲ ತಂಡದಲ್ಲಿ ಅಭಿಮನ್ಯು, ಗೋಪಿ, ಭೀಮ, ಧನಂಜಯ, ರೋಹಿತ, ಏಕಲವ್ಯ ಕಂಜನ್, ವರಲಕ್ಷ್ಮೀ ಮತ್ತು ದೊಡ್ಡ ಹರವೇ ಲಕ್ಷ್ಮೀ ಆನೆಗಳು ಮೈಸೂರಿಗೆ ಆಗಮಿಸಿದ್ದವು.
ಇಂದು ಸಂಜೆ ಎರಡನೇ ಹಂತದಲ್ಲಿ 5 ಆನೆಗಳು ಮೈಸೂರು ಅರಮನೆ ಆವರಣಕ್ಕೆ ಆಗಮಿಸಲಿದ್ದು, ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಿ ಸ್ವಾಗತ ಕೋರಲಾಗುವುದು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.