ಮನೆ ಅಪರಾಧ ಬಾವನನ್ನೇ ಚಾಕುವಿನಿಂದ ಇರಿದು ಕೊಂದ ಬಾಮೈದ

ಬಾವನನ್ನೇ ಚಾಕುವಿನಿಂದ ಇರಿದು ಕೊಂದ ಬಾಮೈದ

0

ಬೆಂಗಳೂರು: ಬೆಂಗಳೂರಿನಲ್ಲಿ ಚಾಕುವಿನಿಂದ ಇರಿದು ಬಾವನನ್ನೇ ಬಾಮೈದ ಕೊಂದ ಘಟನೆ ಬ್ಯಾಟರಾಯನಪುರದ ಸ್ಯಾಟ್​ಲೈಟ್ ಬಸ್ ನಿಲ್ದಾಣದ ನಡೆದಿದೆ. ವೆಂಕಟಾಚಲಪತಿ(46) ಕೊಲೆ ಮಾಡಿದ ಆರೋಪಿ ವಿಶ್ವನಾಥ್​ನನ್ನು ಪೊಲೀಸರು ಬಂಧಿಸಿದ್ದಾರೆ.

Join Our Whatsapp Group

ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಕೊಲೆ ಆರೋಪಿ ವಿಶ್ವನಾಥ್​ ನನ್ನು ಕೊಲೆಯಾದ ಬಾವ ವೆಂಕಟಾಚಲಪತಿ, ನಿಮ್ಹಾನ್ಸ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸುತ್ತಿದ್ದರು. ಅಷ್ಟೇ ಅಲ್ಲದೆ 15 ದಿನಗಳ ಹಿಂದೆ ವಿಶ್ವನಾಥ್ ​ಗಾಗಿ ವೆಂಕಟಾಚಲಪತಿಯವರು ಹೊಸಗುಡ್ಡದಹಳ್ಳಿಯಲ್ಲಿ ಬಾಡಿಗೆ ಮನೆ ಸಹ ಮಾಡಿದ್ದರು. ಆದರೆ ಇಷ್ಟೆಲ್ಲಾ ಸಹಾಯ ಮಾಡಿದ ಬಾವನನ್ನೇ ಕೊಲೆ ಮಾಡಿದ್ದಾನೆ.

ಕೊಲೆಯಾದ ವೆಂಕಟಾಚಲಪತಿ ಟಿ.ಆರ್.ಮಿಲ್ ನಿವಾಸಿ. ಇನ್ನು ಮತ್ತೊಂದೆಡೆ ಆರೋಪಿ ವಿಶ್ವನಾಥ್​ನನ್ನು ಮಾತಾಡಿಸಲು ಮನೆಗೆ ಬಂದಿದ್ದ ಸಹೋದರಿಯ ಮೇಲೂ ವಿಶ್ವನಾಥ್ ದರ್ಪ ಮೆರೆದಿದ್ದಾನೆ. ಸಹೋದರಿಗೂ ಥಳಿಸಿ ಮನೆಯಿಂದ ಹೊರದಬ್ಬಿದ್ದಾನೆ. ಇದನ್ನು ಪ್ರಶ್ನಿಸಲು ವಿಶ್ವನಾಥ್​ ಮನೆಗೆ ವೆಂಕಟಾಚಲಪತಿ ಬಂದಾಗ ಚಾಕುವಿನಿಂದ ಹಲ್ಲೆ ನಡೆಸಿ 10ಕ್ಕೂ ಹೆಚ್ಚು ಬಾರಿ ಇರಿದು ಕೊಲೆ ಮಾಡಿದ್ದಾನೆ. ಕೊಲೆಗೈದ ನಂತರ ಮನೆ ಹೊರಗೆ ಚಾಕು ಹಿಡಿದು ಓಡಾಡುತ್ತ ಪಕ್ಕದ ಮನೆಯವರಿಗೆ ನಮ್ಮ ಬಾವನನ್ನು ಕೊಂದಿದ್ದೇನೆ ಎಂದು ಕಿರುಚಾಡಿದ್ದಾನೆ.

ಈ ವಿಷಯ ಕಿವಿಗೆ ಬೀಳುತ್ತಿದ್ದಂತೆ ಕೂಡಲೇ ಸ್ಥಳೀಯರು ಬ್ಯಾಟರಾಯನಪುರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ಆರೋಪಿ ವಿಶ್ವನಾಥ್​ನನ್ನು ಬಂಧಿಸಿದ್ದಾರೆ. ವೆಂಕಟಾಚಲಪತಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.