ಚಿಕ್ಕಬಳ್ಳಾಪುರ: ಚಿಂತಾಮಣಿ ನಗರದ ಎಪಿಎಂಸಿ ಮಾರುಕಟ್ಟೆಯ ಅಂಗಡಿಯೊಂದರ ಕ್ಯಾಶ್ ಟೇಬಲ್ ಮುರಿದ ಕಳ್ಳರು 5 ಲಕ್ಷ ರೂ. ಎಗರಿಸಿರುವ ಘಟನೆ ಕೈಲಾಸ್ ಟ್ರೇಡರ್ಸ್ ಎಂಬ ಅಂಗಡಿಯಲ್ಲಿ ನಡೆದಿದೆ.
ಸಂತೆ ದಿನವಾದ ಭಾನುವಾರ ಹೆಚ್ಚು ಗ್ರಾಹಕರು ಅಕ್ಕಿ ಖರೀದಿಸಲು ಬಂದಿದ್ದರು. ಹೀಗೆ ಬಂದಿದ್ದ ಗಿರಾಕಿಯೊಬ್ಬರಿಗೆ ಎರಡು ಮೂಟೆ ಅಕ್ಕಿ ಮಾರಾಟ ಮಾಡಲಾಗಿತ್ತು. ತದನಂತರ ಪಕ್ಕದ ಅಂಗಡಿಯಲ್ಲಿ ತಮಗೆ ಬೇಕಾದ ಅಕ್ಕಿ ಖರೀದಿಸಲು ಮಾಲೀಕ ಎಂ.ಎಲ್.ರಾಮಕೃಷ್ಣಪ್ಪ ತೆರಳಿದ್ದರು. ಅಲ್ಲಿಂದ ಬರುವಷ್ಟರಲ್ಲಿ ಕ್ಯಾಷ್ ಟೇಬಲ್ ಮುರಿದ ಕಳ್ಳರು ಕೆಲವೇ ಕ್ಷಣಗಳಲ್ಲಿ ಹಣ ದೋಚಿದ್ದಾರೆ.
ಸಂತೆಯ ದಿನ ಎಪಿಎಂಸಿ ಮಾರುಕಟ್ಟೆಯಲ್ಲಿ ಲಕ್ಷಾಂತರ ರೂಪಾಯಿ ವಹಿವಾಟು ನಡೆಯುತ್ತದೆ. ಕೈಲಾಸ್ ಟ್ರೇಡರ್ಸ್ ಮಾಲೀಕರು ಮಾರಾಟ ಮಾಡಿದ್ದ ಅಕ್ಕಿಯ ಹಣವನ್ನು ಕ್ಯಾಷ್ ಟೇಬಲ್ನಲ್ಲಿ ಇಟ್ಟಿರುವುದನ್ನು ಗಮನಿಸಿರುವ ಕಳ್ಳರು ಈ ಕೃತ್ಯ ಎಸಗಿದ್ದಾರೆ. ಈ ಕುರಿತು ಎಂ.ಎಲ್.ರಾಮಕೃಷ್ಣ ಚಿಂತಾಮಣಿ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಎಫ್ಐಆರ್ ದಾಖಲಾಗಿದೆ.
ನಗರ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆರಳಚ್ಚು ತಜ್ಞರು ಮತ್ತು ಶ್ವಾನದಳವರು ಆಗಮಿಸಿ ತಪಾಸಣೆ ನಡೆಸಿದ್ದಾರೆ. ಪ್ರಕರಣದ ತನಿಖೆ ನಡೆಯುತ್ತಿದೆ.
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅರೆಕಾಲಿಕ ಅತಿಥಿ ಉಪನ್ಯಾಸಕರ ಭರ್ತಿ
ಈರುಳ್ಳಿ ಮೇಲಿರುವ ಕಪ್ಪು ಚುಕ್ಕೆ ತರುತ್ತೆ ಆಪತ್ತು ಆರೋಗ್ಯಕ್ಕೆ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.