ಮನೆ ಅಪರಾಧ ಗಣೇಶ ಮೂರ್ತಿ ಮೆರವಣಿಗೆಯಲ್ಲಿ ಬಿಜೆಪಿಗನಿಂದ ಲೈಂಗಿಕ ಕಿರುಕುಳ

ಗಣೇಶ ಮೂರ್ತಿ ಮೆರವಣಿಗೆಯಲ್ಲಿ ಬಿಜೆಪಿಗನಿಂದ ಲೈಂಗಿಕ ಕಿರುಕುಳ

0

ರಾಮನಗರ: ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ ಮಹಿಳೆಗೆ ಚನ್ನಪಟ್ಟಣ ತಾ. ಬಿಜೆಪಿ ಅಧ್ಯಕ್ಷ ಟಿ.ಎಸ್‌.ರಾಜು ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದ್ದು ಈ ಬಗ್ಗೆ ಅಕ್ಕೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Join Our Whatsapp Group

ತೂಬಿನಕೆರೆ ಗ್ರಾಮದಲ್ಲಿ ಶನಿವಾರ ಗಣೇಶ ವಿಸರ್ಜನೆ ಮೆರವಣಿಗೆ ನೋಡುತ್ತ ನಿಂತಿದ್ದ ಗೃಹಿಣಿಯನ್ನು ಅವರ ಮನೆ ಬಳಿ ಹಿಂಬದಿಯಿಂದ ಬಂದು ಟಿ.ಎಸ್‌.ರಾಜು ಹಿಡಿದುಕೊಂಡು ಅಸಭ್ಯವಾಗಿ ವರ್ತಿಸಿ, ಲೈಂಗಿಕ ಕಿರುಕುಳ ನೀಡಿದ್ದಾನೆ. ಅಲ್ಲದೆ ಮಹಿಳೆಯ ಫೋಟೋವನ್ನು ತೆಗೆದಿದ್ದಾನೆ.

ಈ ಘಟನೆಯಿಂದ ವಿಚಲಿತಳಾದ ಮಹಿಳೆ, ತನ್ನ ಅಣ್ಣನಿಗೆ ಮಾಹಿತಿ ನೀಡಿದ್ದು, ಅಕ್ಕೂರು ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಅಮಾನತು: ಘಟನೆ ಹಿನ್ನೆಲೆಯಲ್ಲಿ ತಾ.ಬಿಜೆಪಿ ಅಧ್ಯಕ್ಷ ಸ್ಥಾನದಿಂದ ಟಿ.ಎಸ್‌.ರಾಜು ಅವರನ್ನು ಅಮಾನತುಗೊಳಿಸಿ ಬಿಜೆಪಿ ಜಿಲ್ಲಾಧ್ಯಕ್ಷ ಆನಂದ ಸ್ವಾಮಿ ಆದೇಶ ಹೊರಡಿಸಿದ್ದಾರೆ. ರಾಜು ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.