ಮುಂಬರುವ ಜಮ್ಮು ಕಾಶ್ಮೀರ ವಿಧಾನಸಭಾ ಚುನಾವಣೆಯಲ್ಲಿ ಅವಾಮಿ ಇತ್ತೆಹಾದ್ ಪಕ್ಷದ ಪ್ರಚಾರ ಕೈಗೊಳ್ಳಲು ಅನುವಾಗುವಂತೆ ಬಾರಾಮುಲ್ಲಾ ಕ್ಷೇತ್ರದ ಸಂಸದ ಎಂಜಿನಿಯರ್ ರಶೀದ್ ಅವರಿಗೆ ದೆಹಲಿ ನ್ಯಾಯಾಲಯ ಮಂಗಳವಾರ ಮಧ್ಯಂತರ ಜಾಮೀನು ನೀಡಿದೆ.
ರಶೀದ್ ಅವರಿಗೆ ಅಕ್ಟೋಬರ್ 2 ರವರೆಗೆ ಮಧ್ಯಂತರ ಜಾಮೀನು ನೀಡಿ ಪಟಿಯಾಲಾ ಹೌಸ್ ನ್ಯಾಯಾಲಯದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶರಾದ ಚಂದರ್ ಜಿತ್ ಸಿಂಗ್ ಆದೇಶ ಹೊರಡಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಸೆಪ್ಟೆಂಬರ್ 18 ರಿಂದ ಅಕ್ಟೋಬರ್ 1ರವರೆಗೆ ಮೂರು ಹಂತಗಳಲ್ಲಿ ವಿಧಾನಸಭೆ ಚುನಾವಣೆ ನಿಗದಿಯಾಗಿದೆ. ಅಕ್ಟೋಬರ್ 8 ರಂದು ಮತ ಎಣಿಕೆ ನಡೆಯಲಿದೆ.
ಭಯೋತ್ಪಾದನೆಗಾಗಿ ನಿಧಿ ಸಂಗ್ರಹ ಮಾಡಿದ್ದಕ್ಕಾಗಿ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆಯಡಿ ಆರೋಪ ಎದುರಿಸುತ್ತಿರುವ ರಶೀದ್ ಪ್ರಸ್ತುತ ತಿಹಾರ್ ಜೈಲಿನಲ್ಲಿದ್ದಾರೆ. ಈ ಹಿಂದೆ ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಲು ಅನುವಾಗುವಂತೆ ಇದೇ ನ್ಯಾಯಾಲಯ ಅವರಿಗೆ ಮಧ್ಯಂತರ ಜಾಮೀನು ನೀಡಿತ್ತು.
ರಶೀದ್ ಅವರು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರನ್ನು ಎರಡು ಲಕ್ಷ ಮತಗಳಿಂದ ಸೋಲಿಸುವ ಮೂಲಕ ಬಾರಾಮುಲ್ಲಾ ಲೋಕಸಭಾ ಕ್ಷೇತ್ರದ ಸಂಸದರಾಗಿದ್ದರು. ಅವರು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಜಮ್ಮು ಮತ್ತು ಕಾಶ್ಮೀರ ಪೀಪಲ್ಸ್ ಕಾನ್ಫರೆನ್ಸ್ ನಾಯಕ ಸಜ್ಜದ್ ಗನಿ ಲೋನ್ ಕೂಡ ಇದೇ ಕ್ಷೇತ್ರದಿಂದ ಸ್ಪರ್ಧಿಸಿದ್ದರು.
ರಶೀದ್ ಈ ಹಿಂದೆ ವಿಧಾನಸಭೆಯ ಸದಸ್ಯರೂ ಆಗಿದ್ದರು. ಲೋಕಸಭಾ ಚುನಾವಣೆಯಲ್ಲಿ ಅವರ ಪರವಾಗಿ ಅವರ ಮಕ್ಕಳಾದ ಅಬ್ರಾರ್ ರಶೀದ್ ಮತ್ತು ಅಸ್ರಾರ್ ರಶೀದ್ ಪ್ರಚಾರ ಕಾರ್ಯ ಕೈಗೊಂಡಿದ್ದರು.
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅರೆಕಾಲಿಕ ಅತಿಥಿ ಉಪನ್ಯಾಸಕರ ಭರ್ತಿ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.