ಮನೆ ರಾಜಕೀಯ ರಾಜ್ಯಕ್ಕೆ ಮಹಿಳಾ ಮುಖ್ಯಮಂತ್ರಿ ವಿಚಾರ ಈಗ ನಗಣ್ಯ: ಲಕ್ಷ್ಮಿ ಹೆಬ್ಬಾಳಕರ

ರಾಜ್ಯಕ್ಕೆ ಮಹಿಳಾ ಮುಖ್ಯಮಂತ್ರಿ ವಿಚಾರ ಈಗ ನಗಣ್ಯ: ಲಕ್ಷ್ಮಿ ಹೆಬ್ಬಾಳಕರ

0

ಬೆಳಗಾವಿ: ರಾಜ್ಯಕ್ಕೆ ಮಹಿಳಾ ಮುಖ್ಯಮಂತ್ರಿ ಬೇಕು ಎಂದು ಯಾರಾದರೂ ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ ಆರಂಭಿಸಿದ್ದರೆ ಸದ್ಯ ಅದು‌ ನಗಣ್ಯ. ಅದಕ್ಕೆ ನನ್ನ ಸಮ್ಮತಿಯೂ ಇಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಹೇಳಿದರು.

Join Our Whatsapp Group

ನಗರದಲ್ಲಿ ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು‌, ಮುಖ್ಯಮಂತ್ರಿ ಯಾರಾಗಬೇಕು ಎಂಬುದು ಹಾದಿ, ಬೀದಿಯಲ್ಲಿ ಚರ್ಚೆ ಮಾಡುವಂಥ ವಿಷಯವಲ್ಲ. ಸಿದ್ದರಾಮಯ್ಯ ಗಟ್ಟಿ ನಾಯಕರು. ಎಲ್ಲಿಯವರೆಗೆ ಹೈಕಮಾಂಡ್ ಬಯಸುವುದೋ ಅಲ್ಲಿಯವರೆಗೆ ಅವರೇ ಮುಖ್ಯಮಂತ್ರಿ ಎಂದರು.

‘ಮುಡಾ’ ಹಗರಣದಲ್ಲಿ ಬಿಜೆಪಿಯವರು ಸುಳ್ಳು ದಾಖಲೆ ಹುಟ್ಟಿಸಿ ಸರ್ಕಾರಕ್ಕೆ ಕೆಟ್ಟ ಹೆಸರು ತರುವ ಯತ್ನ ನಡೆಸಿದ್ದಾರೆ. ಇಂಥ ಪರಿಸ್ಥಿತಿಯಲ್ಲಿ ಎಲ್ಲ 135 ಶಾಸಕರು ಸಿದ್ದರಾಮಯ್ಯ ಅವರ ಬೆನ್ನಿಗೆ ಗಟ್ಟಿಯಾಗಿ ನಿಂತಿದ್ದೇವೆ. ನಾನು ಮೊದಲ‌ ಮಹಿಳಾ ಮುಖ್ಯಮಂತ್ರಿ ಎಂದೆಲ್ಲ ಪ್ರಚಾರ ಮಾಡುವುದು ಬಾಲಿಷ ಎಂದರು.

‘ಸಿ.ಎಂ ಸ್ಥಾನದ ಆಕಾಂಕ್ಷಿ’ ಎಂದು ಕೆಲ ನಾಯಕರು ಹೇಳಿಕೆ ನೀಡಿರಬಹುದು. ಆದರೆ, ನಾನು ಜವಾಬ್ದಾರಿಯುತ ಪಕ್ಷದ ಶಿಸ್ತಿನ ಸಿಪಾಯಿ. ನಮ್ಮದು ಶಿಸ್ತಿನ ಪಕ್ಷ. ನಾವು ಬಯಸುವುದಲ್ಲ; ಪಕ್ಷ ಬಯಸಬೇಕು ಎಂದು ವ್ಯಂಗ್ಯ ಮಾಡಿದರು.