ಮೈಸೂರು: ಮೈಸೂರಿನ ದೊಡ್ಡಾಸ್ಪತ್ರೆ ಎಂದೇ ಖ್ಯಾತಿ ಗಳಿಸಿರುವ ಕೆ.ಆರ್.ಆಸ್ಪತ್ರೆ ವೈದ್ಯರು ದೇಶದಲ್ಲಿಯೇ ಅಪರೂಪ ಎನಿಸಿರುವ ಶಸ್ತ್ರಚಿಕಿತ್ಸೆ ನಡೆಸುವ ಮೂಲಕ ದೇಶದ ಗಮನ ಸೆಳೆದಿದ್ದಾರೆ.
ಲಿವರ್ ಕ್ಯಾನ್ಸರ್ ನಿಂದ ಬಳಲುತ್ತಿದ್ದ 72 ವರ್ಷದ ವಯೋವೃದ್ಧರ ಬಲಭಾಗದ ಯಕೃತ್ ಯಶಸ್ವಿ ಶಸ್ತ್ರ ಚಿಕಿತ್ಸೆ ನಡೆಸುವ ಮೂಲಕ ಹೊಸ ಭಾಷ್ಯ ಬರೆದಿದ್ದಾರೆ. ವಿಶೇಷವೆಂದರೆ ಶಸ್ತ್ರಚಿಕಿತ್ಸೆ ನಡೆಸಿದ ಕೇವಲ ಎರಡು ವಾರಗಳಲ್ಲಿ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
72 ವರ್ಷ ವಯೋವೃದ್ಧರಾಗಿರುವ ಕಾರಣ ಶಸ್ತ್ರಚಿಕಿತ್ಸೆ ಸವಾಲಾಗಿತ್ತು. ಯಕೃತ್ ಭಾಗದ ಶೇ.60 ರಷ್ಟು ಭಾಗ ತೆಗೆದು ಆಪರೇಷನ್ ಮಾಡಿ ಜೀವ ಉಳಿಸುವುದು ಕಷ್ಟಸಾಧ್ಯ. ಆದರೆ ನಮ್ಮಲ್ಲಿರುವ ಸಿಬ್ಬಂದಿಗಳ ಕಠಿಣ ಶ್ರಮದಿಂದ ಸಾಧ್ಯವಾಗಿದೆ. ಯಾವುದೇ ಅತ್ಯಾಧುನಿಕ ಉಪಕರಣಗಳಿಲ್ಲದೇ ಎಲ್ಲಾ ವೈದ್ಯರ ಶ್ರಮದಿಂದ ರೋಗಿ ಕೇವಲ ಎರಡು ವಾರದಲ್ಲಿಯೇ ಸಂಪೂರ್ಣ ಗುಣಮುಖರಾಗಿರುವುದು ಪವಾಡವಾಗಿದೆ. ರೋಗಿಗಳು ಸರ್ಕಾರಿ ಆಸ್ಪತ್ರೆ ಎಂಬ ಕೀಳರಿಮೆ ಬಿಟ್ಟು ಕೆ.ಆರ್.ಆಸ್ಪತ್ರೆಗೆ ಬನ್ನಿ.
– ಡಾ.ನವೀನ್ ಗೌಡ, ಕ್ಯಾನ್ಸರ್ ಶಸ್ತ್ರ ಚಿಕಿತ್ಸಕ, ಕೆ.ಆರ್.ಆಸ್ಪತ್ರೆ
ತೀವ್ರ ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ಮೂಲದ 72 ವರ್ಷದ ವಯೋವೃದ್ಧರ ಯಕೃತ್ ನ ಅರ್ಧ ಭಾಗವನ್ನ ಕತ್ತರಿಸಿ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿ, ರೋಗಿಯ ಆರೋಗ್ಯದಲ್ಲಿ ಏರುಪೇರಾಗದ ರೀತಿ ಎಚ್ಚರಿಕೆ ವಹಿಸಿ ರೋಗಿಯ ಜೀವ ಉಳಿಸುವ ಮೂಲಕ ಹೊಸ ಸಾಧನೆಗೈದಿದ್ದಾರೆ.
ರೋಗಿಯ ಯಕೃತ್ ಶೇ.60 ರಷ್ಟು ಭಾಗ ಕತ್ತರಿಸುವ ವೇಳೆ ಸಾಕಷ್ಟು ಸವಾಲುಗಳು ಎದುರಾಗಿತ್ತು. ಶಸ್ತ್ರ ಚಿಕಿತ್ಸೆ ಸಂದರ್ಭದಲ್ಲಿ ರಕ್ತಸ್ರಾವ ಹೆಚ್ಚಾಗಿದ್ದ ಕಾರಣದಿಂದ ಕ್ಯಾವಿಟ್ರಾನ್ ಅಲ್ಟ್ರಾಸಾನಿಕ್ ಸರ್ಜಿಕಲ್ ಆಸ್ಪಿರೇಟರ್ ( CUSA) ನಂತಹ ಹೈಟೆಕ್ ಉಪಕರಣವನ್ನ ಬಳಸಬೇಕಾದ ಅಗತ್ಯವಿರುತ್ತದೆ.
ವೈದ್ಯೋ ನಾರಾಯಣೋ ಹರಿ ಅಂತ ಕರೆಯುತ್ತಾರೆ. ನನ್ನ ಪಾಲಿಗೆ ವೈದ್ಯರುಗಳು ನಿಜಕ್ಕೂ ದೇವರುಗಳಂತೆ ಕಾಣುತ್ತಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ನನಗೆ ಈ ಘೋರ ಕ್ಯಾನ್ಸರ್ ಕೂಡ ಕಾಡಿತ್ತು. ಆದರೆ ,ವೈದ್ಯರ ಕಠಿಣ ಶ್ರಮದಿಂದ ನನ್ನ ಜೀವ ಉಳಿದಿದೆ. ನಾನು ಅವರಿಗೆಲ್ಲರಿಗೂ ಋಣಿ
– ಕ್ಯಾನ್ಸರ್ ಗೆದ್ದು ಬಂದ ರೋಗಿ
ಸಾಮಾನ್ಯವಾಗಿ ಖಾಸಗಿ ಆಸ್ಪತ್ರೆಗಳಲ್ಲಿ ಮಾತ್ರ ಲಭ್ಯವಿರುವ ಹೈಟೆಕ್ ಸಲಕರಣೆಗಳು ಕೆ.ಆರ್.ಆಸ್ಪತ್ರೆಯಲ್ಲಿ ಲಭ್ಯವಿಲ್ಲ. ಆದರೂ ಕೂಡ CUSA ಉಪಕರಣ ಬಳಸದೆ ಆಸ್ಪತ್ರೆ ವೈದ್ಯರು ಯಶಸ್ವಿ ಶಸ್ತ್ರಚಿಕಿತ್ಸೆ ಮಾಡಿ ಗಮನ ಸೆಳೆದಿದ್ದಾರೆ.
ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಮುಖ್ಯಸ್ಥ ಡಾ.ಎಸ್.ಚಂದ್ರಶೇಖರ್, ಸರ್ಜಿಕಲ್ ಅಂಕೋಲಜಿ ವಿಭಾಗದ ಕ್ಯಾನ್ಸರ್ ತಜ್ಞ ಡಾ.ನವೀನ್ ಗೌಡ, ಸರ್ಜಿಕಲ್ ಗ್ಯಾಸ್ಟ್ರೋ ವಿಭಾಗದ ಡಾ.ಶ್ರೀವತ್ಸ ಅರವಳಿಕೆ ವಿಭಾಗದ ಡಾ.ವಿ.ವೈ.ಶ್ರೀನಿವಾಸ್, ಡಾ.ದೀಪಾ, ಡಾ.ಪೂಲನ್ ತಂಡ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನಡೆಸಿ ರೋಗಿಗೆ ಮರುಜೀವ ನೀಡಿದೆ.
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅರೆಕಾಲಿಕ ಅತಿಥಿ ಉಪನ್ಯಾಸಕರ ಭರ್ತಿ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.