ಹುಬ್ಬಳ್ಳಿ: ತವರು ಮನೆಗೆ ಹೋಗಲು ಯಾವ ಮಹಿಳೆಯಾದರು ಒಲ್ಲೆ ಎನ್ನುತ್ತಾಳೆಯೆ? ಬಿಜೆಪಿಗೆ ಮರಳಲು ನಾನೇಕೆ ಒಲ್ಲೆ ಎನ್ನಲಿ. ತವರು ಮನೆಯಲ್ಲಿ ಕೆಲ ಸಹೋದರರು ಇಲ್ಲಸಲ್ಲದ ಸ್ಥಿತಿ ನಿರ್ಮಿಸಿದ್ದು, ಶೀಘ್ರ ಅದು ಸರಿಯಾಗಿ ಮತ್ತೆ ತವರಿಗೆ ಮರಳುವೆ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿ.ಎಸ್.ಯಡಿಯೂರಪ್ಪ ಕುಟುಂಬದ ಕೈಯಲ್ಲಿಪಕ್ಷ ಸಿಲುಕಿದೆ. ಎಲ್ಲವೂ ಸರಿಯಾಗಲಿದೆ ಎಂಬ ನನಗೆ ವಿಶ್ವಾಸವಿದೆ. ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಆರು ತಿಂಗಳಿಂದ ಖಾಲಿಯಿತ್ತು, ಯಡಿಯೂರಪ್ಪ ಏನೋ ಮಾಡಿ ಶಾಸಕನಾಗಿದ್ದ ಮಗನಿಗೆ ರಾಜ್ಯಾಧ್ಯಕ್ಷ ಸ್ಥಾನ ಕೊಡಿಸಿದ್ದು, ಇದು ಬಹಳ ದಿನ ಉಳಿಯುವುದಿಲ್ಲ ಎಂದರು.
ಕುಟುಂಬ ಹಿಡಿತಕ್ಕೆ ಪಕ್ಷ ಸಿಲುಕಬಾರದು ಎಂಬ ಪ್ರಧಾನಿ ಮೋದಿ ಆಶಯಕ್ಕೆ ವಿರುದ್ಧವಾಗಿ ಕರ್ನಾಟಕದಲ್ಲಿ ಬಿಜೆಪಿ ಸ್ಥಿತಿಯಿದೆ. ಯಡಿಯೂರಪ್ಪ ಕುಟುಂಬ ಕಾಂಗ್ರೆಸ್ ಜತೆ ಹೊಂದಾಣಿಕೆ ಮಾಡಿಕೊಂಡಿದೆ ಎಂಬುದನ್ನು ನಾನು ಹೇಳುತ್ತಿಲ್ಲ. ಸ್ವತಃ ಡಿಸಿಎಂ ಡಿ.ಕೆ.ಶಿವಕುಮಾರ ಬಹಿಂಗವಾಗಿ ವಿಜಯೇಂದ್ರ ನಮ್ಮ ಭಿಕ್ಷೆಯಿಂದ ನೀನು ಗೆದ್ದಿದ್ದೀಯ ಎಂದಿದ್ದು, ಯಡಿಯೂರಪ್ಪ ಬಿಜೆಪಿಗೆ, ಡಿಕೆ ಶಿವಕುಮಾರ್ ಕಾಂಗ್ರೆಸ್ ಕಾರ್ಯಕರ್ತರಿಗೆ ದ್ರೋಹ ಬಗೆದಿದ್ದಾರೆ ಎಂದರು.
ಮುಡಾ ಹಗರಣದಲ್ಲಿ ಸಿಎಂ ವಿರುದ್ದ ಯಾವ ತೀರ್ಪು ಬರುತ್ತದೋ ಗೊತ್ತಿಲ್ಲ. ವ್ಯತಿರಿಕ್ತ ತೀರ್ಪು ಬಂದರೆ ಕೇಜ್ರಿವಾಲ್ ರೀತಿ ಭಂಡತನ ತೋರದೆ ಸಿಎಂ ಮರ್ಯಾದೆಯಿಂದ ರಾಜೀನಾಮೆ ನೀಡಬೇಕು. ಕಾಂಗ್ರೆಸ್ ನಲ್ಲಿ ಸಿಎಂ ಆಕಾಂಕ್ಷಿಗಳ ದೊಡ್ಡ ಪಟ್ಟಿಯಿದೆ. ಬಹಿರಂಗವಾಗಿ ಸಿಎಂ ಬೆಂಬಲ ಎನ್ನುವ ನಾಯಕರು, ಸಿಎಂ ಸ್ಥಾನ ಕ್ಕೆ ನಾನು ಸಿದ್ದ ಎನ್ನುತ್ತಿದ್ದಾರೆ ಎಂದು ಈಶ್ವರಪ್ಪ ಹೇಳಿದರು.
ನಾಗಮಂಗಲದಲ್ಲಿ ಗಣೇಶಮೂರ್ತಿ ವಿಸರ್ಜನೆ ಮೆರವಣಿಗೆ ಮೇಲೆ ಕಲ್ಲು, ಪೆಟ್ರೋಲ್ ಬಾಂಬ್ ತೂರಾಟ ಮಾಡಿದರೂ ಗೃಹ ಸಚಿವರು ಇದೊಂದು ಸಣ್ಣ ಘಟನೆ ಎಂದು ಉದಾಸೀನ ತೋರಿದ್ದಾರೆ. ಗಲಭೆ ಮಾಡಿದ ಗೂಂಡಾಗಳನ್ನು ಬಿಟ್ಟು ಅಮಾಯಕ ಹಿಂದೂಗಳನ್ನು ಬಂಧಿಸುತ್ತಿರುವುದು ನೋಡಿದರೆ ಇದಕ್ಕೆ ಹಿಂದೂ ವಿರೋಧಿ ಸರ್ಕಾರ ಎನ್ನದೆ ಮತ್ತೆ ಏನನ್ನಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.
ಗಣೇಶ ಮೂರ್ತಿಗಳ ವಿಸರ್ಜನೆ ಮೆರವಣಿಗೆ ಮಾಡಬಾರದೆಂದು, ಮಸೀದಿ ಮುಂದೆ ಹೋಗುವಾಗ ಡೊಳ್ಳು, ವಾದ್ಯಗಳನ್ನ ಬಾರಿಸಬಾರದೆಂದು ಏನಾದರು ಕಾನೂನು ಇದೆಯೇ? ರಾಜ್ಯ ಸರ್ಕಾರ ಓಲೈಕೆ ರಾಜಕಾರಣ ಬಿಟ್ಟು ಕಲ್ಲು ತೂರಾಟ ಮಾಡಿದ ರಾಷ್ಟ್ರದ್ರೋಹ ಮನಸ್ಥಿತಿಯ ಗೂಂಡಾಗಳನ್ನು ಕೂಡಲೇ ಬಂಧಿಸಬೇಕು ಎಂದರು.
ಹಿಂದೂಗಳನ್ನ ದುರ್ಬಲರು ಎಂದು ಭಾವಿಸಿದರೆ ಬೇರೆ ರೀತಿಯ ಪರಿಣಾಮ ಎದುರಿಸಬೇಕಾಗುತ್ತದೆ. ಕಲ್ಲು ತೂರಾಟ ಮಾಡಿದ ಗೂಂಡಾಗಳ ಕೃತ್ಯವನ್ನು ಸಿಎಂ, ಡಿಸಿಎಂ, ಗೃಹ ಸಚಿವರು ಸಣ್ಷ ಖಂಡನೆಯೂ ಮಾಡಿಲ್ಲ ಎಂದು ಕಿಡಿಕಾರಿದರು.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.