ಮನೆ ಕಾನೂನು ಬೆಂಗಳೂರು: ಈದ್​ಮಿಲಾದ್​ ನಲ್ಲಿ ಡಿಜೆ ಬಳಸದಂತೆ, ಹರಿತವಾದ ಆಯುಧ ಇಟ್ಟುಕೊಳ್ಳದಂತೆ ಸೂಚನೆ

ಬೆಂಗಳೂರು: ಈದ್​ಮಿಲಾದ್​ ನಲ್ಲಿ ಡಿಜೆ ಬಳಸದಂತೆ, ಹರಿತವಾದ ಆಯುಧ ಇಟ್ಟುಕೊಳ್ಳದಂತೆ ಸೂಚನೆ

0

ಬೆಂಗಳೂರು: ಈದ್‌ಮಿಲಾದ್   ಹಬ್ಬದ ಪ್ರಯುಕ್ತ ಬೆಂಗಳೂರು ನಗರ ಪೊಲೀಸರು  ಕೆಲ ಸೂಚನೆಗಳನ್ನು ಹೊರಡಿಸಿದ್ದಾರೆ.

Join Our Whatsapp Group

ಈದ್‌ಮಿಲಾದ್ ಹಬ್ಬದ ದಿನ ನಗರದಲ್ಲಿ ಮುಸ್ಲಿಮರು ಮೆರವಣಿಗೆ ನಡೆಸಲಿದ್ದಾರೆ. ವೈ.ಎಂ.ಸಿ.ಎ. ಮೈದಾನ, ಮಿಲ್ಲರ್ನ ರಸ್ತೆ ಖುದ್ದುಸಾಬ್ ಈದ್ಗಾ ಮೈದಾನ, ಶಿವಾಜಿನಗರ ಛೋಟಾ ಮೈದಾನ, ಭಾರತೀನಗರದ ಸುಲ್ತಾನ್‌ಜೀ ಗುಂಟಾ ಮೈದಾನಗಳಲ್ಲಿ ಹಾಗೂ ಇತರೆಡೆಗಳಲ್ಲಿ ಕಾರ್ಯಕ್ರಮಗಳು ನಡೆಯಲಿವೆ. ಈ ಸಂಬಂಧ ಹಬ್ಬದ ದಿನದಂದು ಕೆಲವು ಸೂಚನೆಗಳನ್ನು ಪಾಲಿಸುವಂತೆ ಬೆಂಗಳೂರು ಪೊಲೀಸ್​ ಆದೇಶ ಹೊರಡಿಸಿದೆ.

ಸೂಚನೆಗಳು

ಮೆರವಣಿಗೆಯಲ್ಲಿ ಪಾಲ್ಗೊಳ್ಳುವವರು ಯಾವುದೆ ಹರಿತವಾದ ವಸ್ತುಗಳನ್ನು ಹೊಂದಿರಬಾರದು.

ಮೆರವಣಿಗೆಯ ಸಮಯದಲ್ಲಿ ಯಾವುದೇ ಕಾರಣಕ್ಕೂ ಡಿಜೆಗಳನ್ನು ಬಳಸಬಾರದು.

ಸ್ತಬ್ದ ಚಿತ್ರಗಳು ಯಾವುದೇ ಪ್ರಚೋದನಾತ್ಮಕ ಅಂಶಗಳನ್ನು ಒಳಗೊಂಡಿರಬಾರದು.

ಯಾವುದೇ ಪೂಜಾ ಸ್ಥಳಗಳ (ದೇವಸ್ಥಾನ/ಚರ್ಚಗಳ) ಮುಂಭಾಗದಲ್ಲಿ ಘೋಷಣೆಗಳನ್ನು ಕೂಗಬಾರದು.

ಮೆರವಣಿಗೆಯ ಸಮಯದಲ್ಲಿ ಆಯೋಜಕರು ವಿದ್ಯುತ್ (ಕೆ.ಇ.ಬಿ) ಇಲಾಖೆಯಿಂದ ಸಿಬ್ಬಂದಿಯವರನ್ನು ನೇಮಿಸಿಕೊಂಡು ಯಾವುದೇ ವಿದ್ಯುತ್ ಸಂಪರ್ಕಕ್ಕೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು.

ಮೆರವಣಿಗೆಯ ಸಂದರ್ಭದಲ್ಲಿ ಆಯೋಜಕರು ಬೆಂಕಿನಿಂದಿಸುವ ಸಾಮಗ್ರಿಯನ್ನು ಇಟ್ಟುಕೊಳ್ಳಬೇಕು.

ರಾತ್ರಿ ಮೆರವಣಿಗೆ ಮುಗಿದ ನಂತರ ಬೈಕ್‌ನಲ್ಲಿ ಇಬ್ಬರಿಗಿಂತ ಹೆಚ್ಚಾಗಿ ದ್ವಿ-ಚಕ್ರ ವಾಹನವನ್ನು ಚಲಿಸಬಾರದು.

ಹಿರಿಯ ನಾಗಕರಿಕರಿಗೆ ಶಾಲಾ ಮಕ್ಕಳಿಗೆ ಹಾಗೂ ಇತರರಿಗೆ ತೊಂದರೆಯಾಗದಂತೆ ಧ್ವನಿವರ್ಧಕಗಳನ್ನು ಬೆಳಿಗ್ಗೆ 06-00 ಗಂಟೆಯಿಂದ ರಾತ್ರಿ 10-00 ಗಂಟೆಯವರೆಗೆ ಮಾತ್ರ ಬಳಸಿಕೊಳ್ಳಬೇಕು.

ಧ್ವನಿವರ್ಧಕಗಳನ್ನು ಬಳಸಲು ಸ್ಥಳೀಯ ಪೊಲೀಸರ ಅನುಮತಿ/ಪರವಾನಗೆ ಪಡೆದುಕೊಳ್ಳಬೇಕು

ಈ ನಿಬಂಧನೆಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಧ್ವನಿವರ್ಧಕಗಳಿಂದ ಹೊರಡುವ ಶಬ್ದದ ಪ್ರಮಾಣವನ್ನು ಕಡಿಮೆ ಮಟ್ಟದಲ್ಲಿ ಇಟ್ಟುಕೊಳ್ಳಬೇಕು. ಹಾಗೂ ಯಾವುದೇ ಕಾರಣಕ್ಕೂ ಡಿ.ಜಿ. ಸೌಂಡ್ ಸಿಸ್ಟಂ ಅಳವಡಿಸಲು ಅವಕಾಶ ಇರುವುದಿಲ್ಲ ಎಂದು ಪೊಲೀಸರು ಹೇಳಿದ್ದಾರೆ.