ಮನೆ ರಾಜಕೀಯ ಗ್ಯಾರಂಟಿ ಯೋಜನೆಗಳು ಮುಂದುವರೆಯಲಿವೆ: ಸಚಿವ ಡಾ.ಜಿ.ಪರಮೇಶ್ವರ್

ಗ್ಯಾರಂಟಿ ಯೋಜನೆಗಳು ಮುಂದುವರೆಯಲಿವೆ: ಸಚಿವ ಡಾ.ಜಿ.ಪರಮೇಶ್ವರ್

0

ತುಮಕೂರು : ರಾಜ್ಯದಲ್ಲಿ ಇನ್ನೂ ಮೂರುವರೆ ವರ್ಷ ಗ್ಯಾರಂಟಿ ಯೋಜನೆಗಳು ಮುಂದುವರೆಯಲಿವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

Join Our Whatsapp Group

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಇನ್ನೂ ಮೂರವರೆ ವರ್ಷ ಗ್ಯಾರಂಟಿ ಯೋಜನೆಗಳು ಮುಂದುವರೆಯಲಿವೆ. ಟೀಕೆ, ಟಿಪ್ಪಣಿ ಬಂದರೂ ಅಭಿವೃದ್ಧಿ ಕೆಲಸಗಳು ಮುಂದುವರೆಯಲಿವೆ ಎಂದು ತಿಳಿಸಿದ್ದಾರೆ.

ಎತ್ತಿನಹೊಳೆ ಯೋಜನೆಯ ಮೊದಲ ಹಂತ ಉದ್ಘಾಟನೆ ಆಗಿದೆ. ತುಮಕೂರಿನಲ್ಲಿ ಮೆಟ್ರೋ ಯೋಜನೆಗೆ ಡಿಪಿಆರ್ ನಡೆಯುತ್ತಿದೆ. ೭೦ ಕೋಟಿ ರೂ. ವೆಚ್ಚದಲ್ಲಿ ಹೃದ್ರೋಗ ಆಸ್ಪತ್ರೆ ನಿರ್ಮಾನ ಮಾಡಲಾಗುವುದು. ತುಮಕೂರು ಭಾಗದಲ್ಲಿ ಜಯದೇವ ಹೃದ್ರೋಗ ಆಸ್ಪತ್ರೆ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು. ೫೦ ಕೋಟಿ ವೆಚ್ಚದಲ್ಲಿ ೫೦ ಹಾಸ್ಟೆಲ್ ಗಳ ನಿರ್ಮಾಣ, ತುಮಕೂರು ವಿವಿ ವರ್ಕಿಂಗ್ ಹಾಸ್ಟೆಲ್ ನಿರ್ಮಾಣ ಮಾಡಲಾಗುವುದು ಎಂದು ಹೇಳಿದ್ದಾರೆ.