ಆರ್ಯ ಸಮಾಜ ಮಂದಿರ ಮತ್ತು ಅದರಂತಹ ಸಂಘ ಸಂಸ್ಥೆಗಳು ನಡೆಸುತ್ತಿರುವ ವಿವಾಹಗಳ ಕುರಿತು ಸಮಗ್ರ ತನಿಖೆ ನಡೆಸುವಂತೆ ಅಲಾಹಾಬಾದ್ ಹೈಕೋರ್ಟ್ ಈಚೆಗೆ ಗೌತಮ ಬುದ್ಧ ನಗರ (ನೋಯ್ಡಾ) ಹಾಗೂ ಗಾಜಿಯಾಬಾದ್ ಪೊಲೀಸ್ ಆಯುಕ್ತರಿಗೆ ಆದೇಶಿಸಿದೆ
ಬಾಲ್ಯವಿವಾಹ ತಡೆ ಕಾಯಿದೆ ಮತ್ತು ಹಿಂದೂ ವಿವಾಹ ಕಾಯಿದೆಯ ಸೆಕ್ಷನ್ಗಳನ್ನು ಉಲ್ಲಂಘಿಸಿ ಈ ಸಂಸ್ಥೆಗಳಲ್ಲಿ ವಿವಾಹ ಏರ್ಪಡುತ್ತಿದೆ ಎಂದು ವಿವಿಧ ಪ್ರಕರಣಗಳ ಪೊಲೀಸ್ ತನಿಖೆಯಿಂದ ಬಹಿರಂಗವಾದ ಹಿನ್ನೆಲೆಯಲ್ಲಿ ನ್ಯಾಯಮೂರ್ತಿ ವಿನೋದ್ ದಿವಾಕರ್ ಅವರು ಈ ಆದೇಶ ನೀಡಿದ್ದಾರೆ.
ದಂಪತಿ ಸಲ್ಲಿಸುವ ಆಧಾರ್ ಕಾರ್ಡ್ಗಳು, ನೋಟರಿ ಅಫಿಡವಿಟ್ಗಳು ಕೂಡ ನಕಲಿ ಎಂದು ಕಂಡುಬಂದಿದ್ದು ವಿವಾಹ ನೋಂದಣಿ ಅಧಿಕಾರಿಗಳು, ಪರಿಶೀಲನೆ ಮಾಡದೆ ನಕಲಿ ಮತ್ತು ಅಮಾನ್ಯ ವಿವಾಹ ಪ್ರಮಾಣಪತ್ರ ಆಧರಿಸಿ ವಿವಾಹ ನೋಂದಾಯಿಸುತ್ತಿದ್ದಾರೆ ಎಂದು ನ್ಯಾಯಾಲಯ ಹೇಳಿದೆ.
ಮೂಲತಃ ಇಂತಹ ವಿವಾಹಗಳು ಮಾನವ ಕಳ್ಳಸಾಗಣೆ, ಲೈಂಗಿಕ ಶೋಷಣೆ ಮತ್ತು ಬಲವಂತದ ದುಡಿಮೆಗೆ ಎಡೆ ಮಾಡಿಕೊಡುತ್ತಿದ್ದು ಸಾಮಾಜಿಕ ಅಸ್ಥಿರತೆ, ಶೋಷಣೆ, ಬಲಾತ್ಕಾರ ಹಾಗೂ ಶಿಕ್ಷಣದ ಅಡಚಣೆಗೆ ಕಾರಣವಾಗುತ್ತಿದೆ. ಅಲ್ಲದೆ ಇಂತಹ ಪ್ರಕರಣಗಳು ನ್ಯಾಯಾಲಯಗಳ ಮೇಲೆ ಭಾರಿ ಹೊರೆ ಉಂಟು ಮಾಡುತ್ತಿವೆ. ಹೀಗಾಗಿ ದಾಖಲೆ ಪರಿಶೀಲನೆ ಮತ್ತು ಸಂಘ ಸಂಸ್ಥೆಗಳ ಹೊಣೆಗಾರಿಕೆಗಾಗಿ ಬಲವಾದ ವ್ಯವಸ್ಥೆ ರೂಪಿಸುವ ಅಗತ್ಯವಿದೆ ಎಂದು ನ್ಯಾಯಾಲಯ ನುಡಿದಿದೆ.
ಅಂತಹ ಸಂಘ ಸಂಸ್ಥೆಗಳ ಹೆಸರು, ಅಲ್ಲಿನ ಪದಾಧಿಕಾರಿಗಳ ವಿವರ, ಓಡಿಹೋದ ಹುಡುಗ ಹುಡುಗಿಯರು ತಮ್ಮ ವಿವಾಹಕ್ಕಾಗಿ ಈ ಸಂಘ ಸಂಸ್ಥೆಗಳನ್ನು ಸಂಪರ್ಕಿಸುವ ರೀತಿ, ನಕಲಿ ಪ್ರಮಾಣಪತ್ರಗಳ ಮೂಲಕ ಅಂತಹ ಜೋಡಿಗೆ ಸಹಾಯ ಮಾಡುವವರ ವಿವರಗಳು, ಸಂಘ ಸಂಸ್ಥೆಗಳ ಹಣಕಾಸಿನ ವಹಿವಾಟು, ದಕ್ಷಿಣೆಯ ಹೆಸರಿನಲ್ಲಿ ಸಂಘಸಂಸ್ಥೆಗಳು ವಿಧಿಸುವ ಶುಲ್ಕ, ನಕಲಿ ದಾಖಲೆಗಳನ್ನು ಸಲ್ಲಿಸಿ ವಿವಾಹವಾಗುವುದರಿಂದ ಹಿಡಿದು ನ್ಯಾಯಾಲಯಕ್ಕೆ ರಕ್ಷಣೆ ಕೋರಿ ಅರ್ಜಿ ಸಲ್ಲಿಸುವವರೆಗೆ ಈ ಅಕ್ರಮ ಜಾಲ ಹೇಗೆ ಕಾರ್ಯ ನಿರ್ವಹಿಸುತ್ತದೆ ಎಂಬ ಕುರಿತು ವಿವರವಾದ ತನಿಖೆ ನಡೆಸುವಂತೆ ನ್ಯಾಯಾಲಯ ಸೂಚಿಸಿದೆ.
ಪೊಲೀಸ್ ರಕ್ಷಣೆ ಕೋರಿ ಜೋಡಿಗಳು ನ್ಯಾಯಾಲಯ ಎಡತಾಕಲು ಅನುವಾಗುವಂತೆ ವಿವಿಧ ಸಂಘ ಸಂಸ್ಥೆಗಳು ನಕಲಿ ವಿವಾಹ ಪ್ರಮಾಣ ಪತ್ರ ನೀಡುತ್ತಿವೆ ಎಂದು ಈ ಹಿಂದಿನ ವಿಚಾರಣೆ ವೇಳೆಯೂ ನ್ಯಾಯಮೂರ್ತಿ ದಿವಾಕರ್ ಪ್ರಸ್ತಾಪಿಸಿದ್ದರು.
ಆ ವಿಚಾರಣೆ ವೇಳೆ ತಾನು ನೀಡಿದ್ದ ಆದೇಶಕ್ಕೆ ಆದ್ಯತೆ ನೀಡದಿರುವುದನ್ನು ಗಮನಿಸಿದ ನ್ಯಾಯಾಲಯ ತನ್ನ ಸೂಚನೆಗಳನ್ನು ಪಾಲಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ತಾಕೀತು ಮಾಡಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.