ಮಹಾರಾಷ್ಟ್ರ: ಅಂತಾರಾಷ್ಟ್ರೀಯ ಉದ್ಯೋಗ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲಂಗಾಣದ ಸೈಬರ್ ಕ್ರೈಂ ಪೊಲೀಸರು ಮುಂಬೈನ ಮಹಿಳೆಯೊಬ್ಬಳನ್ನು ಬಂಧಿಸಿರುವ ಘಟನೆ ನಡೆದಿದೆ.
ಉದ್ಯೋಗ ನೀಡುವ ಆಮೀಷದಲ್ಲಿ ಉದ್ಯೋಗಾಕಾಂಕ್ಷಿಗಳನ್ನು ಕಾಂಬೋಡಿಯಾಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ ಆರೋಪದಡಿ ಚೆಂಬೂರ್ ನ ಪ್ರಿಯಾಂಕಾ ಶಿವಕುಮಾರ್ ಸಿದ್ಧು (30ವರ್ಷ) ಎಂಬಾಕೆಯನ್ನು ಬಂಧಿಸಲಾಗಿದೆ.
ತೆಲಂಗಾಣ ಸೈಬರ್ ಸೆಕ್ಯೂರಿಟಿ ಬ್ಯುರೋದ ಮಾಹಿತಿ ಪ್ರಕಾರ, ಪ್ರಿಯಾಂಕಾ ಉದ್ಯೋಗಾಕಾಂಕ್ಷಿಗಳಿಗೆ ಕಠಿನ ಷರತ್ತು ವಿಧಿಸುವ ಮೂಲಕ ಉದ್ಯೋಗ ನೀಡುವ ಭರವಸೆ ನೀಡುತ್ತಿದ್ದಳು ಎಂದು ತಿಳಿಸಿದೆ.
ಈಕೆ ಪರವಾನಿಗೆ ರಹಿತ ಏಜೆನ್ಸಿಯನ್ನು ಆರಂಭಿಸಿ, ಇದರ ಮೂಲಕ ಉದ್ಯೋಗಾಕಾಂಕ್ಷಿಗಳಿಗೆ ಕಾನೂನುಬದ್ಧ ಉದ್ಯೋಗ ವೀಸಾ ನೀಡುವ ಭರವಸೆ ನೀಡುತ್ತಿದ್ದಳು ಎಂದು ವರದಿ ವಿವರಿಸಿದೆ.
ವರದಿಯ ಪ್ರಕಾರ, ಪ್ರಿಯಾಂಕಾ ವಂಚನೆ ಜಾಲದಲ್ಲಿ ಜಿತೇಂದ್ರ ಶಾ, ನಾರಾಯಣ ಹಾಗೂ ಕಾಂಬೋಡಿಯಾದಲ್ಲಿನ ಚೀನಾ ಮೂಲದ ಕಂಪನಿಯ ನಿರ್ದೇಶಕ ಶಾ ಪ್ರಮುಖ ರೂವಾರಿಯಾಗಿದ್ದಾರೆ ಎಂದು ತಿಳಿಸಿದೆ.
ಉದ್ಯೋಗಾವಕಾಶದ ವಿವರಕ್ಕಾಗಿ ಪ್ರಿಯಾಂಕಾ ಕಾಂಬೋಡಿಯಾಕ್ಕೆ ತೆರಳುತ್ತಿದ್ದು, ಪ್ರತಿ ಒಂದು ಉದ್ಯೋಗದ ಆಫರ್ ಗಾಗಿ ಆಕೆಗೆ 42,000 ರೂಪಾಯಿ ಕಮಿಷನ್ ನೀಡಲಾಗುತ್ತಿತ್ತು. ಹೀಗೆ ವಂಚನೆಗೈದಿರುವ ಈಕೆ ವಿರುದ್ಧ ತೆಲಂಗಾಣ ಸೈಬರ್ ಕ್ರೈಂ ಪೊಲೀಸರು, ಮಾನವ ಕಳ್ಳಸಾಗಣೆ ಮತ್ತು ಸೈಬರ್ ಕ್ರೈಂ ಉಲ್ಲಂಘನೆ ಆರೋಪದಡಿ ಪ್ರಕರಣ ದಾಖಲಿಸಿರುವುದಾಗಿ ವರದಿ ವಿವರಿಸಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.