ಬೆಂಗಳೂರು: ನಟ ದರ್ಶನ್ಗೆ ವಿಶೇಷ ಆತಿಥ್ಯ ನೀಡಿದ ಆರೋಪದ ಬಳಿಕವೂ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಅಕ್ರಮ ಚಟುವಟಿಕೆಗಳು ಕಡಿವಾಣ ಬಿದ್ದಿಲ್ಲ. ಜೈಲಿನ ಮುಖ್ಯಅಧೀಕ್ಷಕರು ಸೇರಿ ಎಲ್ಲಾ ಅಧಿಕಾರಿ ಸಿಬ್ಬಂದಿ ಕಳ್ಳಾಟ ಮತ್ತೆ ಮುಂದುವರಿದಿದ್ದು, ಅದಕ್ಕೆ ಪೂರಕವೆಂಬಂತೆ ಆಗ್ನೇಯ ವಿಭಾಗ ಪೊಲೀಸರ ದಾಳಿ ವೇಳೆ ವಿಲ್ಸನ್ಗಾರ್ಡನ್ ನಾಗನ ಬ್ಯಾರಕ್ನಲ್ಲಿ 18 ಮೊಬೈಲ್ಗಳು ಪತ್ತೆಯಾಗಿವೆ.
ನಟ ದರ್ಶನ್ ಮತ್ತು ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗನಿಗೆ ವಿಶೇಷ ಆತಿಥ್ಯ ನೀಡಿದ ಸಂಬಂಧ ದಾಖಲಾಗಿರುವ ಪ್ರಕರಣ ಹಿನ್ನೆಲೆಯಲ್ಲಿ ಶನಿವಾರ ಸಂಜೆ 4 ಗಂಟೆ ಸುಮಾರಿಗೆ ಆಗ್ನೇಯ ವಿಭಾಗದ ಡಿಸಿಪಿ ಸಾರಾ ಫಾತೀಮಾ ನೇತೃತ್ವದ ಸುಮಾರು 45ಕ್ಕೂ ಅಧಿಕಾರಿಗಳ ತಂಡ ಜೈಲಿನ ಮೇಲೆ ದಾಳಿ ನಡೆಸಿದ್ದು, ರಾತ್ರಿ 7 ಗಂಟೆವರೆಗೂ ತಪಾಸಣೆ ನಡೆಸಿತ್ತು. ಈ ವೇಳೆ ವಿಲ್ಸನ್ ಗಾರ್ಡನ್ ನಾಗ ಹಾಗೂ ಆತನ ಸಹಚರರನ್ನು ಇರಿಸಲಾ ಗಿರುವ ಹೈಸೆಕ್ಯೂರಿಟಿ ಬ್ಯಾರಕ್ನಲ್ಲಿ ಐಫೋನ್ಗಳು ಸೇರಿ 18ಕ್ಕೂ ಹೆಚ್ಚು ಆ್ಯಂಡ್ರೈಡ್ ಮೊಬೈಲ್ಗಳು, ಚಾಕು, ಸಿಗರೆಟ್, ಪೆನ್ಡ್ರೈವ್, ಕುರ್ಚಿಗಳು ಪತ್ತೆಯಾಗಿವೆ.
ಬಟ್ಟೆ, ದಿಬ್ಬುಗಳಲ್ಲಿತ್ತು ಮೊಬೈಲ್ಗಳು: ವಿಲ್ಸನ್ ಗಾರ್ಡನ್ ನಾಗ, ಆತನ ಸಹಚರರು ಹಾಗೂ ಇತರೆ ವಿಚಾರಣಾಧೀನ ಕೈದಿಗಳಿರುವ ಬ್ಯಾರಕ್ನ ಶೋಧದ ವೇಳೆ, ಕೈದಿಗಳು ಬಳಸುವ ದಿಬ್ಬುಗಳು, ಬಟ್ಟೆಗಳ ಬ್ಯಾಗ್ಗಳಲ್ಲಿ ಐಫೋನ್ ಸೇರಿ ದುಬಾರಿ ಮೌಲ್ಯದ ಆ್ಯಂಡ್ರೈಡ್ ಮೊಬೈಲ್ಗಳು ಪತ್ತೆಯಾಗಿವೆ. ಮತ್ತೂಂದು ಸ್ಫೋಟಕ ವಿಚಾರವೆಂದರೆ, ಜೈಲಿನಲ್ಲಿ ಅತ್ಯಾಧುನಿಕ ಮೊಬೈಲ್ ಜಾಮರ್ ಅಳವಡಿಸಿದ್ದರೂ ದಾಳಿಯಲ್ಲಿ ಪತ್ತೆಯಾದ ಮೊಬೈಲ್ಗಳಲ್ಲಿ ನೆಟ್ವರ್ಕ್ ಇರುವುದು ಪತ್ತೆಯಾಗಿದೆ. ಪ್ರಾಥಮಿಕ ಮಾಹಿತಿ ಪ್ರಕಾರ ಮಾನವ ಸಹಿತ ಇರುವ ಟವರ್ ಬ್ಲಾಕಿಂಗ್ ಸಿಸ್ಟಂಗಳನ್ನು ಜೈಲಿನ ಮುಖ್ಯಸ್ಥರ ಸೂಚನೆ ಮೇರೆಗೆ ಕೆಲ ಸಿಬ್ಬಂದಿ ಅಥವಾ ಕೈದಿಗಳು ಆಫ್ ಮಾಡುತ್ತಾರೆ. ಸಾಮಾನ್ಯವಾಗಿ ಪ್ರತಿದಿನ ಸಂಜೆ 4 ಗಂಟೆಯಿಂದ 7 ಗಂಟೆವರೆಗೆ ಈ ಟವರ್ ಬ್ಲಾಕಿಂಗ್ ಸಿಸ್ಟಂ ಅನ್ನು ಆಫ್ ಮಾಡುತ್ತಾರೆ ಎಂಬುದು ಗೊತ್ತಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ದರ್ಶನ್ ಪ್ರಕರಣ ಬೆಳಕಿಗೆ ಬಂದಾಗ ಖುದ್ದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರು ಭೇಟಿ ನೀಡಿ, ಜೈಲಿನ ಮುಖ್ಯಸ್ಥರು ಸೇರಿ ಎಲ್ಲಾ ಹಂತದ ಅಧಿಕಾರಿಗಳಿಗೆ ತೀವ್ರ ತರಾಟೆಗೆ ತೆಗೆದುಕೊಂಡಿದ್ದರು. ಅಲ್ಲದೆ, ಮುಖ್ಯ ಅಧೀಕ್ಷಕ ಸೇರಿ 10ಕ್ಕೂ ಅಧಿಕಾರಿ- ಸಿಬ್ಬಂದಿಯನ್ನು ಅಮಾನತುಗೊಳಿಸಿದ್ದರು. ಆದರೂ ವಿಲ್ಸನ್ಗಾರ್ಡನ್ ನಾಗ ಮತ್ತು ಸಹಚರರು ರಾಜ ರೋಷವಾಗಿ ಮೊಬೈಲ್ ಬಳಕೆ ಮಾಡುತ್ತಿರುವುದು ಜೈಲಿನ ಮುಖ್ಯ ಅಧೀಕ್ಷಕ ಸೇರಿ ಅಧಿಕಾರಿ-ಸಿಬ್ಬಂದಿಯ ಕರ್ತವ್ಯ ಲೋಪ ಕಂಡು ಬಂದಿದೆ.
ಜೈಲು ವಾರ್ಡನ್, ಅಧಿಕಾರಿಗಳಿಗೆ ನಾಗನಿಂದ ಪ್ರತಿ ವಾರವೂ ಲಂಚ?: ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿಶೀಟರ್ ವಿಲ್ಸನ್ಗಾರ್ಡನ್ ನಾಗ ಜೈಲಿನ ವಾರ್ಡನ್ ನಿಂದ ಮುಖ್ಯ ಅಧೀಕ್ಷಕರವರೆಗೂ ಪ್ರತಿ ವಾರ ಲಂಚ ನೀಡುತ್ತಾನೆ. ಅದನ್ನು ತನ್ನ ಯುವಕರ ಮೂಲಕ ಮೊಬೈಲ್ನಲ್ಲಿ ರೆಕಾರ್ಡ್ ಮಾಡಿಕೊಳ್ಳುತ್ತಾನೆ. ಈ ವಿಡಿಯೋ ತೋರಿಸಿಯೇ ಪರಪ್ಪನ ಅಗ್ರಹಾರ ಜೈಲಿನ ಅಧಿಕಾರಿ-ಸಿಬ್ಬಂದಿಗೆ ಬ್ಲ್ಯಾಕ್ಮೇಲ್ ಮಾಡಿ ತಾನೂ ಸೇರಿ ತನ್ನ ತಂಡಕ್ಕೆ ವಿಶೇಷ ಆತಿಥ್ಯ ಪಡೆದುಕೊಳ್ಳುತ್ತಿದ್ದಾನೆ. ಜತೆಗೆ ಪ್ರತಿವಾರ ಲಂಚ ನೀಡುತ್ತಿದ್ದಾನೆ ಎಂದು ಹೇಳಲಾಗಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.