ಮನೆ ಅಪರಾಧ  ವರದಕ್ಷಿಣೆ ನೀಡಲಿಲ್ಲ ಎಂದು ಪತ್ನಿಯನ್ನು ಹೊಡೆದು ಕೊಂದ ಪತಿ

 ವರದಕ್ಷಿಣೆ ನೀಡಲಿಲ್ಲ ಎಂದು ಪತ್ನಿಯನ್ನು ಹೊಡೆದು ಕೊಂದ ಪತಿ

0

ಅಮ್ರೋಹಾ: ಟಿವಿಎಸ್ ಅಪಾಚೆ ಬೈಕ್ ಮತ್ತು ಮೂರು ಲಕ್ಷ ರೂ. ವರದಕ್ಷಿಣೆ ಬೇಡಿಕೆಯನ್ನು ಈಡೇರಿಸಲಿಲ್ಲ ಎಂಬ ಕಾರಣಕ್ಕೆ ಮಹಿಳೆಯನ್ನು ಪತಿಯೇ ಹೊಡೆದು ಕೊಂದಿರುವ ಘಟನೆ ಉತ್ತರ ಪ್ರದೇಶದ ಅಮ್ರೋಹಾದಲ್ಲಿ ನಡೆದಿದೆ.

Join Our Whatsapp Group

ಬೈಖೇಡ ಗ್ರಾಮದ ಸುಂದರ್ ಎಂಬಾತ ಎರಡು ವರ್ಷಗಳ ಹಿಂದೆ ಮೀನಾ ಎಂಬಾಕೆಯನ್ನು ಮದುವೆಯಾಗಿದ್ದು, ಅಂದಿನಿಂದ ವರದಕ್ಷಿಣೆಗಾಗಿ ಒತ್ತಾಯಿಸುತ್ತಿದ್ದ. ಈ ವಿಚಾರವಾಗಿ ಆತ ಕಿರುಕುಳ ನೀಡುತ್ತಿದ್ದ ಎಂದು ತಂದೆಗೆ ತಿಳಿಸಿದ್ದಳು.

ರಕ್ಷಾಬಂಧನದಿಂದ ಮೀನಾ ಸೊಹರ್ಕಾದಲ್ಲಿರುವ ತನ್ನ ಪೋಷಕರ ಮನೆಯಲ್ಲಿಯೇ ಇದ್ದಳು. ಸುಂದರ್ ಪ್ರತಿದಿನ ಅವಳನ್ನು ಭೇಟಿಯಾಗುತ್ತಿದ್ದನು. ಅಲ್ಲಿಯೇ ಊಟ ಮಾಡುತ್ತಿದ್ದ ಎಂದು ಕುಟುಂಬದ ಸದಸ್ಯರು ಹೇಳಿದರು. ಭಾನುವಾರ ರಾತ್ರಿಯೂ ಅವರನ್ನು ಭೇಟಿ ಮಾಡಿ ತನ್ನ ಮನೆಗೆ ಕರೆ ತಂದಿದ್ದಾನೆ.

ತನ್ನ ಮನೆಯಲ್ಲಿ ವರದಕ್ಷಿಣೆ ವಿಚಾರವಾಗಿ ಆಕೆಯ ಜೊತೆ ಗಲಾಟೆ ಮಾಡಿಕೊಂಡಿದ್ದ. ವರದಕ್ಷಿಣೆ ಕೊಡಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಆಕೆಯ ಮೇಲೆ ದೊಣ್ಣೆಗಳಿಂದ ಹಲ್ಲೆ ನಡೆಸಿ ಕತ್ತು ಹಿಸುಕಿ ಕೊಲೆ ಮಾಡಿ ಸ್ಥಳದಿಂದ ಪರಾರಿಯಾಗಿದ್ದಾನೆ.

ಸ್ಥಳೀಯರು ಪೊಲೀಸರಿಗೆ ಹತ್ಯೆಯ ವಿಚಾರವನ್ನು ತಿಳಿಸಿದ್ದಾರೆ. ಬಳಿಕ ಮಹಿಳೆಯ ಕುಟುಂಬಿಕರು ಠಾಣೆಗೆ ತೆರಳಿ ಆರೋಪಿಯ ಪತ್ತೆಗೆ ಒತ್ತಡ ಹೇರಿದ್ದಾರೆ.

ಆಕೆಯ ತಂದೆ ವಿಜಯ್‌ ಖಡಕ್‌ ಬನ್ಶಿ ಬಳಿಕ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದಾರೆ. ಸುಂದರ್‌, ಆತನ ತಾಯಿ, ಸಹೋದರಿ ಮತ್ತು ಇತರ ನಾಲ್ವರ ವಿರುದ್ದ ದೂರು ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮೀನಾ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಆರೋಪಿಗಳ ಪತ್ತೆಗಾಗಿ ಶೋಧ ಕಾರ್ಯ ನಡೆಸಲಾಗುತ್ತಿದೆ.