ಬೆಂಗಳೂರು: ಕರ್ನಾಟಕದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಸಮಾಲೋಚಕರು, ಕೋ- ಆರ್ಡಿನೇಟರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ವಿಶ್ವ ಬ್ಯಾಂಕ್ ನಿಧಿಯ ಕರ್ನಾಟಕ ಸುಸ್ಥಿರ ಗ್ರಾಮೀಣ ನೀರು ಪೂರೈಕೆ ಕಾರ್ಯಕ್ರಮಕ್ಕಾಗಿ ಈ ಹುದ್ದೆಗಳ ಭರ್ತಿ ನಡೆಸಲಾಗುವುದು. ಒಂದು ವರ್ಷದ ಅವಧಿಗೆ ಗುತ್ತಿಗೆ ಆಧಾರದ ಮೇಲೆ ಈ ನೇಮಕಾತಿ ನಡೆಯಲಿದೆ.
ಉದ್ಯೋಗ ವಿವರ: ಒಟ್ಟು 47 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಹುದ್ದೆ ವಿವರ ಹೀಗಿದೆ.
ಪ್ರೊಕ್ಯೂರ್ಮೆಂಟ್ ಕನ್ಸಲ್ಟಂಟ್ – 9
ಮಾನಿಟರಿಂಗ್ ಅಂಡ್ ಎವಲ್ಯೂಷನ್ ಕನ್ಸಲ್ಟಂಟ್ – 10
ಎನ್ವರ್ಮೆಂಟಲ್ ಕನ್ಸಲ್ಟಂಟ್ – 10
ಸೋಷಿಯಲ್ ಡೆವಲ್ಮೆಂಟ್ ಕನ್ಸಲ್ಟಂಟ್ – 7
ಫೈನಾನ್ಸ್ ಕನ್ಸಲ್ಟಂಟ್ – 11
ರಾಜ್ಯ ವಿವಿಧ ಜಿಲ್ಲೆಗಳಲ್ಲಿ ಈ ಹುದ್ದೆಗಳ ನೇಮಕಾತಿ ನಡೆಯಲಿದೆ. ಅಧಿಸೂಚನೆಯಲ್ಲಿ ಉಲ್ಲೇಖಿಸಿದ ಜಿಲ್ಲೆಗಳಲ್ಲಿ ಉದ್ಯೋಗ ನಿರ್ವಹಣೆ ಆಯ್ಕೆಗೆ 3 ಜಿಲ್ಲೆಗಳನ್ನು ಆಯ್ಕೆ ಮಾಡಬಹುದಾಗಿದೆ.
ವಿದ್ಯಾರ್ಹತೆ: ಅಭ್ಯರ್ಥಿಗಳು ಸಂಬಂಧಿಸಿದ ಕ್ಷೇತ್ರದಲ್ಲಿ ಅಧಿಸೂಚನೆಯಲ್ಲಿ ತಿಳಿಸಿರುವಂತೆ ಪದವಿಯನ್ನು ಹೊಂದಿರಬೇಕಿದೆ. ಜೊತೆಗೆ ಸಂಬಂಧಿಸಿದ ಕ್ಷೇತ್ರದಲ್ಲಿ 2 ವರ್ಷ ಹುದ್ದೆ ನಿರ್ವಹಿಸಿರುವ ಅನುಭವ ಹೊಂದಿರಬೇಕು.
ವೇತನ: ಈ ಹುದ್ದೆಗೆ ಮಾಸಿಕ ₹ 50,000 ದಿಂದ 75,000 ವರೆಗೆ ವೇತನ ನಿಗದಿಸಲಾಗಿದೆ.
ವಯೋಮಿತಿ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 45 ವರ್ಷ ವಯೋಮಿತಿ ಮೀರಿರಬಾರದು.
ಅಭ್ಯರ್ಥಿಗಳು ಕನ್ನಡವನ್ನು ಸ್ಪಷ್ಟವಾಗಿ ಓದಲು, ಬರೆಯಲು ಮತ್ತು ಮಾತನಾಡಲು ಬರಬೇಕು.
ಅರ್ಜಿ ಸಲ್ಲಿಕೆ: ಅಭ್ಯರ್ಥಿಗಳು ಈ ಹುದ್ದೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಸೆಪ್ಟೆಂಬರ್ 23 ಕೊನೆಯ ದಿನವಾಗಿದೆ.
ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿಗೆ swachhamevajayate.org ಭೇಟಿ ನೀಡಬಹುದಾಗಿದೆ.
HALನಲ್ಲಿ ಅಪ್ರೆಂಟಿಸ್ ಹುದ್ದೆ: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (ಹೆಚ್ಎಎಲ್)ನಲ್ಲಿ ಟ್ರೇಡ್ ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಗೌರವಧನದ ಮೇಲೆ 12 ತಿಂಗಳ ಅವಧಿಗೆ ನೇಮಕಾತಿ ನಡೆಯಲಿದೆ.
ಅಭ್ಯರ್ಥಿಗಳು ಐಟಿಐ ಪೂರ್ಣಗೊಳಿಸಿರಬೇಕು. ಮೆರಿಟ್ ಮೇಲೆ ಈ ಹುದ್ದೆ ಆಯ್ಕೆ ನಡೆಯಲಿದೆ. ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆ ಜೊತೆಗೆ ನೀಡಲಾಗಿರುವ ನಿಗದಿತ ಅರ್ಜಿಯನ್ನು ಭರ್ತಿ ಮಾಡಿ, ಅಗತ್ಯ ಪ್ರಮಾಣ ಪತ್ರಗಳೊಂದಿಗೆ ಟೆಕ್ನಿಕಲ್ ಟ್ರೈನಿಂಗ್ ಇನ್ಸಟಿಟ್ಯೂಟ್, ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್, ಸುರಂಜನ್ ದಾಸ್ ರಸ್ತೆ, ವಿಮಾನಪುರ ಪೋಸ್ಟ್, ಬೆಂಗಳೂರು -560017 ಇಲ್ಲಿಗೆ ಕಳುಹಿಸಬೇಕು.
ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಅಕ್ಟೋಬರ್ 19. ಈ ಕುರಿತು ಹೆಚ್ಚಿನ ಮಾಹಿತಿಗೆ hal-india.co.in ಭೇಟಿ ನೀಡಿ.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.