ದೊಡ್ಡಬಳ್ಳಾಪುರ: ಕರ್ನಾಟಕದಲ್ಲಿ ತುರ್ತು ಪರಿಸ್ಥಿತಿ ಸೃಷ್ಟಿಯಾಗಿದ್ದು, ಪೊಲೀಸರನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ದೂರಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಾ.ಕೆ.ಸುಧಾಕರ್ ಅವರು ಕೋವಿಡ್ ಸಂದರ್ಭದಲ್ಲಿ ಕೆಲಸ ಮಾಡಿದ್ದರು. ಆ ಸಮಯದಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಮನೆಯಲ್ಲೇ ಕುಳಿತಿದ್ದರು. ಆದರೆ ಈಗ ಅವರ ವಿರುದ್ಧ ಕೋವಿಡ್ ಹಗರಣದ ಆರೋಪ ಹೊರಿಸಲಾಗಿದೆ. ರಾಜ್ಯಪಾಲರ ಮೇಲೆ ಸರ್ಕಾರ ಸೇಡು ತೀರಿಸಿಕೊಳ್ಳಲು ಸರ್ಕಾರ ಮುಂದಾಗಿದ್ದು, ವಿಶ್ವವಿದ್ಯಾಲಯದಲ್ಲಿ ಅವರ ಅಧಿಕಾರ ಕಿತ್ತುಕೊಳ್ಳಲು ಪ್ರಯತ್ನ ನಡೆಸಲಾಗಿದೆ. ಕಾಂಗ್ರೆಸ್ ಶಾಶ್ವತವಾಗಿ ಅಧಿಕಾರದಲ್ಲಿ ಇರಲಿದೆ ಎಂಬ ಚಿಂತನೆಯಲ್ಲಿದೆ. ಕಾಂಗ್ರೆಸ್ ಮಾಡುವ ಪಾಪಕ್ಕೆ ಮುಂದಿನ ದಿನಗಳಲ್ಲಿ ಪಶ್ಚಾತ್ತಾಪ ಪಡಬೇಕಾಗುತ್ತದೆ ಎಂದು ಹೇಳಿದರು.
ಶಾಸಕ ಮುನಿರತ್ನ ಬಿಜೆಪಿಗೆ ಮುನ್ನ ಕಾಂಗ್ರೆಸ್ನಲ್ಲೇ ಇದ್ದರು. ಅವರು ಕಾಂಗ್ರೆಸ್ನಲ್ಲಿದ್ದಾಗ ಕಾಂಗ್ರೆಸ್ ನಾಯಕರೇ ಅವರನ್ನು ಬೆಂಬಲಿಸಿದ್ದರು. ರಾಯಚೂರಿನಲ್ಲಿ ಪಿಎಸ್ಐ ಕುಟುಂಬದವರು 16 ಗಂಟೆ ಬೀದಿಯಲ್ಲಿ ಕುಳಿತು ಪ್ರತಿಭಟನೆ ಮಾಡಿದಾಗ ಶಾಸಕರನ್ನು ಬಂಧಿಸಲಿಲ್ಲ. ಕೃಷಿ ಅಧಿಕಾರಿ ವೀಡಿಯೋ ಮಾಡಿ ಕಳುಹಿಸಿದಾಗ ಸಚಿವರನ್ನು ಬಂಧನ ಮಾಡಿಲ್ಲ. ಮುನಿರತ್ನ ತಪ್ಪು ಮಾಡಿದ್ದರೆ ಅವರ ವಿರುದ್ಧ ಕ್ರಮ ಕೈಗೊಳ್ಳಲಿ. ಅದನ್ನು ಬಿಟ್ಟು ಏಕಾಏಕಿ ಬಂಧಿಸಿದ್ದು ಏಕೆ ಎಂದು ಪ್ರಶ್ನೆ ಮಾಡಿದರು.
ಸಿದ್ದರಾಮಯ್ಯ ಈ ಹಿಂದೆ ಸಿಎಂ ಆಗಿದ್ದಾಗ ಅವರ ವಿರುದ್ಧ 65 ಪ್ರಕರಣಗಳಿತ್ತು. ಆದರೆ ಅವರು ಮಾತ್ರ ಶುದ್ಧ ಎನ್ನಲಾಗುತ್ತದೆ. ಬಿಜೆಪಿಯವರು ಸಂವಿಧಾನದ ಬಗ್ಗೆ ಸಣ್ಣ ಮಾತು ಹೇಳಿದ್ದಕ್ಕೆ, ಅದನ್ನೇ ದೊಡ್ಡ ಸಮಸ್ಯೆ ಎಂಬಂತೆ ಬಿಂಬಿಸಲಾಗಿದೆ. ರಾಹುಲ್ ಗಾಂಧಿ ವಿದೇಶಕ್ಕೆ ಹೋಗಿ ಮೀಸಲು ಬದಲಾಯಿಸುವ ಬಗ್ಗೆ ಮಾತನಾಡಿದ್ದರು. ಈ ಕುರಿತು ಕಾಂಗ್ರೆಸ್ ಪ್ರತಿಭಟನೆ ಮಾಡಲಿ ಎಂದರು.
ಸೋಲುವ ಭಯ
ಜವಹರಲಾಲ್ ನೆಹರೂ ಅಧಿಕಾರದಲ್ಲಿದ್ದಾಗ ಏಕಕಾಲಕ್ಕೆ ಚುನಾವಣೆ ನಡೆಯುತ್ತಿತ್ತು. ಈಗ ಅದನ್ನೇ ಎನ್ಡಿಎ ಸರ್ಕಾರ ಮಾಡಲು ಹೊರಟರೆ ತಪ್ಪು ಎನ್ನಲಾಗುತ್ತಿದೆ. ಇಡೀ ವರ್ಷ ಚುನಾವಣೆ ನಡೆಯುವುದನ್ನು ತಪ್ಪಿಸಲು ಒಂದೇ ಬಾರಿಗೆ ಚುನಾವಣೆ ನಡೆಸಲು ಕೇಂದ್ರ ಸರ್ಕಾರ ಮುಂದಾಗಿದೆ. ಇದರಿಂದ ಉಳಿತಾಯವಾದ ಹಣವನ್ನು ಅಭಿವೃದ್ಧಿ ಕಾರ್ಯಗಳಿಗೆ ಬಳಸಬಹುದು. ಆದರೆ ಈ ರೀತಿ ಮಾಡಿದರೆ ಸೋಲುತ್ತೇವೆ ಎಂಬ ಭಯ ಕಾಂಗ್ರೆಸ್ಗಿದೆ. ಆದ್ದರಿಂದ ಈ ಹೊಸ ವ್ಯವಸ್ಥೆಯನ್ನು ಕಾಂಗ್ರೆಸ್ ನಾಯಕರು ವಿರೋಧಿಸುತ್ತಿದ್ದಾರೆ ಎಂದರು.
ಬಿಜೆಪಿ ಸದಸ್ಯತ್ವ ಅಭಿಯಾನ
ಬಿಜೆಪಿ ಸದಸ್ಯತ್ವ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದ ಆರ್.ಅಶೋಕ, ಬಿಜೆಪಿ ಅತಿ ಹೆಚ್ಚು ಸದಸ್ಯರನ್ನು ಹೊಂದಿದ್ದು, ಈಗ ಸದಸ್ಯತ್ವ ಅಭಿಯಾನ ಮಾಡಲಾಗುತ್ತಿದೆ. ಬಿಜೆಪಿ ಪಕ್ಷ ಎಂದರೆ ದೇವಾಲಯ ಇದ್ದಂತೆ. ಇಲ್ಲಿ ಕಾರ್ಯಕರ್ತರಿಗೆ ಹೆಚ್ಚು ಅವಕಾಶವಿದೆ. ಎಲ್ಲ ಕಾರ್ಯಕರ್ತರು ನಿಗದಿತ ಗುರಿ ಇಟ್ಟುಕೊಂಡು ಜನರನ್ನು ಪಕ್ಷಕ್ಕೆ ಸೇರಿಸಬೇಕು. ಅನೇಕ ಸಲ ಕಾರ್ಯಕರ್ತರ ಕುಟುಂಬದವರೇ ಸದಸ್ಯರಾಗಿ ಪಕ್ಷಕ್ಕೆ ಸೇರಿರುವುದಿಲ್ಲ. ಅಂತಹ ಕಡೆ ಗಮನಿಸಿ ಪಕ್ಷಕ್ಕೆ ಹೆಸರು ನೋಂದಾಯಿಸಬೇಕು ಎಂದು ಕಿವಿಮಾತು ಹೇಳಿದರು.
ಹೊಸಕೆರೆಹಳ್ಳಿಯ ವಿಶೇಷ ಚೇತನ ಕಾರ್ಯಕರ್ತೆಯೊಬ್ಬರು ಒಂದೇ ದಿನದಲ್ಲಿ 940 ಜನರನ್ನು ಸದಸ್ಯರಾಗಿ ಪಕ್ಷಕ್ಕೆ ಸೇರಿಸಿದ್ದಾರೆ. ಅವರು ಒಂದು ಸಾವಿರ ಗುರಿ ತಲುಪುವುದಾಗಿ ಹೇಳಿದ್ದರು. ಇದನ್ನು ಸ್ಪೂರ್ತಿಯಾಗಿ ತೆಗೆದುಕೊಂಡು ಸದಸ್ಯತ್ವ ಅಭಿಯಾನ ಮಾಡಬೇಕು. ಬೂತ್ ಮಟ್ಟದಲ್ಲಿ ಐದು ಜನರನ್ನು ಸದಸ್ಯತ್ವ ಅಭಿಯಾನಕ್ಕಾಗಿ ಕೆಲಸ ಮಾಡಲು ನಿಯೋಜಿಸಬೇಕು. ಈ ಮೂಲಕ ಕೆಲಸವನ್ನು ವಿಂಗಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.