ಮನೆ ಅಪರಾಧ ಚಾಮರಾಜನಗರ: ಚಿರತೆ ಓಡಿಸಲು ಹಾರಿಸಿದ ಗುಂಡು ತಗುಲಿ ನಾಲ್ವರಿಗೆ ಗಾಯ

ಚಾಮರಾಜನಗರ: ಚಿರತೆ ಓಡಿಸಲು ಹಾರಿಸಿದ ಗುಂಡು ತಗುಲಿ ನಾಲ್ವರಿಗೆ ಗಾಯ

0

ಚಾಮರಾಜನಗರ, ಸೆ.20:  ಚಿರತೆ   ಓಡಿಸಲು ಹಾರಿಸಿದ ಗುಂಡು ತಗುಲಿ ನಾಲ್ವರು ಗಾಯಗೊಂಡಿರುವ ಘಟನೆ ಯಳಂದೂರು ತಾಲೂಕಿನ ಮಲ್ಲಿಗೆಹಳ್ಳಿ ಗ್ರಾಮದಲ್ಲಿ ನಡೆದಿದೆ.

Join Our Whatsapp Group

ರೈತರ ಜಮೀನಿನಲ್ಲಿ ಅಡಗಿದ್ದ ಚಿರತೆ ಹಿಡಿಯಲು ಅರಣ್ಯ ಸಿಬ್ಬಂದಿ ಹೋಗಿದ್ದವರು. ಅರಣ್ಯ ಸಿಬ್ಬಂದಿ ಜೊತೆಗೆ ಗ್ರಾಮಸ್ಥರು ಕೂಡ ತೆರಳಿದ್ದರು. ಈ ವೇಳೆ ಚಿರತೆ ಅರಣ್ಯ ಸಿಬ್ಬಂದಿ ಮೇಲೆ ಮಾಡಲು ಯತ್ನಿಸಿದೆ. ಅರಣ್ಯ ಸಿಬ್ಬಂದಿ ಕೂಡಲೆ ಚಿರತೆ ಓಡಿಸಲು ಗುಂಡು ಹಾರಿಸಿದ್ದಾರೆ. ಈ ಗುಂಡು ತಗುಲಿ ಮದ್ದೂರಿನ ರವಿ, ಶಿವು, ರಂಗಸ್ವಾಮಿ, ಮೂರ್ತಿ ಎಂಬುವರು ಗಾಯಗೊಂಡಿದ್ದಾರೆ.

ಗಾಯಗೊಂಡವರನ್ನು ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದೇ ವೇಳೆ ಗಾಯವಾಗಿದ್ದ ಚಿರತೆ ಸ್ಥಳದಲ್ಲೇ ಮೃತಪಟ್ಟಿದೆ. ಅರಣ್ಯ ಸಿಬ್ಬಂದಿ ಆತ್ಮರಕ್ಷಣೆಗೆ ದೊಣ್ಣೆಯಿಂದಲೂ ಹೊಡೆದಾಗ ಚಿರತೆ ಸತ್ತಿರುವ ಶಂಕೆ ವ್ಯಕ್ತವಾಗಿದೆ.