ಬೆಂಗಳೂರು: ನೆರೆಯ ರಾಜ್ಯಗಳು ಒಡ್ಡುತ್ತಿರುವ ಸವಾಲಿನ ನಡುವೆಯೂ ನಮ್ಮ ರಾಜ್ಯ ಬಂಡವಾಳ ಹೂಡಿಕೆಯಲ್ಲಿ ಮುಂಚೂಣಿಯಲ್ಲಿದ್ದು, ಹೊಸ ಉದ್ದಿಮೆಗಳ ಸ್ಥಾಪನೆಗೆ ನಮ್ಮ ಸರಕಾರ ಎಲ್ಲಾ ರೀತಿಯಲ್ಲೂ ಸಹಕಾರ ನೀಡಲಿದೆ ಎಂದು ಗೃಹ ಸಚಿವರಾದ ಜಿ ಪರಮೇಶ್ವರ ಹೇಳಿದರು.
ಇಂದು ಎಫ್ಕೆಸಿಸಿಐ ಸಂಸ್ಥಾಪಕರ ದಿನಾಚರಣೆಯಲ್ಲಿ ಭಾಗವಹಿಸಿ ಭಾರತ ರತ್ನ ಸರ್ ಎಂ ವಿಶ್ವೇಶ್ವರಯ್ಯ ಮೆಮೋರಿಯಲ್ ಪ್ರಶಸ್ತಿಯನ್ನು ಪ್ರಧಾನ ಮಾಡಿ ಅವರು ಮಾತನಾಡಿದರು. ಇಂದು ಕರ್ನಾಟಕ ರಾಜ್ಯ ಹಾಗೂ ಭಾರತ ದೇಶ ವಿಶ್ವದ ಆರ್ಥಿಕ ಹಾಗೂ ಕೈಗಾರಿಕಾ ಭೂಪಟದಲ್ಲಿ ತಮ್ಮದೇ ಆದ ವಿಶೇಷ ಸ್ಥಾನ ಪಡೆದುಕೊಂಡಿವೆ. ತೃತೀಯ ಹಂತದ ದೇಶಗಳಲ್ಲಿ ಗುರುತಿಸಲ್ಪಡುತ್ತಿದ್ದ ಭಾರತದ ದೇಶ ಇಂದು ವಿಶ್ವದಲ್ಲಿ ವೇಗವಾಗಿ ಬೆಳೆಯುತ್ತಿರುವ ಮೂರನೇ ಆರ್ಥಿಕತೆಯಾಗಿ ಬೆಳೆದು ನಿಂತಿದೆ. ನಮ್ಮ ದೇಶದಲ್ಲಿ ಸಿಗುವಂತಹ ಉತ್ತಮ ಕೌಶಲ್ಯ ಹೊಂದಿರುವ ಮಾನವ ಸಂಪನ್ಮೂಲ ಬೇರೆ ಯಾವುದೇ ದೇಶದಲ್ಲೂ ದೊರೆಯುವುದಿಲ್ಲ. ಭಾರತ ದೇಶ ಅದರಲ್ಲೂ ಕರ್ನಾಟಕ ರಾಜ್ಯ ಕೈಗಾರಿಕೆಗಳ ಅಭಿವೃದ್ದಿಗೆ ನೀಡುತ್ತಿರುವ ಕೊಡುಗೆ ಅಪಾರ. ಎಫ್ಕೆಸಿಸಿಐ ನಂತಹ ಸಂಸ್ಥೆಯನ್ನು ಸ್ಥಾಪಿಸುವ ಮೂಲಕ ಸರ್ ಎಂ ವಿಶ್ವೇಶ್ವರಯ್ಯ ಉತ್ತಮ ಬುನಾದಿಯನ್ನು ಹಾಕಿದ್ದಾರೆ ಎಂದರು.
ಕರ್ನಾಟಕ ರಾಜ್ಯ ಕೈಗಾರಿಕಾ ರಂಗದಲ್ಲಿ ವೇಗವಾಗಿ ಬೆಳೆಯುತ್ತಿದೆ, ದೇಶದ ಶೇಕಡಾ 50 ರಷ್ಟು ಸಾಫ್ಟೇವರ್ ಬೆಂಗಳೂರಿನಲ್ಲಿ ತಯಾರಾಗುತ್ತದೆ. ನಾವು ಯಾವುದೇ ಕ್ಷೇತ್ರದಲ್ಲೂ ಕಡಿಮೆಯಿಲ್ಲ. ಇದು ಸರ್ ಎಂ ವಿ ಅವರ ದೂರದೃಷ್ಟಿ. ಕೈಗಾರಿಕೆಗಳ ಸ್ಥಾಪನೆಗೆ ಕರ್ನಾಟಕ ರಾಜ್ಯ ಸರಕಾರ ಬಹಳಷ್ಟು ಉತ್ತಮ ಸೌಲಭ್ಯಗಳನ್ನು ಒದಗಿಸುತ್ತಾ ಬಂದಿದೆ. ಆದರೂ, ನಮ್ಮ ನೆರೆಯ ರಾಜ್ಯಗಳೂ ನೀಡುತ್ತಿರುವ ಸವಾಲನ್ನ ಸಮರ್ಥವಾಗಿ ನಿಭಾಯಿಸಬೇಕಾಗಿದೆ. ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಮಹರಾಷ್ಟ್ರದಂತಹ ರಾಜ್ಯಗಳು ನೀಡುತ್ತಿರುವ ಸವಾಲನ್ನು ನಿಭಾಯಿಸುವ ನಿಟ್ಟಿನಲ್ಲಿ ನಮ್ಮ ಸರಕಾರ ಯಾವಾಗಲೂ ಸಿದ್ದವಾಗಿದೆ. ರಾಜ್ಯದಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ನಮ್ಮ ಸರಕಾರ ಎಲ್ಲಾ ಸಹಕಾರ ನೀಡಲಿದೆ. ನಮ್ಮ ರಾಜ್ಯದಲ್ಲಿ ಬಂಡವಾಳ ಹೂಡಿಕೆ ಹೆಚ್ಚಾಗಬೇಕು, ಯುವ ಜನರಿಗೆ ಉದ್ಯೋಗಾಕಾಶ ಹೆಚ್ಚಾಗಬೇಕು ಹಾಗೆಯೇ ಯುವ ಜನರು ಉದ್ದಿಮೆಗಳನ್ನು ಪ್ರಾರಂಭಿಸಲು ಮುಂದಾಗುವಂತಾಗಬೇಕು ಎನ್ನುವುದು ನಮ್ಮ ಸರಕಾರದ ಗುರಿಯಾಗಿದೆ ಎಂದರು.
ತುಮುಕೂರಿನಲ್ಲಿ ಏಷಿಯಾದ ಅತಿದೊಡ್ಡ ಕೈಗಾರಿಕಾ ಹಬ್ ನಿರ್ಮಾಣವಾಗುತ್ತಿದೆ. 20 ಸಾವಿರ ಏಕರೆಗಳ ಕೈಗಾರಿಕಾ ಭೂಮಿ ಸಿದ್ದವಾಗಿದ್ದು ಹೆಚ್ಎಲ್ ನಂತಹ ಪ್ರಮುಖ ಕೈಗಾರಿಕೆಗಳು ಸ್ಥಾಪನೆಯಾಗಿವೆ. ಬೆಂಗಳೂರನ್ನು ಹೊರತುಪಡಿಸಿ ಬೇರೆ ಪಟ್ಟಣಗಳತ್ತ ಉದ್ಯಮಿಗಳು ಗನಮ ಹರಿಸಬೇಕು. ಸಣ್ಣ ಉದ್ಯಮದಿಂದ ಪ್ರಾರಂಭವಾದ ಭಾಗ್ಯಲಕ್ಷ್ಮಿ ಇಂದು ರಾಜ್ಯದ ಮನೆಮಾತಾಗಿದೆ. ಇಂತಹ ಕೈಗಾರಿಕೆಯ ಸ್ಥಾಪನೆಯ ಹಿಂದೆ ಇರುವಂತಹ ವ್ಯಕ್ತಿಗೆ ಈ ಪ್ರಶಸ್ತಿ ದೊರೆತಿರುವುದು ಬಹಳ ಸಂತಸದ ವಿಷಯವಾಗಿದೆ ಎಂದರು.
ಎಫ್ಕೆಸಿಸಿಐ ಅಧ್ಯಕ್ಷರಾದ ರಮೇಶ್ ಚಂದ್ರ ಲಹೋಟಿ ಮಾತನಾಡಿ, 108 ವರ್ಷಗಳ ಇತಿಹಾಸವನ್ನು ನಮ್ಮ ಸಂಸ್ಥೆ ಹೊಂದಿದೆ. ಸರ್ ಎಂ ವಿ ಅವರು ಸ್ಥಾಪನೆ ಮಾಡಿದ ಸಂಸ್ಥೆ ಕಳೆದ ಶತಮಾನದಲ್ಲಿ ರಾಜ್ಯದ ಕೈಗಾರಿಕಾ ಕ್ಷೇತ್ರದ ಅಭಿವೃದ್ದಿಗೆ ವಿಶೇಷ ಕೊಡುಗೆ ನೀಡಿದೆ. ರಾಜ್ಯದ ಕೈಗಾರಿಕಾ ಕ್ಷೇತ್ರವನ್ನು ರೂಪಿಸುವಲ್ಲಿ ಮುಂಚೂಣಿಯಲ್ಲಿದೆ ಎಂದರು.
ಕಾರ್ಯಕ್ರಮದಲ್ಲಿ ಎಫ್ಕೆಸಿಸಿಐ ನಿಯೋಜಿತ ಅಧ್ಯಕ್ಷರಾದ ಎಂ.ಜಿ ಬಾಲಕೃಷ್ಣ, ಹಿರಿಯ ಉಪಾಧ್ಯಕ್ಷರಾದ ಉಮಾ ರೆಡ್ಡಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಕ್ಯಾಬಿನೆಟ್ ಸೆಕ್ರೆಟೇರಿಯೇಟ್ ನಲ್ಲಿ 160 ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳು
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.