ಮನೆ ರಾಜಕೀಯ ಬೆಂಗಳೂರು: ಬಿಜೆಪಿ ಜಿಲ್ಲಾ ಪ್ರಕೋಷ್ಠಗಳ ಸಮಾವೇಶ

ಬೆಂಗಳೂರು: ಬಿಜೆಪಿ ಜಿಲ್ಲಾ ಪ್ರಕೋಷ್ಠಗಳ ಸಮಾವೇಶ

0

ಬೆಂಗಳೂರು( Bengaluru)- ಭಾರತೀಯ ಜನತಾ ಪಕ್ಷ ಬೆಂಗಳೂರು ಉತ್ತರ ಜಿಲ್ಲೆಯ ಜಿಲ್ಲಾ ಪ್ರಕೋಷ್ಠಗಳ ಸಮಾವೇಶವನ್ನು ಹೆಬ್ಬಾಳದ ಭದ್ರಪ್ಪ ಲೇಔಟ್ ನ ಜಿ.ಆರ್ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಕೆ.ಅರ್.ಪುರ ಶಾಸಕರು ಆದ ನಗರಾಭಿವೃದ್ಧಿ ಸಚಿವರಾದ ಶ್ರೀ ಬಿ.ಎ.ಬಸವರಾಜ(ಬೈರತಿ) ಅವರು ಇಂದು ಬೆಳಗ್ಗೆ ಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಿದರು.

ರಾಜ್ಯ ಪ್ರಕೋಷ್ಠಗಳ ಸಂಯೋಜಕರಾದ ಶ್ರೀ ಭಾನಿಪ್ರಕಾಶ್, ಬೆಂಗಳೂರು ವಿಭಾಗ ಪ್ರಭಾರಿ ಹಾಗೂ ವಿಧಾನ ಪರಿಷತ್ ಸದಸ್ಯರಾದ ಶ್ರೀ ಹೆಚ್.ಎಸ್‌. ಗೋಪಿನಾಥ್ ರೆಡ್ಡಿ, ನೂತನವಾಗಿ ವಿಧಾನ ಪರಿಷತ್ತಿಗೆ ಆಯ್ಕೆಯಾದ ಶ್ರೀ ಎಸ್.ಕೇಶವ ಪ್ರಸಾದ್, ಜಿಲ್ಲಾಧ್ಯಕ್ಷರಾದ ಶ್ರೀ ಬಿ.ನಾರಾಯಣ ಸೇರಿದಂತೆ ‌ಜಿಲ್ಲಾ ಮತ್ತು ಮಂಡಲ ಪ್ರಕೋಷ್ಠಗಳ ಸಂಚಾಲಕರು, ಸಹ-ಸಂಚಾಲಕರು ಹಾಗೂ ಅಪಾರ ಸಂಖ್ಯೆಯ ಸದಸ್ಯರು ಉಪಸ್ಥಿತರಿದ್ದರು.