ಮನೆ ಕಾನೂನು ದರ್ಶನ್ ಜಾಮೀನು ಅರ್ಜಿ ವಿಚಾರಣೆ ಅ.4ಕ್ಕೆ ಮುಂದೂಡಿಕೆ

ದರ್ಶನ್ ಜಾಮೀನು ಅರ್ಜಿ ವಿಚಾರಣೆ ಅ.4ಕ್ಕೆ ಮುಂದೂಡಿಕೆ

0

ಆದಷ್ಟು ಬೇಗ ದರ್ಶನ್​ ಅವರಿಗೆ ಜಾಮೀನು ಸಿಗಲಿ ಅಂತ ಫ್ಯಾನ್ಸ್​ ಬಯಸುತ್ತಿದ್ದಾರೆ. ಆದರೆ ಅದು ಸಾಧ್ಯವಾಗುತ್ತಿಲ್ಲ. ಬಳ್ಳಾರಿ ಜೈಲಿನಲ್ಲಿ ಕಂಬಿ ಎಣಿಸುತ್ತಿರುವ ದರ್ಶನ್ ​ಗೆ ಇಂದು (ಸೆಪ್ಟೆಂಬರ್​ 30) ಬೇಲ್​ ಸಿಗಬಹುದು ಎಂದು ಆಪ್ತರು ನಿರೀಕ್ಷಿಸಿದ್ದರು.

Join Our Whatsapp Group

ಆದರೆ ಅವರ ಜಾಮೀನು ಅರ್ಜಿ ವಿಚಾರಣೆ ದಿನಾಂಕವನ್ನು ಮುಂದೂಡಲಾಗಿದೆ. ಅಕ್ಟೋಬರ್​ 4ರಂದು ಬೇಲ್​ ಅರ್ಜಿ ವಿಚಾರಣೆ ನಡೆಯಲಿದೆ. ವಾದ ಮಂಡನೆಗೆ ಕಾಲಾವಕಾಶ ಬೇಕು ಎಂದು ದರ್ಶನ್​ ಪರ ವಕೀಲರು ಮನವಿ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ 57ನೇ ಸಿಟಿ ಸಿವಿಲ್ ಕೋರ್ಟ್ ಅರ್ಜಿ ವಿಚಾರಣೆಯನ್ನು ಮುಂದೂಡಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ಅಂತ್ಯವಾಗಿದೆ. ಚಾರ್ಜ್​ ಶೀಟ್​ ಸಲ್ಲಿಕೆ ಆದ ಬಳಿಕ ಜಾಮೀನಿಗಾಗಿ ಅರ್ಜಿ ಸಲ್ಲಿಸಲಾಯಿತು. ಕೇಸ್ ​ಗೆ ಸಂಬಂಧಿಸಿದಂತೆ ಕೆಲವು ಅನುಮಾನಗಳು ಇದ್ದಿದ್ದರಿಂದ ದರ್ಶನ್ ಪರ ವಕೀಲರು ಬಳ್ಳಾರಿ ಜೈಲಿಗೆ ಭೇಟಿ ನೀಡಿ ಮಾತುಕಥೆ ನಡೆಸಿ ಬಂದಿದ್ದರು. ಈಗ ವಾದಮಂಡನೆಗೆ ಕಾಲಾವಕಾಶ ಬೇಕು ಎಂದು ದರ್ಶನ್ ಪರ ವಕೀಲ ಸುನೀಲ್ ಅವರು ಕೋರಿದ್ದಾರೆ.

ಸೆಷನ್ಸ್​ ನ್ಯಾಯಾಲಯದಲ್ಲೇ ದರ್ಶನ್​ಗೆ ಜಾಮೀನು ಸಿಗಲಿದೆ ಎಂದು ದರ್ಶನ್​ ಪರ ವಕೀಲರು ಇತ್ತೀಚೆಗೆ ಭರವಸೆ ವ್ಯಕ್ತಪಡಿಸಿದ್ದರು. ಒಂದು ವೇಳೆ ಸೆಷನ್ಸ್​ ಕೋರ್ಟ್ ​ನಲ್ಲಿ ಬೇಲ್ ಸಿಗದಿದ್ದರೆ ಹೈಕೋರ್ಟ್​​ಗೆ ಅರ್ಜಿ ಸಲ್ಲಿಸಲಾಗುವುದು. ದರ್ಶನ್​ಗೆ ಜಾಮೀನು ಕೊಡಿಸಲು ಪತ್ನಿ ವಿಜಯಲಕ್ಷ್ಮಿ ಅವರು ಕಷ್ಟಪಡುತ್ತಿದ್ದಾರೆ. ದರ್ಶನ್​ ನಟಿಸಬೇಕಿದ್ದ ಸಿನಿಮಾಗಳ ಕೆಲಸಗಳು ನಿಂತಲ್ಲೇ ನಿಂತಿವೆ. ಇತ್ತೀಚೆಗೆ ‘ಡೆವಿಲ್​: ದಿ ಹೀರೋ’ ಸಿನಿಮಾ ತಂಡದವರು ಬಳ್ಳಾರಿ ಜೈಲಿಗೆ ಹೋಗಿ ಬಂದಿದ್ದರು.

ಇದೇ ಪ್ರಕರಣದಲ್ಲಿ ಆರೋಪಿಗಳಾದ ಕೇಶವಮೂರ್ತಿ, ಕಾರ್ತಿಕ್ ಹಾಗೂ ನಿಖಿಲ್ ನಾಯಕ್ ತುಮಕೂರು ಜೈಲಿನಲ್ಲಿ ಇದ್ದಾರೆ. ಈ ಮೂವರಿಗೆ ಒಂದು ವಾರದ ಹಿಂದೆಯೇ ಜಾಮೀನು ನೀಡಲಾಗಿತ್ತು. ಆದರೆ ಇಷ್ಟು ದಿನ ಕಳೆದರೂ ಬಿಡುಗಡೆ ಭಾಗ್ಯ ಸಿಕ್ಕಿಲ್ಲ. ಜಾಮೀನಿಗೆ ಸಂಬಂಧಿಸಿದ ಕಾನೂನು ಪ್ರಕ್ರಿಯೆ ಮುಗಿಯದ ಹಿನ್ನೆಲೆಯಲ್ಲಿ ಈ ಮೂವರು ಇನ್ನೂ ಕೂಡ ಜೈಲಿನಲ್ಲೇ ಕಾಲ ಕಳೆಯುತ್ತಿದ್ದಾರೆ. ಬಿಡುಗಡೆ ಮಾಡಲು ಶ್ಯೂರಿಟಿ ಸಮಸ್ಯೆ ಆಗುತ್ತಿದೆ ಎನ್ನಲಾಗಿದೆ.